<p><strong>ನ್ಯೂಯಾರ್ಕ್: </strong>9/11 ಉಗ್ರರ ದಾಳಿಯನ್ನು, ದಾಳಿಗೆ ಬಲಿಯಾದವರನ್ನು ಮತ್ತು ಇಂತಹ ಹೀನ ಕೃತ್ಯದಿಂದ ಕಲಿತ ಪಾಠಗಳನ್ನು ಎಂದಿಗೂ ಮರೆಯಬಾರದು. ಯಾವುದೇ ರೀತಿಯ ಭಯೋತ್ಪಾದನೆಯನ್ನು ಖಂಡಿಸಲೇಬೇಕು ಎಂದು ಭಾರತ ಹೇಳಿದೆ.</p>.<p>ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ಕಚೇರಿಯು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ರೀನತ್ ಸಂಧು ಅವರು ದಾಳಿಯಲ್ಲಿ ಬಲಿಯಾದವರಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.</p>.<p>2001 ಮತ್ತು 1993ರ ಉಗ್ರರ ದಾಳಿಯಲ್ಲಿ ಸಾವಿಗೀಡಾದ 2,983 ಜನರ ಹೆಸರುಗಳನ್ನು ಸ್ಮಾರಕಗಳ ಬಳಿ ಬರೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು 2014ರ ಸೆಪ್ಟೆಂಬರ್ನಲ್ಲಿ ಈ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದ್ದರು.</p>.<p>ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76ನೇ ಅಧಿವೇಶನದ ಉನ್ನತ ಮಟ್ಟದ ವಾರ್ಷಿಕ ಸಪ್ತಾಹದ ಮುನ್ನಾ ದಿನ ವಿಶ್ವಸಂಸ್ಥೆಯು ಈ ದಾಳಿಯ 20ನೇ ವಾರ್ಷಿಕ ಆಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿತ್ತು.</p>.<p>ವಿವಿಧ ರಾಷ್ಟ್ರಗಳ ನೇತಾರರು, ಸಚಿವರು, ನಿಯೋಗದ ಸದಸ್ಯರು ಸೇರಿದಂತೆ 300ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯೂಯಾರ್ಕ್: </strong>9/11 ಉಗ್ರರ ದಾಳಿಯನ್ನು, ದಾಳಿಗೆ ಬಲಿಯಾದವರನ್ನು ಮತ್ತು ಇಂತಹ ಹೀನ ಕೃತ್ಯದಿಂದ ಕಲಿತ ಪಾಠಗಳನ್ನು ಎಂದಿಗೂ ಮರೆಯಬಾರದು. ಯಾವುದೇ ರೀತಿಯ ಭಯೋತ್ಪಾದನೆಯನ್ನು ಖಂಡಿಸಲೇಬೇಕು ಎಂದು ಭಾರತ ಹೇಳಿದೆ.</p>.<p>ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ಕಚೇರಿಯು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ರೀನತ್ ಸಂಧು ಅವರು ದಾಳಿಯಲ್ಲಿ ಬಲಿಯಾದವರಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.</p>.<p>2001 ಮತ್ತು 1993ರ ಉಗ್ರರ ದಾಳಿಯಲ್ಲಿ ಸಾವಿಗೀಡಾದ 2,983 ಜನರ ಹೆಸರುಗಳನ್ನು ಸ್ಮಾರಕಗಳ ಬಳಿ ಬರೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು 2014ರ ಸೆಪ್ಟೆಂಬರ್ನಲ್ಲಿ ಈ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದ್ದರು.</p>.<p>ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76ನೇ ಅಧಿವೇಶನದ ಉನ್ನತ ಮಟ್ಟದ ವಾರ್ಷಿಕ ಸಪ್ತಾಹದ ಮುನ್ನಾ ದಿನ ವಿಶ್ವಸಂಸ್ಥೆಯು ಈ ದಾಳಿಯ 20ನೇ ವಾರ್ಷಿಕ ಆಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿತ್ತು.</p>.<p>ವಿವಿಧ ರಾಷ್ಟ್ರಗಳ ನೇತಾರರು, ಸಚಿವರು, ನಿಯೋಗದ ಸದಸ್ಯರು ಸೇರಿದಂತೆ 300ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>