ಹತ್ತು ವರ್ಷಗಳ ಹಿಂದೆ ಮುಂಬೈನಲ್ಲಿ ಭಯೋತ್ಪಾದಕರು ನಡೆಸಿದ್ದ ಅಟ್ಟಹಾಸದಲ್ಲಿ 160 ಮಂದಿ ಸಾವಿಗೀಡಾಗಿದ್ದರು ಹಾಗೂ ನೂರಾರು ಮಂದಿ ಗಾಯಗೊಂಡಿದ್ದರು. ದಾಳಿಯಲ್ಲಿ ಹುತಾತ್ಮರಾದ ಯೋಧರು, ಪೊಲೀಸರನ್ನು ಸ್ಮರಿಸಿ ಸೋಮವಾರ ದೇಶದಾದ್ಯಂತ ಗೌರವ ಸಮರ್ಪಿಸಲಾಯಿತು. ಇದೇ ಸಂದರ್ಭದಲ್ಲಿ ಅಮೆರಿಕ 26/11 ದಾಳಿಯ ರುವಾರಿಯ ಸುಳಿವು ನೀಡಿದವರಿಗೆ ₹35 ಕೋಟಿ ಬಹುಮಾನ ನೀಡುವುದಾಗಿಯೂ ಘೋಷಿಸಿತು.