<p><strong>ಒಟ್ಟಾವ: </strong>ಕೆನಡಾದ ನಯಾಗರದಲ್ಲಿ ನಡೆಯುತ್ತಿರುವ ಜಿ–7 ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ, ಅಮೆರಿಕ, ಉಕ್ರೇನ್ ಹಾಗೂ ಸೌದಿ ಅರೇಬಿಯಾದ ಸಚಿವರನ್ನು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.</p>.ASEAN Summit: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೊ ಜೊತೆ ಜೈಶಂಕರ್ ಚರ್ಚೆ.<p>ಇತ್ತೀಚಿನ ಬೆಳವಣಿಗೆಗಳು ಹಾಗೂ ಪರಸ್ಪರ ಆಸಕ್ತಿಯ ಪ್ರಾದೇಶಿಕ ವಿಷಯಗಳು ಬಗ್ಗೆ ಚರ್ಚಿಸಲು ಈ ಸಭೆ ನಡೆಯುತ್ತಿದೆ.</p><p>ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ಅವರೊಂದಿಗೆ ಮಾತುಕತೆ ನಡೆಸಿದ ಜೈಶಂಕರ್ ವ್ಯಾಪಾರ ಹಾಗೂ ಪೂರೈಕೆ ಸರಪಳಿ ಬಗ್ಗೆ ಚರ್ಚಿಸಿದ್ದಾರೆ.</p>.ಭಾರತ – ಕೆನಡಾ ಸಂಬಂಧ ವೃದ್ಧಿಗೆ ರೂಪುರೇಷೆ ರಚನೆ: ಜೈಶಂಕರ್.<p>ಉಕ್ರೇನ್ನಲ್ಲಿ ರಷ್ಯಾ ನಡೆಸುತ್ತಿರುವ ‘ವಿಶೇಷ ಸೇನಾ ಕಾರ್ಯಾಚರಣೆ’ ಬಗ್ಗೆಯೂ ಮಾತುಕತೆ ನಡೆದಿದೆ.</p><p>‘ಉಕ್ರೇನ್ ಸಂಘರ್ಷ, ಮಧ್ಯಪ್ರಾಚ್ಯದ ಬಿಕ್ಕಟ್ಟು ಹಾಗೂ ಇಂಡೋ–ಪೆಸಿಫಿಕ್ ವಲಯದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದೆವು’ ಎಂದು ಜೈಶಂಕರ್ ಎಕ್ಸ್ ಪೋಸ್ಟ್ನಲ್ಲಿ ಹೇಳಿದ್ದಾರೆ.</p><p>ದೆಹಲಿಯಲ್ಲಿ ನಡೆದ ಕಾರು ಸ್ಫೋಟದ ಬಗ್ಗೆ ಇದೇ ವೇಳೆ ರುಬಿಯೋ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಮುಂದಿನ ತಿಂಗಳು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಭಾರತ ಭೇಟಿ ನಿಗದಿಯಾಗಿದ್ದು, ಅದಕ್ಕೂ ಮುನ್ನ ಈ ಮಾತುಕತೆ ನಡೆದಿದೆ.</p>.ಅಫ್ಗಾನಿಸ್ತಾನದ ಕಾಬೂಲ್ನಲ್ಲಿ ರಾಯಭಾರಿ ಕಚೇರಿ ಪುನರಾರಂಭ: ಜೈಶಂಕರ್ ಘೋಷಣೆ.<p>ಉಕ್ರೇನ್ ವಿದೇಶಾಂಗ ಸಚಿವ ಅಂದ್ರಿಲ್ ಸಿಭಿಯಾ ಜೊತೆ ಉಪಯುಕ್ತ ಮಾತುಕತೆ ನಡೆಯಿತು ಎಂದು ಜೈ ಶಂಕರ್ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ.</p><p>‘ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಉಕ್ರೇನಿನ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು’ ಎಂದು ಅವರು ಹೇಳಿದ್ದಾರೆ.