ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಶಾಂತಿಪಾಲಕರನ್ನು ಶ್ಲಾಘಿಸಿದ ವಿಶ್ವಸಂಸ್ಥೆ

Last Updated 16 ಜೂನ್ 2019, 19:45 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ದಕ್ಷಿಣ ಸುಡಾನ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಭಾರತದ ಶಾಂತಿಪಾಲಕರ ಕಾರ್ಯವನ್ನು ವಿಶ್ವಸಂಸ್ಥೆ ಪ್ರಶಂಸಿಸಿದೆ.

ವಿಶ್ವಸಂಸ್ಥೆಯ ದಕ್ಷಿಣ ಸುಡಾನ್‌ ಕಾರ್ಯಕ್ರಮದ (ಯುಎನ್‌ಎಂಐಎಸ್‌ಎಸ್) ಭಾಗವಾಗಿ ರಸ್ತೆ ನಿರ್ಮಾಣ ಮತ್ತು ಆಸ್ಪತ್ರೆಗಳಿಗೆ ಸೌರ ದೀಪಗಳನ್ನು ಅಳವಡಿಸುವ ಕಾರ್ಯದಲ್ಲಿ ಭಾರತೀಯ ಸೇನೆಯ ಎಂಜಿನಿಯರ್‌ಗಳು ಭಾಗಿಯಾಗಿದ್ದಾರೆ.

ಗಲಭೆಪೀಡಿತ ಸುಡಾನ್‌ನ ಆರ್ಥಿಕ ಅಭಿವೃದ್ಧಿಗೆ ಸಹಕಾರ ನೀಡಲು ಬಾಂಗ್ಲಾದೇಶ, ಚೀನಾ, ಥಾಯ್ಲೆಂಡ್‌ ಮತ್ತು ದಕ್ಷಿಣ ಕೊರಿಯಾದ ಶಾಂತಿಪಾಲಕರ ಜೊತೆ ಸೇರಿ ಭಾರತದ ಎಂಜಿನಿಯರ್‌ಗಳು 2,500 ಕಿ.ಮೀ. ರಸ್ತೆಗಳನ್ನು ದುರಸ್ತಿಗೊಳಿಸಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

‘ದಕ್ಷಿಣ ಸುಡಾನ್‌ನ ಜನರಿಗಾಗಿ ಸೇವೆ ಸಲ್ಲಿಸಲು ಎಂಜಿನಿಯರ್‌ಗಳನ್ನು ಕಳುಹಿಸಿರುವ ದೇಶಗಳಿಗೆ ಧನ್ಯವಾದಗಳು. ಅಲ್ಲಿನ ಜನರ ಜೀವನ ಮಟ್ಟ ಸುಧಾರಣೆಗಾಗಿ ಶಾಂತಿಪಾಲಕರು ವಹಿಸಿರುವ ಶ್ರಮ ಮಹತ್ವಪೂರ್ಣವಾದದ್ದು’ ಎಂದು ವಿಶ್ವ ಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಅವರ ವಿಶೇ‌ಷ ಪ್ರತಿನಿಧಿ ಡೇವಿಡ್‌ ಶ್ಲಾಘಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT