<p><strong>ಜೋಹಾನಸ್ಬರ್ಗ್</strong>: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸುಧಾರಣೆ ಇನ್ನು ಮುಂದೆ ಒಂದು ಆಯ್ಕೆಯಲ್ಲ, ಬದಲಿಗೆ ಅವಶ್ಯಕತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.</p><p> ಭಾರತ-ಬ್ರೆಜಿಲ್-ದಕ್ಷಿಣ ಆಫ್ರಿಕಾ ದೇಶಗಳು ಜಾಗತಿಕ ಆಡಳಿತ ಸಂಸ್ಥೆಗಳಿಗೆ ಬದಲಾವಣೆಗಳಿಗೆ ಸ್ಪಷ್ಟ ಸಂದೇಶವನ್ನು ಕಳುಹಿಸಬೇಕು ಎಂದು ಪ್ರತಿಪಾದಿಸಿದರು.</p><p>ಭಾರತ-ಬ್ರೆಜಿಲ್-ದಕ್ಷಿಣ ಆಫ್ರಿಕಾ(ಐಬಿಎಸ್ಎ) ನಾಯಕರ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಜಗತ್ತು ಛಿದ್ರವಾಗಿ ಮತ್ತು ವಿಭಜಿತವಾಗಿ ಕಂಡುಬರುತ್ತಿರುವ ಸಮಯದಲ್ಲಿ, ಐಬಿಎಸ್ಎ ಏಕತೆ, ಸಹಕಾರ ಮತ್ತು ಮಾನವೀಯತೆಯ ಸಂದೇಶವನ್ನು ನೀಡಬಲ್ಲದು ಎಂದು ಹೇಳಿದ್ದಾರೆ.</p><p>ಮೂರು ದೇಶಗಳ ನಡುವೆ ಭದ್ರತಾ ಸಹಕಾರವನ್ನು ಬಲಪಡಿಸಲು ಐಬಿಎಸ್ಎಯ ಎನ್ಎಸ್ಎ ಮಟ್ಟದ ಸಭೆಯನ್ನು ಸಾಂಸ್ಥಿಕಗೊಳಿಸುವುದನ್ನು ಸಹ ಅವರು ಪ್ರಸ್ತಾಪಿಸಿದರು.</p><p>ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ನಾವು ನಿಕಟ ಸಮನ್ವಯದಿಂದ ಮುಂದುವರಿಯಬೇಕು. ಇಂತಹ ಗಂಭೀರ ವಿಷಯದ ಬಗ್ಗೆ ಯಾವುದೇ ದ್ವಿಮುಖ ನೀತಿಗಳಿಗೆ ಸ್ಥಾನವಿಲ್ಲ’ ಎಂದು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಾಫೋಸಾ ಮತ್ತು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಭಾಗವಹಿಸಿದ್ದ ಸಭೆಯಲ್ಲಿ ಮೋದಿ ಹೇಳಿದ್ದಾರೆ.</p><p>ಮಾನವ ಕೇಂದ್ರಿತ ಅಭಿವೃದ್ಧಿಯನ್ನು ಖಾತ್ರಿಪಡಿಸುವಲ್ಲಿ ತಂತ್ರಜ್ಞಾನದ ನಿರ್ಣಾಯಕ ಪಾತ್ರವನ್ನು ಎತ್ತಿ ತೋರಿಸಿದ ಪ್ರಧಾನಿ, ಮೂರು ದೇಶಗಳ ನಡುವೆ ಯುಪಿಐನಂತಹ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಕೋವಿನ್ನಂತಹ ಆರೋಗ್ಯ ವೇದಿಕೆಗಳು, ಸೈಬರ್ ಭದ್ರತಾ ಚೌಕಟ್ಟುಗಳು ಮತ್ತು ಮಹಿಳಾ ನೇತೃತ್ವದ ತಂತ್ರಜ್ಞಾನ ಉಪಕ್ರಮಗಳ ಹಂಚಿಕೆಯನ್ನು ಸುಗಮಗೊಳಿಸಲು 'ಐಬಿಎಸ್ಎ ಡಿಜಿಟಲ್ ಇನ್ನೋವೇಶನ್ ಅಲೈಯನ್ಸ್' ಅನ್ನು ಸ್ಥಾಪಿಸುವ ಪ್ರಸ್ತಾಪವನ್ನೂ ಮಾಡಿದರು.</p><p>ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ ಮತ್ತು ಸೌರಶಕ್ತಿಯಂತಹ ಕ್ಷೇತ್ರಗಳಲ್ಲಿ 40 ದೇಶಗಳಲ್ಲಿನ ಯೋಜನೆಗಳನ್ನು ಬೆಂಬಲಿಸುವಲ್ಲಿ ಐಬಿಎಸ್ಎ ನಿಧಿಯ ಕಾರ್ಯವನ್ನು ಶ್ಲಾಘಿಸಿದರು.</p> <p>ಆಫ್ರಿಕನ್ ನೆಲದಲ್ಲಿ ನಡೆದ ಮೊದಲ ಜಿ 20 ಶೃಂಗಸಭೆ ಸಂದರ್ಭದಲ್ಲೇ ನಡೆದ ಐಬಿಎಸ್ಎ ಸಭೆಯನ್ನು ಮೋದಿ ಸಕಾಲಿಕ ಎಂದು ಕರೆದರು. ಜಾಗತಿಕ ದಕ್ಷಿಣ ದೇಶಗಳು ಸತತ ನಾಲ್ಕು ಜಿ–20 ಅಧ್ಯಕ್ಷತೆಗಳನ್ನು ವಹಿಸಿಕೊಂಡಿದ್ದವು, ಅವುಗಳಲ್ಲಿ ಕೊನೆಯ ಮೂರನ್ನು ಐಬಿಎಸ್ಎ ಸದಸ್ಯರ ರಾಷ್ಟ್ರಗಳು ವಹಿಸಿಕೊಂಡಿದ್ದವು ಎಂದರು.</p><p>ಇದು ಮಾನವ ಕೇಂದ್ರಿತ ಅಭಿವೃದ್ಧಿ, ಬಹುಪಕ್ಷೀಯ ಸುಧಾರಣೆ ಮತ್ತು ಸುಸ್ಥಿರ ಬೆಳವಣಿಗೆಯ ಮೇಲೆ ಕೇಂದ್ರೀಕರಿಸಿದ ಹಲವಾರು ಪ್ರಮುಖ ಉಪಕ್ರಮಗಳಿಗೆ ಕಾರಣವಾಗಿದೆ ಎಂದು ಅವರು ಬಣ್ಣಿಸಿದರು.</p><p>ಐಬಿಎಸ್ಎ ಕೇವಲ ಮೂರು ದೇಶಗಳ ಗುಂಪಲ್ಲ, ಅದು ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ರಾಷ್ಟ್ರಗಳು ಮತ್ತು ಮೂರು ಪ್ರಮುಖ ಆರ್ಥಿಕತೆಗಳನ್ನು ಸಂಪರ್ಕಿಸುವ ಪ್ರಮುಖ ವೇದಿಕೆಯಾಗಿದೆ ಎಂದು ಪ್ರಧಾನಿ ಹೇಳಿದರು.</p><p>ಐಬಿಎಸ್ಎ ಎಂಬುದು ಕೇವಲ ಮೂರು ದೇಶಗಳನ್ನು ಒಳಗೊಂಡ ಸಮೂಹ ಅಲ್ಲ. ಬದಲಾಗಿ ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ರಾಷ್ಟ್ರಗಳು ಮತ್ತು ಮೂರು ಪ್ರಮುಖ ಆರ್ಥಿಕತೆಗಳು ಪರಸ್ಪರ ಸಂಪರ್ಕಿಸುವ ಪ್ರಮುಖ ವೇದಿಕೆಯಾಗಿದೆ. ಐಬಿಎಸ್ಎ, ಪರಸ್ಪರರ ಅಭಿವೃದ್ಧಿಗೆ ಪೂರಕವಾಗಬಹುದು ಮತ್ತು ಸುಸ್ಥಿರ ಬೆಳವಣಿಗೆಗೆ ಅತ್ಯುತ್ತಮ ಉದಾಹರಣೆಯಾಗಬಹುದು ಎಂದರು.