<p><strong>ವಾಷಿಂಗ್ಟನ್:</strong> 2025ರ ಪಹಲ್ಗಾಮ್ ಉಗ್ರ ದಾಳಿಗೆ ಕಾರಣವಾಗಿರುವ ಲಷ್ಕರ್–ಎ–ತಯಬಾದಂತಹ ಭಯೋತ್ಪಾದಕ ಸಂಘಟನೆಗಳನ್ನು ಪಾಕಿಸ್ತಾನ ನಿಗ್ರಹಿಸಬೇಕು ಎಂದು ಅಮೆರಿಕ ಸಂಸದ ಬ್ರಾಡ್ ಶೆರ್ಮನ್ ಅವರು ಆಗ್ರಹಿಸಿದ್ದಾರೆ.</p>.<p>ಭಾರತೀಯ ರಾಯಭಾರ ಕಚೇರಿ ಆಯೋಜಿಸಿದ್ದ ‘ಭಯೋತ್ಪಾದನೆಯಿಂದ ಮನುಕುಲಕ್ಕೆ ಉಂಟಾಗಿರುವ ಹಾನಿ’ ಎಂಬ ವಿಷಯಾಧಾರಿತ ಪ್ರದರ್ಶನದಲ್ಲಿ ಮಾತನಾಡಿದ ಶೆರ್ಮನ್ ಅವರು, ಪಹಲ್ಗಾಮ್ ಉಗ್ರ ದಾಳಿಯಲ್ಲಿ ಮೃತಪಟ್ಟ 26 ಜನರನ್ನು ಸ್ಮರಿಸಿದರು.</p>.<p>ದಾಳಿಕೋರರನ್ನು ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್ಎಫ್) ಎಂದು ಗುರುತಿಸಲಾಗಿದ್ದು, ಧರ್ಮದ ಆಧಾರದ ಮೇಲೆ ಮುಗ್ಧ ಜನರನ್ನು ಹತ್ಯೆ ಮಾಡಲಾಗಿದೆ. ಈ ಗುಂಪು ಪಾಕಿಸ್ತಾನದಲ್ಲಿ ಆಶ್ರಯ ಪಡೆದಿರುವ ಲಷ್ಕರ್–ಎ–ತಯಬಾ ಸಂಘಟನೆಯೊಂದಿಗೆ ಸಂಬಂಧ ಹೊಂದಿದೆ ಎಂದು ಕಂಡುಬರುತ್ತದೆ ಎಂದು ಹೇಳಿದರು.</p>.<p class="title">‘ಲಷ್ಕರ್–ಎ– ತಯಬಾ, ಜೈಶ್–ಎ–ಮೊಹಮ್ಮದ್ ಮತ್ತು ಇತರ ಭಯೋತ್ಪಾದಕ ಗುಂಪುಗಳನ್ನು ನಿಗ್ರಹಿಸುವಂತೆ ಪಾಕಿಸ್ತಾನ ಸರ್ಕಾರವನ್ನು ಒತ್ತಾಯಿಸಲು ಈ ಸಂದರ್ಭವನ್ನು ಬಳಸಿಕೊಳ್ಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್:</strong> 2025ರ ಪಹಲ್ಗಾಮ್ ಉಗ್ರ ದಾಳಿಗೆ ಕಾರಣವಾಗಿರುವ ಲಷ್ಕರ್–ಎ–ತಯಬಾದಂತಹ ಭಯೋತ್ಪಾದಕ ಸಂಘಟನೆಗಳನ್ನು ಪಾಕಿಸ್ತಾನ ನಿಗ್ರಹಿಸಬೇಕು ಎಂದು ಅಮೆರಿಕ ಸಂಸದ ಬ್ರಾಡ್ ಶೆರ್ಮನ್ ಅವರು ಆಗ್ರಹಿಸಿದ್ದಾರೆ.</p>.<p>ಭಾರತೀಯ ರಾಯಭಾರ ಕಚೇರಿ ಆಯೋಜಿಸಿದ್ದ ‘ಭಯೋತ್ಪಾದನೆಯಿಂದ ಮನುಕುಲಕ್ಕೆ ಉಂಟಾಗಿರುವ ಹಾನಿ’ ಎಂಬ ವಿಷಯಾಧಾರಿತ ಪ್ರದರ್ಶನದಲ್ಲಿ ಮಾತನಾಡಿದ ಶೆರ್ಮನ್ ಅವರು, ಪಹಲ್ಗಾಮ್ ಉಗ್ರ ದಾಳಿಯಲ್ಲಿ ಮೃತಪಟ್ಟ 26 ಜನರನ್ನು ಸ್ಮರಿಸಿದರು.</p>.<p>ದಾಳಿಕೋರರನ್ನು ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್ಎಫ್) ಎಂದು ಗುರುತಿಸಲಾಗಿದ್ದು, ಧರ್ಮದ ಆಧಾರದ ಮೇಲೆ ಮುಗ್ಧ ಜನರನ್ನು ಹತ್ಯೆ ಮಾಡಲಾಗಿದೆ. ಈ ಗುಂಪು ಪಾಕಿಸ್ತಾನದಲ್ಲಿ ಆಶ್ರಯ ಪಡೆದಿರುವ ಲಷ್ಕರ್–ಎ–ತಯಬಾ ಸಂಘಟನೆಯೊಂದಿಗೆ ಸಂಬಂಧ ಹೊಂದಿದೆ ಎಂದು ಕಂಡುಬರುತ್ತದೆ ಎಂದು ಹೇಳಿದರು.</p>.<p class="title">‘ಲಷ್ಕರ್–ಎ– ತಯಬಾ, ಜೈಶ್–ಎ–ಮೊಹಮ್ಮದ್ ಮತ್ತು ಇತರ ಭಯೋತ್ಪಾದಕ ಗುಂಪುಗಳನ್ನು ನಿಗ್ರಹಿಸುವಂತೆ ಪಾಕಿಸ್ತಾನ ಸರ್ಕಾರವನ್ನು ಒತ್ತಾಯಿಸಲು ಈ ಸಂದರ್ಭವನ್ನು ಬಳಸಿಕೊಳ್ಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>