<p><strong>ವಿಶ್ವಸಂಸ್ಥೆ</strong>: ಅಫ್ಗಾನಿಸ್ತಾನದಲ್ಲಿ ಹಿಂಸಾಚಾರ ಹೆಚ್ಚಾಗಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿ, ದೇಶದಲ್ಲಿ ಇಸ್ಲಾಮಿಕ್ ಎಮಿರೇಟ್ನ ಪುನರ್ ಸ್ಥಾಪನೆಯನ್ನು ಬೆಂಬಲಿಸುವುದಿಲ್ಲ ಎಂದು ಘೋಷಿಸಿದೆ.</p>.<p class="title">ಇತ್ತೀಚೆಗೆ ಅಫ್ಗಾನಿಸ್ತಾನದಲ್ಲಿನ ವಿಶ್ವಸಂಸ್ಥೆಯ ಕಚೇರಿಯ ಕಾಂಪೌಂಡ್ ಮೇಲೆ ನಡೆದಿದ್ದ ದಾಳಿಯನ್ನು ಭಾರತದ ಅಧ್ಯಕ್ಷತೆಯ ಭದ್ರತಾ ಮಂಡಳಿ ತೀವ್ರವಾಗಿ ಖಂಡಿಸಿದೆ.</p>.<p class="title">ಭದ್ರತಾ ಮಂಡಳಿಯ ಅಧ್ಯಕ್ಷತೆವಹಿಸಿರುವ ವಿಶ್ವಸಂಸ್ಥೆಯಲ್ಲಿನ ಭಾರತದ ರಾಯಭಾರಿ ಟಿ.ಎಸ್.ತಿರುಮೂರ್ತಿ ಅವರು, ಅಫ್ಗಾನಿಸ್ತಾನದಲ್ಲಿನ ಸಂಘರ್ಷಕ್ಕೆ ಯಾವುದೇ ಮಿಲಿಟರಿ ಪರಿಹಾರವಿಲ್ಲ. ಅಲ್ಲಿ ಮತ್ತೆ ಇಸ್ಲಾಮಿಕ್ ಎಮಿರೇಟ್ ಸ್ಥಾಪನೆಯನ್ನು ಬೆಂಬಲಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p class="title">ಇಸ್ಲಾಮಿಕ್ ರಿಪಬ್ಲಿಕ್ ಮತ್ತು ತಾಲಿಬಾನ್ ಎರಡು ಕಡೆಯಿಂದ ತುರ್ತಾಗಿ ಶಾಂತಿ ಪ್ರಕ್ರಿಯೆಗಳು ನಡೆಯಬೇಕು. ಈ ಮೂಲಕ ಅವರು ತಮ್ಮ ರಾಜಕೀಯ ಸಮಸ್ಯೆ ಬಗೆಹರಿಸಿಕೊಳ್ಳುವುದರ ಜತೆಗೆ ಕದನ ವಿರಾಮವನ್ನು ಅರ್ಥಪೂರ್ಣವಾಗಿ ಅನುಸರಿಸಲು ಮುಂದಾಗಬೇಕು ಎಂದು ಭದ್ರತಾ ಮಂಡಳಿಯ ಸದಸ್ಯರು ಬಯಸುತ್ತಾರೆ ಎಂದು ತಿರುಮೂರ್ತಿ ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ</strong>: ಅಫ್ಗಾನಿಸ್ತಾನದಲ್ಲಿ ಹಿಂಸಾಚಾರ ಹೆಚ್ಚಾಗಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿ, ದೇಶದಲ್ಲಿ ಇಸ್ಲಾಮಿಕ್ ಎಮಿರೇಟ್ನ ಪುನರ್ ಸ್ಥಾಪನೆಯನ್ನು ಬೆಂಬಲಿಸುವುದಿಲ್ಲ ಎಂದು ಘೋಷಿಸಿದೆ.</p>.<p class="title">ಇತ್ತೀಚೆಗೆ ಅಫ್ಗಾನಿಸ್ತಾನದಲ್ಲಿನ ವಿಶ್ವಸಂಸ್ಥೆಯ ಕಚೇರಿಯ ಕಾಂಪೌಂಡ್ ಮೇಲೆ ನಡೆದಿದ್ದ ದಾಳಿಯನ್ನು ಭಾರತದ ಅಧ್ಯಕ್ಷತೆಯ ಭದ್ರತಾ ಮಂಡಳಿ ತೀವ್ರವಾಗಿ ಖಂಡಿಸಿದೆ.</p>.<p class="title">ಭದ್ರತಾ ಮಂಡಳಿಯ ಅಧ್ಯಕ್ಷತೆವಹಿಸಿರುವ ವಿಶ್ವಸಂಸ್ಥೆಯಲ್ಲಿನ ಭಾರತದ ರಾಯಭಾರಿ ಟಿ.ಎಸ್.ತಿರುಮೂರ್ತಿ ಅವರು, ಅಫ್ಗಾನಿಸ್ತಾನದಲ್ಲಿನ ಸಂಘರ್ಷಕ್ಕೆ ಯಾವುದೇ ಮಿಲಿಟರಿ ಪರಿಹಾರವಿಲ್ಲ. ಅಲ್ಲಿ ಮತ್ತೆ ಇಸ್ಲಾಮಿಕ್ ಎಮಿರೇಟ್ ಸ್ಥಾಪನೆಯನ್ನು ಬೆಂಬಲಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p class="title">ಇಸ್ಲಾಮಿಕ್ ರಿಪಬ್ಲಿಕ್ ಮತ್ತು ತಾಲಿಬಾನ್ ಎರಡು ಕಡೆಯಿಂದ ತುರ್ತಾಗಿ ಶಾಂತಿ ಪ್ರಕ್ರಿಯೆಗಳು ನಡೆಯಬೇಕು. ಈ ಮೂಲಕ ಅವರು ತಮ್ಮ ರಾಜಕೀಯ ಸಮಸ್ಯೆ ಬಗೆಹರಿಸಿಕೊಳ್ಳುವುದರ ಜತೆಗೆ ಕದನ ವಿರಾಮವನ್ನು ಅರ್ಥಪೂರ್ಣವಾಗಿ ಅನುಸರಿಸಲು ಮುಂದಾಗಬೇಕು ಎಂದು ಭದ್ರತಾ ಮಂಡಳಿಯ ಸದಸ್ಯರು ಬಯಸುತ್ತಾರೆ ಎಂದು ತಿರುಮೂರ್ತಿ ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>