<p><strong>ವಿಶ್ವಸಂಸ್ಥೆ:</strong> ಭಾರತ ಹಾಗೂ ಚುನಾವಣೆ ನಡೆಯಲಿರುವ ಇತರ ರಾಷ್ಟ್ರಗಳಲ್ಲಿ ಜನರ 'ರಾಜಕೀಯ ಮತ್ತು ನಾಗರಿಕ' ಹಕ್ಕುಗಳ ರಕ್ಷಣೆಯಾಗಬೇಕು. ಪ್ರತಿಯೊಬ್ಬರೂ 'ಮುಕ್ತ ಮತ್ತು ಪಾರದರ್ಶಕ' ವಾತಾವರಣದಲ್ಲಿ ಮತದಾನ ಮಾಡುವಂತಿರಬೇಕು ಎಂದು ವಿಶ್ವಸಂಸ್ಥೆ ಹೇಳಿದೆ.</p><p>ಲೋಕಸಭೆ ಚುನಾವಣೆ ಹೊತ್ತಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ ಹಾಗೂ ವಿರೋಧ ಪಕ್ಷವಾದ ಕಾಂಗ್ರೆಸ್ನ ಕೆಲವು ಬ್ಯಾಂಕ್ ಖಾತೆಗಳ ಸ್ಥಗಿತ ಸಂಬಂಧ ಕೇಳಲಾದ ಪ್ರಶ್ನೆಗಳಿಗೆ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಪ್ರತಿಕ್ರಿಯಿಸಿದ್ದಾರೆ.</p><p>ದೈನಂದಿನ ಮಾಧ್ಯಮ ಹೇಳಿಕೆ ಬಿಡುಗಡೆ ವೇಳೆ ಗುರುವಾರ ಮಾತನಾಡಿರುವ ಡುಜಾರಿಕ್, 'ಚುನಾವಣೆ ನಡೆಯಲಿರುವ ಇತರ ರಾಷ್ಟ್ರಗಳಂತೆಯೇ ಭಾರತದಲ್ಲಿ ರಾಜಕೀಯ ಮತ್ತು ನಾಗರಿಕ ಹಕ್ಕುಗಳು, ಮತದಾನ ಮಾಡಲು ಮುಕ್ತ ಮತ್ತು ಪಾರದರ್ಶಕ ವಾತಾವರಣ ಸೇರಿದಂತೆ ಪ್ರತಿಯೊಬ್ಬರ ಹಕ್ಕುಗಳನ್ನು ರಕ್ಷಿಸಲಾಗಿದೆ ಎಂದು ಭಾವಿಸುತ್ತೇವೆ' ಎಂದಿದ್ದಾರೆ.</p><p>ಕೇಜ್ರಿವಾಲ್ ಬಂಧನ ಹಾಗೂ ಕಾಂಗ್ರೆಸ್ ಬ್ಯಾಂಕ್ ಖಾತೆಗಳ ವಿಚಾರವಾಗಿ ಅಮೆರಿಕವೂ ಇದೇ ರೀತಿಯ ಪ್ರತಿಕ್ರಿಯೆ ನೀಡಿತ್ತು.</p><p>ಕಾನೂನು ಪ್ರಕ್ರಿಯೆ ಮುಕ್ತ ಮತ್ತು ನ್ಯಾಯಸಮ್ಮತವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಮಂಗಳವಾರ ಹೇಳಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಭಾರತ, ದೆಹಲಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಹಂಗಾಮಿ ಉಪ ಮುಖ್ಯಸ್ಥೆ ಗ್ಲಾರಿಯಾ ಬರ್ಬೆನಾ ಅವರಿಗೆ ಬುಧವಾರ ಸಮನ್ಸ್ ನೀಡಿತ್ತು.</p>.ಕೇಜ್ರಿವಾಲ್ ಬಂಧನ ಕುರಿತು ಹೇಳಿಕೆ: ಅಮೆರಿಕ ರಾಯಭಾರಿಗೆ ಭಾರತ ಸಮನ್ಸ್.ನ್ಯಾಯಯುತ ತನಿಖೆಯನ್ನು ಪ್ರೋತ್ಸಾಹಿಸುತ್ತೇವೆ: ಸಮನ್ಸ್ ನಂತರವೂ ಅಮೆರಿಕ ಹೇಳಿಕೆ.<p>ಆದಾಗ್ಯೂ, ಮತ್ತೆ ಹೇಳಿಕೆ ನೀಡಿದ್ದ ಅಮೆರಿಕ, ನ್ಯಾಯಯುತ, ಪಾರದರ್ಶಕ, ಸಕಾಲಿಕ ಕಾನೂನು ಪ್ರಕ್ರಿಯೆಯನ್ನು ಬೆಂಬಲಿಸುವುದಾಗಿ ಪುನರುಚ್ಛರಿಸಿತ್ತು.</p><p>ಈ ನಡೆಯನ್ನು ಖಂಡಿಸಿರುವ ಭಾರತ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ದೇಶದ ಚುನಾವಣಾ ಪ್ರಕ್ರಿಯೆ ಕುರಿತ ಬಾಹ್ಯಾ ಆರೋಪಗಳು ಒಪ್ಪತಕ್ಕವಲ್ಲ. ದೇಶದ ಕಾನೂನಿನ ಅನುಸಾರ ಪ್ರಕ್ರಿಯೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ:</strong> ಭಾರತ ಹಾಗೂ ಚುನಾವಣೆ ನಡೆಯಲಿರುವ ಇತರ ರಾಷ್ಟ್ರಗಳಲ್ಲಿ ಜನರ 'ರಾಜಕೀಯ ಮತ್ತು ನಾಗರಿಕ' ಹಕ್ಕುಗಳ ರಕ್ಷಣೆಯಾಗಬೇಕು. ಪ್ರತಿಯೊಬ್ಬರೂ 'ಮುಕ್ತ ಮತ್ತು ಪಾರದರ್ಶಕ' ವಾತಾವರಣದಲ್ಲಿ ಮತದಾನ ಮಾಡುವಂತಿರಬೇಕು ಎಂದು ವಿಶ್ವಸಂಸ್ಥೆ ಹೇಳಿದೆ.