<p><strong>ಯಾಂಗೋನ್</strong>: ಮ್ಯಾನ್ಮಾರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಸೇನಾಡಳಿತ ಭದ್ರತಾ ಪಡೆಗಳ ಮೂಲಕ ಅಶ್ರುವಾಯು, ರಬ್ಬರ್ ಬುಲೆಟ್, ಗುಂಡಿನ ದಾಳಿ ನಡೆಸುತ್ತಿದೆ. ಬುಧವಾರ ನಡೆದ ಹಿಂಸಾಚಾರದಲ್ಲಿ 38 ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.</p>.<p>‘ಮ್ಯಾನ್ಮಾರ್ನಲ್ಲಿ ಎಷ್ಟು ಜನ ಸಾವಿಗೀಡಾಗಿದ್ದಾರೆ ಎನ್ನುವುದು ಖಚಿತಪಡಿಸಲು ಸಾಧ್ಯವಾಗಿಲ್ಲ. ಆದರೆ, ಬುಧವಾರ 38 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಅಂತರರಾಷ್ಟ್ರೀಯ ಸಮುದಾಯ ಕಳವಳ ವ್ಯಕ್ತಪಡಿಸಿದೆ’ ವಿಶ್ವಸಂಸ್ಥೆ ಅಧಿಕಾರಿಗಳು ಸ್ವಿಟ್ಜರ್ಲೆಂಡ್ನಲ್ಲಿ ತಿಳಿಸಿದ್ದಾರೆ.</p>.<p>ಕಳೆದ ತಿಂಗಳು ನಡೆದ ಮಿಲಿಟರಿ ಕ್ಷಿಪ್ರ ದಂಗೆ ವಿರೋಧಿಸಿ ದೇಶದಾದ್ಯಂತ ನಾಗರಿಕರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.</p>.<p>ಬಹುತೇಕ ನಗರಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಜನರನ್ನು ಚದುರಿಸಲು ಭದ್ರತಾ ಪಡೆಗಳು ಎಲ್ಲ ರೀತಿಯ ಪ್ರಯತ್ನ ನಡೆಸುತ್ತಿದ್ದು, ಪತ್ರಕರ್ತರು ಸೇರಿದಂತೆ ಸಾವಿರಾರು ಮಂದಿಯನ್ನು ಬಂಧಿಸಲಾಗಿದೆ.</p>.<p>ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆ ಶುಕ್ರವಾರ ನಡೆಯುವ ಸಾಧ್ಯತೆ ಇದೆ. ಮ್ಯಾನ್ಮಾರ್ನಲ್ಲಿ ಬಿಕ್ಕಟ್ಟು ಬಗೆಹರಿಸುವಂತೆ ಅಂತರರಾಷ್ಟ್ರೀಯ ಸಮುದಾಯದ ಮೇಲೆ ಒತ್ತಡವೂ ಹೆಚ್ಚಾಗಿರುವುದರಿಂದ ಭದ್ರತಾ ಮಂಡಳಿ ಸಭೆ ಮಹತ್ವ ಪಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾಂಗೋನ್</strong>: ಮ್ಯಾನ್ಮಾರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಸೇನಾಡಳಿತ ಭದ್ರತಾ ಪಡೆಗಳ ಮೂಲಕ ಅಶ್ರುವಾಯು, ರಬ್ಬರ್ ಬುಲೆಟ್, ಗುಂಡಿನ ದಾಳಿ ನಡೆಸುತ್ತಿದೆ. ಬುಧವಾರ ನಡೆದ ಹಿಂಸಾಚಾರದಲ್ಲಿ 38 ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.</p>.<p>‘ಮ್ಯಾನ್ಮಾರ್ನಲ್ಲಿ ಎಷ್ಟು ಜನ ಸಾವಿಗೀಡಾಗಿದ್ದಾರೆ ಎನ್ನುವುದು ಖಚಿತಪಡಿಸಲು ಸಾಧ್ಯವಾಗಿಲ್ಲ. ಆದರೆ, ಬುಧವಾರ 38 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಅಂತರರಾಷ್ಟ್ರೀಯ ಸಮುದಾಯ ಕಳವಳ ವ್ಯಕ್ತಪಡಿಸಿದೆ’ ವಿಶ್ವಸಂಸ್ಥೆ ಅಧಿಕಾರಿಗಳು ಸ್ವಿಟ್ಜರ್ಲೆಂಡ್ನಲ್ಲಿ ತಿಳಿಸಿದ್ದಾರೆ.</p>.<p>ಕಳೆದ ತಿಂಗಳು ನಡೆದ ಮಿಲಿಟರಿ ಕ್ಷಿಪ್ರ ದಂಗೆ ವಿರೋಧಿಸಿ ದೇಶದಾದ್ಯಂತ ನಾಗರಿಕರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.</p>.<p>ಬಹುತೇಕ ನಗರಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಜನರನ್ನು ಚದುರಿಸಲು ಭದ್ರತಾ ಪಡೆಗಳು ಎಲ್ಲ ರೀತಿಯ ಪ್ರಯತ್ನ ನಡೆಸುತ್ತಿದ್ದು, ಪತ್ರಕರ್ತರು ಸೇರಿದಂತೆ ಸಾವಿರಾರು ಮಂದಿಯನ್ನು ಬಂಧಿಸಲಾಗಿದೆ.</p>.<p>ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆ ಶುಕ್ರವಾರ ನಡೆಯುವ ಸಾಧ್ಯತೆ ಇದೆ. ಮ್ಯಾನ್ಮಾರ್ನಲ್ಲಿ ಬಿಕ್ಕಟ್ಟು ಬಗೆಹರಿಸುವಂತೆ ಅಂತರರಾಷ್ಟ್ರೀಯ ಸಮುದಾಯದ ಮೇಲೆ ಒತ್ತಡವೂ ಹೆಚ್ಚಾಗಿರುವುದರಿಂದ ಭದ್ರತಾ ಮಂಡಳಿ ಸಭೆ ಮಹತ್ವ ಪಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>