</p><p>ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ‘ಎ.ಐ ಇಂಪ್ಯಾಕ್ಟ್’ ಶೃಂಗಸಭೆಯಲ್ಲಿ ಪಾಲ್ಗೊಳ್ಳುವಂತೆ ಐಬಿಎಸ್ಎ ನಾಯಕರನ್ನು ಮೋದಿ ಅವರು ಆಹ್ವಾನಿಸಿದರು.</p><p><strong>ಎ.ಐ: ಜಾಗತಿಕ ಒಪ್ಪಂದಕ್ಕೆ ಕರೆ</strong> </p><p>ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನದ ದುರುಪಯೋಗವನ್ನು ತಡೆಗಟ್ಟಲು ಜಾಗತಿಕ ಮಟ್ಟದ ಒಪ್ಪಂದಕ್ಕೆ ಪ್ರಧಾನಿ ಮೋದಿ ಅವರು ಕರೆ ನೀಡಿದ್ದು ‘ನಿರ್ಣಾಯಕ ತಂತ್ರಜ್ಞಾನಗಳು ಹಣಕಾಸು ಕೇಂದ್ರಿತವಾಗಿರದೆ ಮಾವನ ಕೇಂದ್ರಿತವಾಗಿರಬೇಕು’ ಎಂದು ಪ್ರತಿಪಾದಿಸಿದರು. ಜಿ–20 ನಾಯಕರ ಶೃಂಗಸಭೆಯಲ್ಲಿ ಭಾನುವಾರ ಎ.ಐ ಮತ್ತು ವಿರಳ ಲೋಹಗಳ ಕುರಿತಾದ ಅಧಿವೇಶನದಲ್ಲಿ ಮಾತನಾಡಿದ ಅವರು ‘ತಂತ್ರಜ್ಞಾನದ ಅಳವಡಿಕೆಯು ಕೆಲವೇ ರಾಷ್ಟ್ರಗಳಿಗೆ ಸೀಮಿತವಾಗಬಾರದು. ಅದು ‘ಜಾಗತಿಕ’ವಾಗಿರಬೇಕು’ ಎಂದರು. ‘ಭಾರತದ ತಂತ್ರಜ್ಞಾನ ಕ್ಷೇತ್ರದಲ್ಲಿ ಇದೇ ನೀತಿಯನ್ನು ಸಂಯೋಜಿಸಲಾಗಿದ್ದು ಇದರಿಂದ ಬಾಹ್ಯಾಕಾಶ ಕ್ಷೇತ್ರ ಎ.ಐ ಅಥವಾ ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಗಮನಾರ್ಹ ಪ್ರಯೋಜನಗಳಿಗೆ ಕಾರಣವಾಗಿದೆ‘ ಎಂದು ಹೇಳಿದರು. </p><p> ‘ಎ.ಐ ತಂತ್ರಜ್ಞಾನವು ಜಾಗತಿಕ ಒಳಿತಿಗಾಗಿ ಬಳಕೆಯಾಗುತ್ತಿದೆ ಮತ್ತು ಅದರ ದುರುಪಯೋಗವನ್ನು ತಡೆಯಲಾಗಿದೆ ಎಂಬುದನ್ನು ನಾವೆಲ್ಲರೂ ಖಚಿತಪಡಿಸಿಕೊಳ್ಳಬೇಕು. ಡೀಪ್ಫೇಕ್ಗಳು ಅಪರಾಧ ಮತ್ತು ಭಯೋತ್ಪಾದಕ ಚಟುವಟಿಕೆಗಳಲ್ಲಿ ಎ.ಐ ಬಳಕೆಯ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಬೇಕು. ಇದಕ್ಕಾಗಿ ಎ.ಐ ತಂತ್ರಜ್ಞಾನದ ಪ್ರಮುಖ ಅಂಶಗಳಿಗೆ ಸಂಬಂಧಿಸಿದಂತೆ ಜಾಗತಿಕ ಮಟ್ಟದಲ್ಲಿ ಒಪ್ಪಂದ ಮಾಡಿಕೊಳ್ಳಬೇಕು’ ಎಂದು ಒತ್ತಾಯಿಸಿದರು.