<p><strong>ವಾಷಿಂಗ್ಟನ್</strong>: ಅಪರೂಪದ ಖನಿಜಗಳ ರಪ್ತುಗಳ ಮೇಲೆ ಚೀನಾ ವಿಧಿಸಿರುವ ನಿರ್ಬಂಧವು ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಸಂಘರ್ಷಕ್ಕೆ ಕಾರಣವಾಗಿದೆ. ಈ ಸಂದರ್ಭದಲ್ಲಿ ಅಮೆರಿಕವು ಭಾರತ ಸೇರಿದಂತೆ ಇತರ ಮೈತ್ರಿ ದೇಶಗಳ ಬೆಂಬಲವನ್ನು ನಿರೀಕ್ಷಿಸುತ್ತಿದೆ ಎಂದು ಅಮೆರಿಕದ ಹಣಕಾಸು ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಅವರು ತಿಳಿಸಿದ್ದಾರೆ.</p>.<p>ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ ಅವರು, ‘ ಚೀನಾ ತನ್ನ ನಿಲುವಿನಿಂದ ಜಾಗತಿಕ ಪೂರೈಕೆ ಸರಪಳಿಗೆ ಧಕ್ಕೆ ತರುತ್ತಿರುವುದಲ್ಲದೆ, ಮುಕ್ತ ಜಗತ್ತಿನ ಕೈಗಾರಿಕಾ ನೆಲೆಯನ್ನು ಬುಡಮೇಲು ಮಾಡಲು ಪ್ರಯತ್ನಿಸುತ್ತಿದೆ. ಇದು ಚೀನಾ ಮತ್ತು ಇಡೀ ಜಗತ್ತಿನ ನಡುವೆ ನಡೆಯುತ್ತಿರುವ ಸಂಘರ್ಷವಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p class="title">‘ಚೀನಾ ನಮ್ಮ ಆರ್ಥಿಕತೆಯ ಮೇಲೆ ನಿಯಂತ್ರಣ ಸಾಧಿಸಲು ಅವಕಾಶ ನೀಡುವುದಿಲ್ಲ. ಎಲ್ಲ ಆಯಾಮಗಳಿಂದ ನಮ್ಮ ಸಾರ್ವಭೌಮತ್ವ ರಕ್ಷಿಸಿಕೊಳ್ಳಲು ಪ್ರಯತ್ನಿಸುತ್ತೇವೆ. ಈ ನಿಟ್ಟಿನಲ್ಲಿ ನಾವು ಈಗಾಗಲೇ ಮಿತ್ರಪಕ್ಷಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಇದೇ ವಾರ ಸಭೆ ನಡೆಸಲು ನಿರ್ಧರಿಸಿದ್ದು, ಸುಸ್ಥಿರ ಜಾಗತಿಕ ಬೆಂಬಲಕ್ಕಾಗಿ ಯುರೋಪಿಯನ್ ರಾಷ್ಟ್ರಗಳು, ಭಾರತ ಸೇರಿದಂತೆ ಏಷ್ಯಾದ ಇತರೆ ದೇಶಗಳು ಸಹಾಯ ಮಾಡುತ್ತವೆ ಎಂದು ನಿರೀಕ್ಷಿಸುತ್ತೇವೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್</strong>: ಅಪರೂಪದ ಖನಿಜಗಳ ರಪ್ತುಗಳ ಮೇಲೆ ಚೀನಾ ವಿಧಿಸಿರುವ ನಿರ್ಬಂಧವು ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಸಂಘರ್ಷಕ್ಕೆ ಕಾರಣವಾಗಿದೆ. ಈ ಸಂದರ್ಭದಲ್ಲಿ ಅಮೆರಿಕವು ಭಾರತ ಸೇರಿದಂತೆ ಇತರ ಮೈತ್ರಿ ದೇಶಗಳ ಬೆಂಬಲವನ್ನು ನಿರೀಕ್ಷಿಸುತ್ತಿದೆ ಎಂದು ಅಮೆರಿಕದ ಹಣಕಾಸು ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಅವರು ತಿಳಿಸಿದ್ದಾರೆ.</p>.<p>ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ ಅವರು, ‘ ಚೀನಾ ತನ್ನ ನಿಲುವಿನಿಂದ ಜಾಗತಿಕ ಪೂರೈಕೆ ಸರಪಳಿಗೆ ಧಕ್ಕೆ ತರುತ್ತಿರುವುದಲ್ಲದೆ, ಮುಕ್ತ ಜಗತ್ತಿನ ಕೈಗಾರಿಕಾ ನೆಲೆಯನ್ನು ಬುಡಮೇಲು ಮಾಡಲು ಪ್ರಯತ್ನಿಸುತ್ತಿದೆ. ಇದು ಚೀನಾ ಮತ್ತು ಇಡೀ ಜಗತ್ತಿನ ನಡುವೆ ನಡೆಯುತ್ತಿರುವ ಸಂಘರ್ಷವಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p class="title">‘ಚೀನಾ ನಮ್ಮ ಆರ್ಥಿಕತೆಯ ಮೇಲೆ ನಿಯಂತ್ರಣ ಸಾಧಿಸಲು ಅವಕಾಶ ನೀಡುವುದಿಲ್ಲ. ಎಲ್ಲ ಆಯಾಮಗಳಿಂದ ನಮ್ಮ ಸಾರ್ವಭೌಮತ್ವ ರಕ್ಷಿಸಿಕೊಳ್ಳಲು ಪ್ರಯತ್ನಿಸುತ್ತೇವೆ. ಈ ನಿಟ್ಟಿನಲ್ಲಿ ನಾವು ಈಗಾಗಲೇ ಮಿತ್ರಪಕ್ಷಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಇದೇ ವಾರ ಸಭೆ ನಡೆಸಲು ನಿರ್ಧರಿಸಿದ್ದು, ಸುಸ್ಥಿರ ಜಾಗತಿಕ ಬೆಂಬಲಕ್ಕಾಗಿ ಯುರೋಪಿಯನ್ ರಾಷ್ಟ್ರಗಳು, ಭಾರತ ಸೇರಿದಂತೆ ಏಷ್ಯಾದ ಇತರೆ ದೇಶಗಳು ಸಹಾಯ ಮಾಡುತ್ತವೆ ಎಂದು ನಿರೀಕ್ಷಿಸುತ್ತೇವೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>