<p><strong>ಕೈರೊ/ ಗಾಜಾ:</strong> ದಕ್ಷಿಣ ಗಾಜಾ ಪಟ್ಟಿಯ ವಿವಿಧ ಪ್ರದೇಶಗಳನ್ನು ಗುರಿಯಾಗಿಸಿ ಇಸ್ರೇಲ್ ಪಡೆಯು ಮಂಗಳವಾರ ಬಾಂಬ್ ಸುರಿಮಳೆಗರೆದಿದೆ. ಇದರ ಪರಿಣಾಮ ಸಾವಿರಾರು ಮಂದಿ ಪ್ಯಾಲೆಸ್ಟೀನಿಯರು ತಮ್ಮ ಮನೆಗಳನ್ನು ತೊರೆದು ಅನ್ಯ ಸ್ಥಳಗಳಿಗೆ ಪಲಾಯನ ಮಾಡಿದ್ದಾರೆ. </p>.<p>ಇಸ್ರೇಲ್ ಪಡೆಯ ದಾಳಿಯಲ್ಲಿ ಪ್ಯಾಲೆಸ್ಟೀನ್ನ ಎಂಟು ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಯುದ್ಧದಲ್ಲಿ ಸೋಮವಾರ ತಮ್ಮ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಇಸ್ರೇಲ್ ಸೇನೆ ಹೇಳಿದೆ. </p>.<p>ಹಮಾಸ್ ಬಂಡುಕೋರರನ್ನು ಗುರಿಯಾಗಿಸಿ ದಾಳಿ ನಡೆಸಲು ಯುದ್ಧ ಟ್ಯಾಂಕರ್ಗಳು ಪುನಃ ಬರಲಿವೆ. ಹೀಗಾಗಿ, ಪೂರ್ವ ಖಾನ್ ಯೂನಿಸ್ ಭಾಗದಲ್ಲಿರುವ ವಿವಿಧ ಗ್ರಾಮಗಳು ಮತ್ತು ಪಟ್ಟಣಗಳಲ್ಲಿರುವ ಜನರು ಬೇರೆ ಸ್ಥಳಗಳಿಗೆ ತೆರಳುವಂತೆ ಇಸ್ರೇಲ್ ಸೇನೆ ಆದೇಶಿಸಿದೆ. </p>.<p>ಇದರ ಹೊರತಾಗಿಯೂ ಅದೇ ಸ್ಥಳದಲ್ಲಿ ಉಳಿದುಕೊಂಡ ಸಾವಿರಾರು ಮಂದಿಯನ್ನು ಮಧ್ಯರಾತ್ರಿ ವೇಳೆ ಬಲವಂತವಾಗಿ ಮನೆಗಳಿಂದ ಹೊರದಬ್ಬಲಾಗುತ್ತಿದೆ ಎಂದು ಸ್ಥಳೀಯರು ಮತ್ತು ಹಮಾಸ್ ಮಾಧ್ಯಮ ವರದಿ ಮಾಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೈರೊ/ ಗಾಜಾ:</strong> ದಕ್ಷಿಣ ಗಾಜಾ ಪಟ್ಟಿಯ ವಿವಿಧ ಪ್ರದೇಶಗಳನ್ನು ಗುರಿಯಾಗಿಸಿ ಇಸ್ರೇಲ್ ಪಡೆಯು ಮಂಗಳವಾರ ಬಾಂಬ್ ಸುರಿಮಳೆಗರೆದಿದೆ. ಇದರ ಪರಿಣಾಮ ಸಾವಿರಾರು ಮಂದಿ ಪ್ಯಾಲೆಸ್ಟೀನಿಯರು ತಮ್ಮ ಮನೆಗಳನ್ನು ತೊರೆದು ಅನ್ಯ ಸ್ಥಳಗಳಿಗೆ ಪಲಾಯನ ಮಾಡಿದ್ದಾರೆ. </p>.<p>ಇಸ್ರೇಲ್ ಪಡೆಯ ದಾಳಿಯಲ್ಲಿ ಪ್ಯಾಲೆಸ್ಟೀನ್ನ ಎಂಟು ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಯುದ್ಧದಲ್ಲಿ ಸೋಮವಾರ ತಮ್ಮ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಇಸ್ರೇಲ್ ಸೇನೆ ಹೇಳಿದೆ. </p>.<p>ಹಮಾಸ್ ಬಂಡುಕೋರರನ್ನು ಗುರಿಯಾಗಿಸಿ ದಾಳಿ ನಡೆಸಲು ಯುದ್ಧ ಟ್ಯಾಂಕರ್ಗಳು ಪುನಃ ಬರಲಿವೆ. ಹೀಗಾಗಿ, ಪೂರ್ವ ಖಾನ್ ಯೂನಿಸ್ ಭಾಗದಲ್ಲಿರುವ ವಿವಿಧ ಗ್ರಾಮಗಳು ಮತ್ತು ಪಟ್ಟಣಗಳಲ್ಲಿರುವ ಜನರು ಬೇರೆ ಸ್ಥಳಗಳಿಗೆ ತೆರಳುವಂತೆ ಇಸ್ರೇಲ್ ಸೇನೆ ಆದೇಶಿಸಿದೆ. </p>.<p>ಇದರ ಹೊರತಾಗಿಯೂ ಅದೇ ಸ್ಥಳದಲ್ಲಿ ಉಳಿದುಕೊಂಡ ಸಾವಿರಾರು ಮಂದಿಯನ್ನು ಮಧ್ಯರಾತ್ರಿ ವೇಳೆ ಬಲವಂತವಾಗಿ ಮನೆಗಳಿಂದ ಹೊರದಬ್ಬಲಾಗುತ್ತಿದೆ ಎಂದು ಸ್ಥಳೀಯರು ಮತ್ತು ಹಮಾಸ್ ಮಾಧ್ಯಮ ವರದಿ ಮಾಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>