</p><p><strong>ರಾಮಫೋಸಾ ಜತೆ ಮಾತುಕತೆ</strong> </p><p>ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರನ್ನು ಭಾನುವಾರ ಭೇಟಿಯಾಗಿ ಮಾತುಕತೆ ನಡೆಸಿದರು. ‘ಈ ವೇಳೆ ಇಬ್ಬರೂ ನಾಯಕರು ವ್ಯಾಪಾರ ಹೂಡಿಕೆ ಗಣಿಗಾರಿಕೆ ವಿರಳ ಲೋಹಗಳು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಮತ್ತು ಆಹಾರ ಭದ್ರತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರದ ಕುರಿತು ಚರ್ಚಿಸಿದರು’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ‘ಜಿ–20 ನಾಯಕರ ಶೃಂಗಸಭೆಯ ಅಧ್ಯಕ್ಷತೆ ವಹಿಸಿ ಯಶಸ್ವಿಯಾಗಿ ಆಯೋಜಿಸಿರುವುದಕ್ಕೆ ರಾಮಫೋಸಾ ಹಾಗೂ ದಕ್ಷಿಣ ಆಫ್ರಿಕಾವನ್ನು ಪ್ರಧಾನಿ ಅಭಿನಂದಿಸಿದರು’ ಎಂದಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೋಹಾನಸ್ಬರ್ಗ್</strong>: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸುಧಾರಣೆ ಇನ್ನು ಮುಂದೆ ಒಂದು ಆಯ್ಕೆಯಲ್ಲ, ಬದಲಿಗೆ ಅವಶ್ಯಕತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.</p><p> ಭಾರತ-ಬ್ರೆಜಿಲ್-ದಕ್ಷಿಣ ಆಫ್ರಿಕಾ ದೇಶಗಳು ಜಾಗತಿಕ ಆಡಳಿತ ಸಂಸ್ಥೆಗಳಿಗೆ ಬದಲಾವಣೆಗಳಿಗೆ ಸ್ಪಷ್ಟ ಸಂದೇಶವನ್ನು ಕಳುಹಿಸಬೇಕು ಎಂದು ಪ್ರತಿಪಾದಿಸಿದರು.</p><p>ಭಾರತ-ಬ್ರೆಜಿಲ್-ದಕ್ಷಿಣ ಆಫ್ರಿಕಾ(ಐಬಿಎಸ್ಎ) ನಾಯಕರ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಜಗತ್ತು ಛಿದ್ರವಾಗಿ ಮತ್ತು ವಿಭಜಿತವಾಗಿ ಕಂಡುಬರುತ್ತಿರುವ ಸಮಯದಲ್ಲಿ, ಐಬಿಎಸ್ಎ ಏಕತೆ, ಸಹಕಾರ ಮತ್ತು ಮಾನವೀಯತೆಯ ಸಂದೇಶವನ್ನು ನೀಡಬಲ್ಲದು ಎಂದು ಹೇಳಿದ್ದಾರೆ.