<p><strong>ಢಾಕಾ:</strong> ಬಾಂಗ್ಲಾದೇಶದಲ್ಲಿ ನಡೆದ ಮೀಸಲಾತಿ ವಿರೋಧಿ ಪ್ರತಿಭಟನೆಯಲ್ಲಿ 650 ಮಂದಿ ಮೃತಪಟ್ಟ ಪ್ರಕರಣದ ಕುರಿತು ತನಿಖೆಯ ರೂಪುರೇಷೆ ಸಿದ್ಧಪಡಿಸಲು ತಜ್ಞರನ್ನು ಒಳಗೊಂಡ ತಂಡವು ಗುರುವಾರ ರಾಜಧಾನಿ ಢಾಕಾಗೆ ಬಂದಿಳಿಯಿತು.</p>.<p>‘ದೌರ್ಜನ್ಯ ಕುರಿತು ತನಿಖೆ ನಡೆಸಲು ಪ್ರಾಥಮಿಕ ಹಂತವಾಗಿ ಈ ತಂಡವು ಬಂದಿಳಿದಿದೆ. ವಿಶ್ವಸಂಸ್ಥೆಯ ಸತ್ಯಶೋಧನಾ ತಂಡ ಬರುವ ಮುನ್ನ ತನಿಖೆಯ ಚೌಕಟ್ಟು ರೂಪಿಸುವ ನಿಟ್ಟಿನಲ್ಲಿ ಬಾಂಗ್ಲಾದೇಶದೊಂದಿಗೆ ಒಪ್ಪಂದವನ್ನು ಎದುರು ನೋಡುತ್ತಿದ್ದೇವೆ’ ಎಂದು ವಿಶ್ವಸಂಸ್ಥೆಯ ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ‘ದಿ ಡೈಲಿ ಸ್ಟಾರ್’ ಸುದ್ದಿಪತ್ರಿಕೆ ವರದಿ ಮಾಡಿದೆ.</p>.<p>‘ಜುಲೈ 1ರಿಂದ ಆಗಸ್ಟ್ 15ರ ತನಕ ನಡೆದ ಎಲ್ಲ ಮಾದರಿಯ ಮಾನವ ಹಕ್ಕುಗಳ ಉಲ್ಲಂಘನೆಯ ಬಗೆಗೆ ಹಾಗೂ ತನಿಖೆಗೆ ಪೂರಕವಾದ ನಿಯಮ–ಷರತ್ತುಗಳ ಕುರಿತಂತೆಯೂ ಮಧ್ಯಂತರ ಸರ್ಕಾರದ ಅಧಿಕಾರಿಗಳ ಜತೆ ಚರ್ಚೆ ನಡೆಸಲಿದೆ.</p>.<p>ಒಂದು ವಾರ ತಂಡವು ಢಾಕಾದಲ್ಲಿಯೇ ಉಳಿಯಲಿದ್ದು, ನಾಗರಿಕ ಸಮಾಜದ ಗುಂಪುಗಳು, ಮಾನವ ಹಕ್ಕು ಉಲ್ಲಂಘನೆಯಿಂದ ನೊಂದ ವ್ಯಕ್ತಿಗಳು, ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದೆ’ ಎಂದು ಅವರು ತಿಳಿಸಿದ್ದಾರೆ.</p>.<p>ತಂಡವು ಬಂದಿರುವುದನ್ನು ಬಾಂಗ್ಲಾದೇಶ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಕೂಡ ಖಚಿತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಬಾಂಗ್ಲಾದೇಶದಲ್ಲಿ ನಡೆದ ಮೀಸಲಾತಿ ವಿರೋಧಿ ಪ್ರತಿಭಟನೆಯಲ್ಲಿ 650 ಮಂದಿ ಮೃತಪಟ್ಟ ಪ್ರಕರಣದ ಕುರಿತು ತನಿಖೆಯ ರೂಪುರೇಷೆ ಸಿದ್ಧಪಡಿಸಲು ತಜ್ಞರನ್ನು ಒಳಗೊಂಡ ತಂಡವು ಗುರುವಾರ ರಾಜಧಾನಿ ಢಾಕಾಗೆ ಬಂದಿಳಿಯಿತು.</p>.<p>‘ದೌರ್ಜನ್ಯ ಕುರಿತು ತನಿಖೆ ನಡೆಸಲು ಪ್ರಾಥಮಿಕ ಹಂತವಾಗಿ ಈ ತಂಡವು ಬಂದಿಳಿದಿದೆ. ವಿಶ್ವಸಂಸ್ಥೆಯ ಸತ್ಯಶೋಧನಾ ತಂಡ ಬರುವ ಮುನ್ನ ತನಿಖೆಯ ಚೌಕಟ್ಟು ರೂಪಿಸುವ ನಿಟ್ಟಿನಲ್ಲಿ ಬಾಂಗ್ಲಾದೇಶದೊಂದಿಗೆ ಒಪ್ಪಂದವನ್ನು ಎದುರು ನೋಡುತ್ತಿದ್ದೇವೆ’ ಎಂದು ವಿಶ್ವಸಂಸ್ಥೆಯ ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ‘ದಿ ಡೈಲಿ ಸ್ಟಾರ್’ ಸುದ್ದಿಪತ್ರಿಕೆ ವರದಿ ಮಾಡಿದೆ.</p>.<p>‘ಜುಲೈ 1ರಿಂದ ಆಗಸ್ಟ್ 15ರ ತನಕ ನಡೆದ ಎಲ್ಲ ಮಾದರಿಯ ಮಾನವ ಹಕ್ಕುಗಳ ಉಲ್ಲಂಘನೆಯ ಬಗೆಗೆ ಹಾಗೂ ತನಿಖೆಗೆ ಪೂರಕವಾದ ನಿಯಮ–ಷರತ್ತುಗಳ ಕುರಿತಂತೆಯೂ ಮಧ್ಯಂತರ ಸರ್ಕಾರದ ಅಧಿಕಾರಿಗಳ ಜತೆ ಚರ್ಚೆ ನಡೆಸಲಿದೆ.</p>.<p>ಒಂದು ವಾರ ತಂಡವು ಢಾಕಾದಲ್ಲಿಯೇ ಉಳಿಯಲಿದ್ದು, ನಾಗರಿಕ ಸಮಾಜದ ಗುಂಪುಗಳು, ಮಾನವ ಹಕ್ಕು ಉಲ್ಲಂಘನೆಯಿಂದ ನೊಂದ ವ್ಯಕ್ತಿಗಳು, ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದೆ’ ಎಂದು ಅವರು ತಿಳಿಸಿದ್ದಾರೆ.</p>.<p>ತಂಡವು ಬಂದಿರುವುದನ್ನು ಬಾಂಗ್ಲಾದೇಶ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಕೂಡ ಖಚಿತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>