</p><p>ಸೌದಿ ಅರೇಬಿಯಾದ ವಿದೇಶಾಂಗ ಸಚಿವ ರಾಜಕುಮಾರ ಫೈಸಲ್ ಬಿನ್ ಫರ್ಹಾನ್ ಅವರನ್ನೂ ಭೇಟಿಯಾದ ಜೈಶಂಕರ್, ದ್ವಿಪಕ್ಷೀಯ ಸಂಬಂಧ, ಪ್ರಾದೇಶಿಕ ಸಹಕಾರ, ಸಂಪರ್ಕ ಹಾಗೂ ಇಂಧನ ಸೇರಿ ಹಲವು ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.</p>.ಹೊಸ ವಾಣಿಜ್ಯ ವ್ಯವಸ್ಥೆ | ಜಾಗತಿಕ ಕಾರ್ಯಪಡೆಯ ಅಗತ್ಯವಿದೆ: ಜೈಶಂಕರ್.<p>ಕೆನಡಾದ ವಿದೇಶಾಂಗ ಸಚಿವೆ ಅನಿತಾ ಆನಂದ್ ಅವರ ಜೊತೆ, ವ್ಯಾಪಾರ, ಇಂಧನ, ಭದ್ರತೆ ವಲಯದಲ್ಲಿ ಭಾರತ–ಕೆನಡಾ ಸಹಕಾರದ ಬಗ್ಗೆ ಚರ್ಚೆ ನಡೆಸಿದ್ದಾರೆ.</p><p>ಜರ್ಮನಿ, ಫ್ರಾನ್ಸ್, ಬ್ರೆಜಿಲ್ ಹಾಗೂ ಯು.ಕೆ ವಿದೇಶಾಂಗ ಸಚಿವರೊಂದಿಗೂ ಜೈಶಂಕರ್ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ.</p>.ಭಾರತ–ಜರ್ಮನಿ ಸಹಕಾರ ವೃದ್ಧಿ ಅನಿವಾರ್ಯ: ಜೈಶಂಕರ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಒಟ್ಟಾವ: </strong>ಕೆನಡಾದ ನಯಾಗರದಲ್ಲಿ ನಡೆಯುತ್ತಿರುವ ಜಿ–7 ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ, ಅಮೆರಿಕ, ಉಕ್ರೇನ್ ಹಾಗೂ ಸೌದಿ ಅರೇಬಿಯಾದ ಸಚಿವರನ್ನು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.</p>.ASEAN Summit: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೊ ಜೊತೆ ಜೈಶಂಕರ್ ಚರ್ಚೆ.<p>ಇತ್ತೀಚಿನ ಬೆಳವಣಿಗೆಗಳು ಹಾಗೂ ಪರಸ್ಪರ ಆಸಕ್ತಿಯ ಪ್ರಾದೇಶಿಕ ವಿಷಯಗಳು ಬಗ್ಗೆ ಚರ್ಚಿಸಲು ಈ ಸಭೆ ನಡೆಯುತ್ತಿದೆ.</p><p>ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ಅವರೊಂದಿಗೆ ಮಾತುಕತೆ ನಡೆಸಿದ ಜೈಶಂಕರ್ ವ್ಯಾಪಾರ ಹಾಗೂ ಪೂರೈಕೆ ಸರಪಳಿ ಬಗ್ಗೆ ಚರ್ಚಿಸಿದ್ದಾರೆ.</p>.ಭಾರತ – ಕೆನಡಾ ಸಂಬಂಧ ವೃದ್ಧಿಗೆ ರೂಪುರೇಷೆ ರಚನೆ: ಜೈಶಂಕರ್.<p>ಉಕ್ರೇನ್ನಲ್ಲಿ ರಷ್ಯಾ ನಡೆಸುತ್ತಿರುವ ‘ವಿಶೇಷ ಸೇನಾ ಕಾರ್ಯಾಚರಣೆ’ ಬಗ್ಗೆಯೂ ಮಾತುಕತೆ ನಡೆದಿದೆ.