</p><p>ಮೂರು ದೇಶಗಳ ನಡುವೆ ಭದ್ರತಾ ಸಹಕಾರವನ್ನು ಬಲಪಡಿಸಲು ಐಬಿಎಸ್ಎಯ ಎನ್ಎಸ್ಎ ಮಟ್ಟದ ಸಭೆಯನ್ನು ಸಾಂಸ್ಥಿಕಗೊಳಿಸುವುದನ್ನು ಸಹ ಅವರು ಪ್ರಸ್ತಾಪಿಸಿದರು.</p><p>ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ನಾವು ನಿಕಟ ಸಮನ್ವಯದಿಂದ ಮುಂದುವರಿಯಬೇಕು. ಇಂತಹ ಗಂಭೀರ ವಿಷಯದ ಬಗ್ಗೆ ಯಾವುದೇ ದ್ವಿಮುಖ ನೀತಿಗಳಿಗೆ ಸ್ಥಾನವಿಲ್ಲ’ ಎಂದು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಾಫೋಸಾ ಮತ್ತು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಭಾಗವಹಿಸಿದ್ದ ಸಭೆಯಲ್ಲಿ ಮೋದಿ ಹೇಳಿದ್ದಾರೆ.</p><p>ಮಾನವ ಕೇಂದ್ರಿತ ಅಭಿವೃದ್ಧಿಯನ್ನು ಖಾತ್ರಿಪಡಿಸುವಲ್ಲಿ ತಂತ್ರಜ್ಞಾನದ ನಿರ್ಣಾಯಕ ಪಾತ್ರವನ್ನು ಎತ್ತಿ ತೋರಿಸಿದ ಪ್ರಧಾನಿ, ಮೂರು ದೇಶಗಳ ನಡುವೆ ಯುಪಿಐನಂತಹ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಕೋವಿನ್ನಂತಹ ಆರೋಗ್ಯ ವೇದಿಕೆಗಳು, ಸೈಬರ್ ಭದ್ರತಾ ಚೌಕಟ್ಟುಗಳು ಮತ್ತು ಮಹಿಳಾ ನೇತೃತ್ವದ ತಂತ್ರಜ್ಞಾನ ಉಪಕ್ರಮಗಳ ಹಂಚಿಕೆಯನ್ನು ಸುಗಮಗೊಳಿಸಲು 'ಐಬಿಎಸ್ಎ ಡಿಜಿಟಲ್ ಇನ್ನೋವೇಶನ್ ಅಲೈಯನ್ಸ್' ಅನ್ನು ಸ್ಥಾಪಿಸುವ ಪ್ರಸ್ತಾಪವನ್ನೂ ಮಾಡಿದರು.</p><p>ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ ಮತ್ತು ಸೌರಶಕ್ತಿಯಂತಹ ಕ್ಷೇತ್ರಗಳಲ್ಲಿ 40 ದೇಶಗಳಲ್ಲಿನ ಯೋಜನೆಗಳನ್ನು ಬೆಂಬಲಿಸುವಲ್ಲಿ ಐಬಿಎಸ್ಎ ನಿಧಿಯ ಕಾರ್ಯವನ್ನು ಶ್ಲಾಘಿಸಿದರು.</p> <p>ಆಫ್ರಿಕನ್ ನೆಲದಲ್ಲಿ ನಡೆದ ಮೊದಲ ಜಿ 20 ಶೃಂಗಸಭೆ ಸಂದರ್ಭದಲ್ಲೇ ನಡೆದ ಐಬಿಎಸ್ಎ ಸಭೆಯನ್ನು ಮೋದಿ ಸಕಾಲಿಕ ಎಂದು ಕರೆದರು. ಜಾಗತಿಕ ದಕ್ಷಿಣ ದೇಶಗಳು ಸತತ ನಾಲ್ಕು ಜಿ–20 ಅಧ್ಯಕ್ಷತೆಗಳನ್ನು ವಹಿಸಿಕೊಂಡಿದ್ದವು, ಅವುಗಳಲ್ಲಿ ಕೊನೆಯ ಮೂರನ್ನು ಐಬಿಎಸ್ಎ ಸದಸ್ಯರ ರಾಷ್ಟ್ರಗಳು ವಹಿಸಿಕೊಂಡಿದ್ದವು ಎಂದರು.