<p><strong>ವಾಷಿಂಗ್ಟನ್</strong>: ಔಷಧ ಉತ್ಪಾದನಾ ವಲಯಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರವು ಸಂಶೋಧನಾ ಮತ್ತು ಅಭಿವೃದ್ಧಿ ನೀತಿಯನ್ನು ರೂಪಿಸಬೇಕು ಎಂದು ಅಮೆರಿಕದ ಔಷದ ಉತ್ಪಾದಕ ಸಂಸ್ಥೆಗಳು ಬಯಸಿವೆ.</p>.<p>ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು 2023– 24ನೇ ಸಾಲಿನ ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿರುವಂತೆಯೇ ಈ ಕುರಿತ ಬೇಡಿಕೆ ಹೊರಬಿದ್ದಿದೆ. ಕೇಂದ್ರ ಬಜೆಟ್ ಫೆ. 1ರಂದು ಮಂಡನೆಯಾಲಿದೆ.</p>.<p>ಅಮೆರಿಕ –ಭಾರತ ವಾಣಿಜ್ಯ ಸಂಸ್ಥೆಗಳ ಒಕ್ಕೂಟದ (ಯುಎಸ್ಎಐಸಿ) ಅಧ್ಯಕ್ಷ ಕರುಣ್ ರಿಷಿ ಈ ಕುರಿತು ಹೇಳಿಕೆ ನೀಡಿದ್ದಾರೆ. ಯುಎಸ್ಎಐಸಿ 16 ವರ್ಷಗಳಿಂದ ಭಾರತ–ಅಮೆರಿಕ ಆರೋಗ್ಯ ಶೃಂಗಸಭೆ ಆಯೋಜಿಸುತ್ತಿದೆ. </p>.<p>ಬಯೊಫಾರ್ಮಾ ವಲಯಕ್ಕೆ ಅನ್ವಯಿಸಿ ಬಜೆಟ್ ಸಂಶೋಧನೆ ಮತ್ತು ಅಭಿವೃದ್ಧಿ ಆಧರಿತ ಬೆಳವಣಿಗೆಗೆ ಒತ್ತು ನೀಡಬೇಕು. ಸಮರ್ಪಕ ನೀತಿಯು ಭಾರತವು ಈ ಕ್ಷೇತ್ರದಲ್ಲಿ ವಿಶ್ವದಲ್ಲೇ ಮುಂಚೂಣಿಗೆ ಬರಲು ನೆರವಾಗಬಹುದು ಎಂದು ಕರುಣ್ ರಿಷಿ ಅವರು ಅಭಿಪ್ರಾಯಪಟ್ಟಿದ್ದಾರೆ. </p>.<p>ರಾಷ್ಟ್ರೀಯ ಭದ್ರತೆ ಹಾಗೂ ಜಾಗತಿಕ ಪೂರೈಕೆ ವ್ಯವಸ್ಥೆಯನ್ನು ಬಲಪಡಿಸಲು ಸಂಶೋಧನೆ ಮತ್ತು ಅಭಿವೃದ್ಧಿ, ಉತ್ಪಾದನೆ, ಮುಖ್ಯವಾಗಿ ಎಪಿಐ (ಉಪ ಔಷಧ ವಸ್ತುಗಳು) ಉತ್ಪಾದನೆಗೆ ಒತ್ತು ನೀಡಬೇಕಿದೆ. ಇದೊಂದು ಸವಾಲಿನ ಕೆಲಸವಾದರೂ ಹಣಕಾಸು ಸಚಿವರು ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು ಎಂದು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್</strong>: ಔಷಧ ಉತ್ಪಾದನಾ ವಲಯಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರವು ಸಂಶೋಧನಾ ಮತ್ತು ಅಭಿವೃದ್ಧಿ ನೀತಿಯನ್ನು ರೂಪಿಸಬೇಕು ಎಂದು ಅಮೆರಿಕದ ಔಷದ ಉತ್ಪಾದಕ ಸಂಸ್ಥೆಗಳು ಬಯಸಿವೆ.</p>.<p>ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು 2023– 24ನೇ ಸಾಲಿನ ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿರುವಂತೆಯೇ ಈ ಕುರಿತ ಬೇಡಿಕೆ ಹೊರಬಿದ್ದಿದೆ. ಕೇಂದ್ರ ಬಜೆಟ್ ಫೆ. 1ರಂದು ಮಂಡನೆಯಾಲಿದೆ.</p>.<p>ಅಮೆರಿಕ –ಭಾರತ ವಾಣಿಜ್ಯ ಸಂಸ್ಥೆಗಳ ಒಕ್ಕೂಟದ (ಯುಎಸ್ಎಐಸಿ) ಅಧ್ಯಕ್ಷ ಕರುಣ್ ರಿಷಿ ಈ ಕುರಿತು ಹೇಳಿಕೆ ನೀಡಿದ್ದಾರೆ. ಯುಎಸ್ಎಐಸಿ 16 ವರ್ಷಗಳಿಂದ ಭಾರತ–ಅಮೆರಿಕ ಆರೋಗ್ಯ ಶೃಂಗಸಭೆ ಆಯೋಜಿಸುತ್ತಿದೆ. </p>.<p>ಬಯೊಫಾರ್ಮಾ ವಲಯಕ್ಕೆ ಅನ್ವಯಿಸಿ ಬಜೆಟ್ ಸಂಶೋಧನೆ ಮತ್ತು ಅಭಿವೃದ್ಧಿ ಆಧರಿತ ಬೆಳವಣಿಗೆಗೆ ಒತ್ತು ನೀಡಬೇಕು. ಸಮರ್ಪಕ ನೀತಿಯು ಭಾರತವು ಈ ಕ್ಷೇತ್ರದಲ್ಲಿ ವಿಶ್ವದಲ್ಲೇ ಮುಂಚೂಣಿಗೆ ಬರಲು ನೆರವಾಗಬಹುದು ಎಂದು ಕರುಣ್ ರಿಷಿ ಅವರು ಅಭಿಪ್ರಾಯಪಟ್ಟಿದ್ದಾರೆ. </p>.<p>ರಾಷ್ಟ್ರೀಯ ಭದ್ರತೆ ಹಾಗೂ ಜಾಗತಿಕ ಪೂರೈಕೆ ವ್ಯವಸ್ಥೆಯನ್ನು ಬಲಪಡಿಸಲು ಸಂಶೋಧನೆ ಮತ್ತು ಅಭಿವೃದ್ಧಿ, ಉತ್ಪಾದನೆ, ಮುಖ್ಯವಾಗಿ ಎಪಿಐ (ಉಪ ಔಷಧ ವಸ್ತುಗಳು) ಉತ್ಪಾದನೆಗೆ ಒತ್ತು ನೀಡಬೇಕಿದೆ. ಇದೊಂದು ಸವಾಲಿನ ಕೆಲಸವಾದರೂ ಹಣಕಾಸು ಸಚಿವರು ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು ಎಂದು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>