</p><p>‘ಉಕ್ರೇನ್ ಸಂಘರ್ಷ, ಮಧ್ಯಪ್ರಾಚ್ಯದ ಬಿಕ್ಕಟ್ಟು ಹಾಗೂ ಇಂಡೋ–ಪೆಸಿಫಿಕ್ ವಲಯದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದೆವು’ ಎಂದು ಜೈಶಂಕರ್ ಎಕ್ಸ್ ಪೋಸ್ಟ್ನಲ್ಲಿ ಹೇಳಿದ್ದಾರೆ.</p><p>ದೆಹಲಿಯಲ್ಲಿ ನಡೆದ ಕಾರು ಸ್ಫೋಟದ ಬಗ್ಗೆ ಇದೇ ವೇಳೆ ರುಬಿಯೋ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಮುಂದಿನ ತಿಂಗಳು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಭಾರತ ಭೇಟಿ ನಿಗದಿಯಾಗಿದ್ದು, ಅದಕ್ಕೂ ಮುನ್ನ ಈ ಮಾತುಕತೆ ನಡೆದಿದೆ.</p>.ಅಫ್ಗಾನಿಸ್ತಾನದ ಕಾಬೂಲ್ನಲ್ಲಿ ರಾಯಭಾರಿ ಕಚೇರಿ ಪುನರಾರಂಭ: ಜೈಶಂಕರ್ ಘೋಷಣೆ.<p>ಉಕ್ರೇನ್ ವಿದೇಶಾಂಗ ಸಚಿವ ಅಂದ್ರಿಲ್ ಸಿಭಿಯಾ ಜೊತೆ ಉಪಯುಕ್ತ ಮಾತುಕತೆ ನಡೆಯಿತು ಎಂದು ಜೈ ಶಂಕರ್ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ.</p><p>‘ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಉಕ್ರೇನಿನ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು’ ಎಂದು ಅವರು ಹೇಳಿದ್ದಾರೆ.</p><p>ಸೌದಿ ಅರೇಬಿಯಾದ ವಿದೇಶಾಂಗ ಸಚಿವ ರಾಜಕುಮಾರ ಫೈಸಲ್ ಬಿನ್ ಫರ್ಹಾನ್ ಅವರನ್ನೂ ಭೇಟಿಯಾದ ಜೈಶಂಕರ್, ದ್ವಿಪಕ್ಷೀಯ ಸಂಬಂಧ, ಪ್ರಾದೇಶಿಕ ಸಹಕಾರ, ಸಂಪರ್ಕ ಹಾಗೂ ಇಂಧನ ಸೇರಿ ಹಲವು ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.</p>.ಹೊಸ ವಾಣಿಜ್ಯ ವ್ಯವಸ್ಥೆ | ಜಾಗತಿಕ ಕಾರ್ಯಪಡೆಯ ಅಗತ್ಯವಿದೆ: ಜೈಶಂಕರ್.<p>ಕೆನಡಾದ ವಿದೇಶಾಂಗ ಸಚಿವೆ ಅನಿತಾ ಆನಂದ್ ಅವರ ಜೊತೆ, ವ್ಯಾಪಾರ, ಇಂಧನ, ಭದ್ರತೆ ವಲಯದಲ್ಲಿ ಭಾರತ–ಕೆನಡಾ ಸಹಕಾರದ ಬಗ್ಗೆ ಚರ್ಚೆ ನಡೆಸಿದ್ದಾರೆ.</p><p>ಜರ್ಮನಿ, ಫ್ರಾನ್ಸ್, ಬ್ರೆಜಿಲ್ ಹಾಗೂ ಯು.ಕೆ ವಿದೇಶಾಂಗ ಸಚಿವರೊಂದಿಗೂ ಜೈಶಂಕರ್ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ.</p>.ಭಾರತ–ಜರ್ಮನಿ ಸಹಕಾರ ವೃದ್ಧಿ ಅನಿವಾರ್ಯ: ಜೈಶಂಕರ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>