<p><strong>ಕರಾಕಸ್:</strong> ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರಾಡ್ರಿಗಸ್ ಅವರು ಶುಕ್ರವಾರ ಕ್ಷಮಾದಾನ ಮಸೂದೆಯನ್ನು ಘೋಷಿಸಿದ್ದಾರೆ.</p>.<p>ರಾಜಕೀಯ ಕಾರಣಗಳಿಗಾಗಿ ಬಂಧನದಲ್ಲಿರುವ ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು, ಮಾನವ ಹಕ್ಕುಗಳ ಕಾರ್ಯಕರ್ತರು ಸೇರಿದಂತೆ ನೂರಾರು ಕೈದಿಗಳು ಬಿಡುಗಡೆ ಆಗುವ ಸಾಧ್ಯತೆಯಿದೆ. ಇದು ಅಮೆರಿಕ ಬೆಂಬಲಿತ ವಿರೋಧ ಪಕ್ಷದ ಬಹು ದಿನಗಳ ಬೇಡಿಕೆಯಾಗಿತ್ತು. </p>.<p>ಜನವರಿ 3ರಂದು ಅಮೆರಿಕದ ಪಡೆಗಳು ಮಿಂಚಿನ ಕಾರ್ಯಾಚರಣೆ ನಡೆಸಿ ವೆನೆಜುವೆಲಾದ ಅಧ್ಯಕ್ಷ ನಿಕೊಲಸ್ ಮಡೊರೊ ಮತ್ತು ಅವರ ಪತ್ನಿಯನ್ನು ವಶಕ್ಕೆ ಪಡೆದು, ನ್ಯೂಯಾರ್ಕ್ಗೆ ಕರೆದೊಯ್ದ ನಂತರ, ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ರಾಡ್ರಿಗಸ್ ಈ ಮಸೂದೆ ತರುವುದಾಗಿ ಹೇಳಿದ್ದರು. </p>.<p>ನ್ಯಾಯಮೂರ್ತಿಗಳು, ಸಚಿವರು, ಸೇನಾ ಅಧಿಕಾರಿಗಳು ಮತ್ತು ಸರ್ಕಾರಿ ಅಧಿಕಾರಿಗಳ ಸಭೆಯಲ್ಲಿ ಅವರು ಶುಕ್ರವಾರ ಈ ಕುರಿತು ಘೋಷಿಸಿದರು. ಈ ಮಸೂದೆಯನ್ನು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ತುರ್ತಾಗಿ ಮಂಡಿಸಲಾಗುತ್ತದೆ ಎಂದೂ ತಿಳಿಸಿದರು. </p>.<p>ದೇಶದಲ್ಲಿ ನ್ಯಾಯ ಮತ್ತು ಸಹಬಾಳ್ವೆಯನ್ನು ಮರು ಸ್ಥಾಪಿಸಲು ಇದರಿಂದ ಸಾಧ್ಯವಾಗುತ್ತದೆ ಎಂದರು. </p>.<p>ಅಂದಾಜಿನ ಪ್ರಕಾರ, ವೆನೆಜುವೆಲಾದಲ್ಲಿ 711 ಕೈದಿಗಳು ಬಂಧನ ಕೇಂದ್ರಗಳಲ್ಲಿದ್ದು, ಅವರಲ್ಲಿ 183 ಮಂದಿಗೆ ಶಿಕ್ಷೆಯಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕರಾಕಸ್:</strong> ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರಾಡ್ರಿಗಸ್ ಅವರು ಶುಕ್ರವಾರ ಕ್ಷಮಾದಾನ ಮಸೂದೆಯನ್ನು ಘೋಷಿಸಿದ್ದಾರೆ.</p>.<p>ರಾಜಕೀಯ ಕಾರಣಗಳಿಗಾಗಿ ಬಂಧನದಲ್ಲಿರುವ ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು, ಮಾನವ ಹಕ್ಕುಗಳ ಕಾರ್ಯಕರ್ತರು ಸೇರಿದಂತೆ ನೂರಾರು ಕೈದಿಗಳು ಬಿಡುಗಡೆ ಆಗುವ ಸಾಧ್ಯತೆಯಿದೆ. ಇದು ಅಮೆರಿಕ ಬೆಂಬಲಿತ ವಿರೋಧ ಪಕ್ಷದ ಬಹು ದಿನಗಳ ಬೇಡಿಕೆಯಾಗಿತ್ತು. </p>.<p>ಜನವರಿ 3ರಂದು ಅಮೆರಿಕದ ಪಡೆಗಳು ಮಿಂಚಿನ ಕಾರ್ಯಾಚರಣೆ ನಡೆಸಿ ವೆನೆಜುವೆಲಾದ ಅಧ್ಯಕ್ಷ ನಿಕೊಲಸ್ ಮಡೊರೊ ಮತ್ತು ಅವರ ಪತ್ನಿಯನ್ನು ವಶಕ್ಕೆ ಪಡೆದು, ನ್ಯೂಯಾರ್ಕ್ಗೆ ಕರೆದೊಯ್ದ ನಂತರ, ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ರಾಡ್ರಿಗಸ್ ಈ ಮಸೂದೆ ತರುವುದಾಗಿ ಹೇಳಿದ್ದರು. </p>.<p>ನ್ಯಾಯಮೂರ್ತಿಗಳು, ಸಚಿವರು, ಸೇನಾ ಅಧಿಕಾರಿಗಳು ಮತ್ತು ಸರ್ಕಾರಿ ಅಧಿಕಾರಿಗಳ ಸಭೆಯಲ್ಲಿ ಅವರು ಶುಕ್ರವಾರ ಈ ಕುರಿತು ಘೋಷಿಸಿದರು. ಈ ಮಸೂದೆಯನ್ನು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ತುರ್ತಾಗಿ ಮಂಡಿಸಲಾಗುತ್ತದೆ ಎಂದೂ ತಿಳಿಸಿದರು. </p>.<p>ದೇಶದಲ್ಲಿ ನ್ಯಾಯ ಮತ್ತು ಸಹಬಾಳ್ವೆಯನ್ನು ಮರು ಸ್ಥಾಪಿಸಲು ಇದರಿಂದ ಸಾಧ್ಯವಾಗುತ್ತದೆ ಎಂದರು. </p>.<p>ಅಂದಾಜಿನ ಪ್ರಕಾರ, ವೆನೆಜುವೆಲಾದಲ್ಲಿ 711 ಕೈದಿಗಳು ಬಂಧನ ಕೇಂದ್ರಗಳಲ್ಲಿದ್ದು, ಅವರಲ್ಲಿ 183 ಮಂದಿಗೆ ಶಿಕ್ಷೆಯಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>