</p><p>ಇದು ಮಾನವ ಕೇಂದ್ರಿತ ಅಭಿವೃದ್ಧಿ, ಬಹುಪಕ್ಷೀಯ ಸುಧಾರಣೆ ಮತ್ತು ಸುಸ್ಥಿರ ಬೆಳವಣಿಗೆಯ ಮೇಲೆ ಕೇಂದ್ರೀಕರಿಸಿದ ಹಲವಾರು ಪ್ರಮುಖ ಉಪಕ್ರಮಗಳಿಗೆ ಕಾರಣವಾಗಿದೆ ಎಂದು ಅವರು ಬಣ್ಣಿಸಿದರು.</p><p>ಐಬಿಎಸ್ಎ ಕೇವಲ ಮೂರು ದೇಶಗಳ ಗುಂಪಲ್ಲ, ಅದು ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ರಾಷ್ಟ್ರಗಳು ಮತ್ತು ಮೂರು ಪ್ರಮುಖ ಆರ್ಥಿಕತೆಗಳನ್ನು ಸಂಪರ್ಕಿಸುವ ಪ್ರಮುಖ ವೇದಿಕೆಯಾಗಿದೆ ಎಂದು ಪ್ರಧಾನಿ ಹೇಳಿದರು.</p><p>ಐಬಿಎಸ್ಎ ಎಂಬುದು ಕೇವಲ ಮೂರು ದೇಶಗಳನ್ನು ಒಳಗೊಂಡ ಸಮೂಹ ಅಲ್ಲ. ಬದಲಾಗಿ ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ರಾಷ್ಟ್ರಗಳು ಮತ್ತು ಮೂರು ಪ್ರಮುಖ ಆರ್ಥಿಕತೆಗಳು ಪರಸ್ಪರ ಸಂಪರ್ಕಿಸುವ ಪ್ರಮುಖ ವೇದಿಕೆಯಾಗಿದೆ. ಐಬಿಎಸ್ಎ, ಪರಸ್ಪರರ ಅಭಿವೃದ್ಧಿಗೆ ಪೂರಕವಾಗಬಹುದು ಮತ್ತು ಸುಸ್ಥಿರ ಬೆಳವಣಿಗೆಗೆ ಅತ್ಯುತ್ತಮ ಉದಾಹರಣೆಯಾಗಬಹುದು ಎಂದರು.</p><p>ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ‘ಎ.ಐ ಇಂಪ್ಯಾಕ್ಟ್’ ಶೃಂಗಸಭೆಯಲ್ಲಿ ಪಾಲ್ಗೊಳ್ಳುವಂತೆ ಐಬಿಎಸ್ಎ ನಾಯಕರನ್ನು ಮೋದಿ ಅವರು ಆಹ್ವಾನಿಸಿದರು.</p><p><strong>ಎ.ಐ: ಜಾಗತಿಕ ಒಪ್ಪಂದಕ್ಕೆ ಕರೆ</strong> </p><p>ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನದ ದುರುಪಯೋಗವನ್ನು ತಡೆಗಟ್ಟಲು ಜಾಗತಿಕ ಮಟ್ಟದ ಒಪ್ಪಂದಕ್ಕೆ ಪ್ರಧಾನಿ ಮೋದಿ ಅವರು ಕರೆ ನೀಡಿದ್ದು ‘ನಿರ್ಣಾಯಕ ತಂತ್ರಜ್ಞಾನಗಳು ಹಣಕಾಸು ಕೇಂದ್ರಿತವಾಗಿರದೆ ಮಾವನ ಕೇಂದ್ರಿತವಾಗಿರಬೇಕು’ ಎಂದು ಪ್ರತಿಪಾದಿಸಿದರು. ಜಿ–20 ನಾಯಕರ ಶೃಂಗಸಭೆಯಲ್ಲಿ ಭಾನುವಾರ ಎ.