</p><p>ಲೋಕಸಭೆ ಚುನಾವಣೆ ಹೊತ್ತಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ ಹಾಗೂ ವಿರೋಧ ಪಕ್ಷವಾದ ಕಾಂಗ್ರೆಸ್ನ ಕೆಲವು ಬ್ಯಾಂಕ್ ಖಾತೆಗಳ ಸ್ಥಗಿತ ಸಂಬಂಧ ಕೇಳಲಾದ ಪ್ರಶ್ನೆಗಳಿಗೆ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಪ್ರತಿಕ್ರಿಯಿಸಿದ್ದಾರೆ.</p><p>ದೈನಂದಿನ ಮಾಧ್ಯಮ ಹೇಳಿಕೆ ಬಿಡುಗಡೆ ವೇಳೆ ಗುರುವಾರ ಮಾತನಾಡಿರುವ ಡುಜಾರಿಕ್, 'ಚುನಾವಣೆ ನಡೆಯಲಿರುವ ಇತರ ರಾಷ್ಟ್ರಗಳಂತೆಯೇ ಭಾರತದಲ್ಲಿ ರಾಜಕೀಯ ಮತ್ತು ನಾಗರಿಕ ಹಕ್ಕುಗಳು, ಮತದಾನ ಮಾಡಲು ಮುಕ್ತ ಮತ್ತು ಪಾರದರ್ಶಕ ವಾತಾವರಣ ಸೇರಿದಂತೆ ಪ್ರತಿಯೊಬ್ಬರ ಹಕ್ಕುಗಳನ್ನು ರಕ್ಷಿಸಲಾಗಿದೆ ಎಂದು ಭಾವಿಸುತ್ತೇವೆ' ಎಂದಿದ್ದಾರೆ.</p><p>ಕೇಜ್ರಿವಾಲ್ ಬಂಧನ ಹಾಗೂ ಕಾಂಗ್ರೆಸ್ ಬ್ಯಾಂಕ್ ಖಾತೆಗಳ ವಿಚಾರವಾಗಿ ಅಮೆರಿಕವೂ ಇದೇ ರೀತಿಯ ಪ್ರತಿಕ್ರಿಯೆ ನೀಡಿತ್ತು.</p><p>ಕಾನೂನು ಪ್ರಕ್ರಿಯೆ ಮುಕ್ತ ಮತ್ತು ನ್ಯಾಯಸಮ್ಮತವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಮಂಗಳವಾರ ಹೇಳಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಭಾರತ, ದೆಹಲಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಹಂಗಾಮಿ ಉಪ ಮುಖ್ಯಸ್ಥೆ ಗ್ಲಾರಿಯಾ ಬರ್ಬೆನಾ ಅವರಿಗೆ ಬುಧವಾರ ಸಮನ್ಸ್ ನೀಡಿತ್ತು.</p>.ಕೇಜ್ರಿವಾಲ್ ಬಂಧನ ಕುರಿತು ಹೇಳಿಕೆ: ಅಮೆರಿಕ ರಾಯಭಾರಿಗೆ ಭಾರತ ಸಮನ್ಸ್.ನ್ಯಾಯಯುತ ತನಿಖೆಯನ್ನು ಪ್ರೋತ್ಸಾಹಿಸುತ್ತೇವೆ: ಸಮನ್ಸ್ ನಂತರವೂ ಅಮೆರಿಕ ಹೇಳಿಕೆ.<p>ಆದಾಗ್ಯೂ, ಮತ್ತೆ ಹೇಳಿಕೆ ನೀಡಿದ್ದ ಅಮೆರಿಕ, ನ್ಯಾಯಯುತ, ಪಾರದರ್ಶಕ, ಸಕಾಲಿಕ ಕಾನೂನು ಪ್ರಕ್ರಿಯೆಯನ್ನು ಬೆಂಬಲಿಸುವುದಾಗಿ ಪುನರುಚ್ಛರಿಸಿತ್ತು.</p><p>ಈ ನಡೆಯನ್ನು ಖಂಡಿಸಿರುವ ಭಾರತ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ದೇಶದ ಚುನಾವಣಾ ಪ್ರಕ್ರಿಯೆ ಕುರಿತ ಬಾಹ್ಯಾ ಆರೋಪಗಳು ಒಪ್ಪತಕ್ಕವಲ್ಲ. ದೇಶದ ಕಾನೂನಿನ ಅನುಸಾರ ಪ್ರಕ್ರಿಯೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>