ಐ ಮತ್ತು ವಿರಳ ಲೋಹಗಳ ಕುರಿತಾದ ಅಧಿವೇಶನದಲ್ಲಿ ಮಾತನಾಡಿದ ಅವರು ‘ತಂತ್ರಜ್ಞಾನದ ಅಳವಡಿಕೆಯು ಕೆಲವೇ ರಾಷ್ಟ್ರಗಳಿಗೆ ಸೀಮಿತವಾಗಬಾರದು. ಅದು ‘ಜಾಗತಿಕ’ವಾಗಿರಬೇಕು’ ಎಂದರು. ‘ಭಾರತದ ತಂತ್ರಜ್ಞಾನ ಕ್ಷೇತ್ರದಲ್ಲಿ ಇದೇ ನೀತಿಯನ್ನು ಸಂಯೋಜಿಸಲಾಗಿದ್ದು ಇದರಿಂದ ಬಾಹ್ಯಾಕಾಶ ಕ್ಷೇತ್ರ ಎ.ಐ ಅಥವಾ ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಗಮನಾರ್ಹ ಪ್ರಯೋಜನಗಳಿಗೆ ಕಾರಣವಾಗಿದೆ‘ ಎಂದು ಹೇಳಿದರು. </p><p> ‘ಎ.ಐ ತಂತ್ರಜ್ಞಾನವು ಜಾಗತಿಕ ಒಳಿತಿಗಾಗಿ ಬಳಕೆಯಾಗುತ್ತಿದೆ ಮತ್ತು ಅದರ ದುರುಪಯೋಗವನ್ನು ತಡೆಯಲಾಗಿದೆ ಎಂಬುದನ್ನು ನಾವೆಲ್ಲರೂ ಖಚಿತಪಡಿಸಿಕೊಳ್ಳಬೇಕು. ಡೀಪ್ಫೇಕ್ಗಳು ಅಪರಾಧ ಮತ್ತು ಭಯೋತ್ಪಾದಕ ಚಟುವಟಿಕೆಗಳಲ್ಲಿ ಎ.ಐ ಬಳಕೆಯ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಬೇಕು. ಇದಕ್ಕಾಗಿ ಎ.ಐ ತಂತ್ರಜ್ಞಾನದ ಪ್ರಮುಖ ಅಂಶಗಳಿಗೆ ಸಂಬಂಧಿಸಿದಂತೆ ಜಾಗತಿಕ ಮಟ್ಟದಲ್ಲಿ ಒಪ್ಪಂದ ಮಾಡಿಕೊಳ್ಳಬೇಕು’ ಎಂದು ಒತ್ತಾಯಿಸಿದರು.</p><p><strong>ರಾಮಫೋಸಾ ಜತೆ ಮಾತುಕತೆ</strong> </p><p>ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರನ್ನು ಭಾನುವಾರ ಭೇಟಿಯಾಗಿ ಮಾತುಕತೆ ನಡೆಸಿದರು. ‘ಈ ವೇಳೆ ಇಬ್ಬರೂ ನಾಯಕರು ವ್ಯಾಪಾರ ಹೂಡಿಕೆ ಗಣಿಗಾರಿಕೆ ವಿರಳ ಲೋಹಗಳು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಮತ್ತು ಆಹಾರ ಭದ್ರತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರದ ಕುರಿತು ಚರ್ಚಿಸಿದರು’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ‘ಜಿ–20 ನಾಯಕರ ಶೃಂಗಸಭೆಯ ಅಧ್ಯಕ್ಷತೆ ವಹಿಸಿ ಯಶಸ್ವಿಯಾಗಿ ಆಯೋಜಿಸಿರುವುದಕ್ಕೆ ರಾಮಫೋಸಾ ಹಾಗೂ ದಕ್ಷಿಣ ಆಫ್ರಿಕಾವನ್ನು ಪ್ರಧಾನಿ ಅಭಿನಂದಿಸಿದರು’ ಎಂದಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>