<p><strong>ಢಾಕಾ:</strong> ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಮರಳಿ ಢಾಕಾಗೆ ಕಳುಹಿಸಿಕೊಡಬೇಕು ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಸೋಮವಾರ ಭಾರತಕ್ಕೆ ರಾಜತಾಂತ್ರಿಕ ಮನವಿ ಸಲ್ಲಿಸಿದೆ.</p><p>ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬಳಿಕ ಬಾಂಗ್ಲಾದೇಶದ ಸರ್ಕಾರ ಪತನಗೊಂಡು, 16 ವರ್ಷಗಳಿಂದ ಪ್ರಧಾನಿಯಾಗಿದ್ದ ಶೇಖ್ ಹಸೀನಾ (77) ಅವರು ಆಗಸ್ಟ್ 5ರಂದು ಭಾರತಕ್ಕೆ ಪಲಾಯನಗೈದಿದ್ದರು. </p><p>‘ನರಮೇಧ ಹಾಗೂ ಮಾನವೀಯತೆ ಮೇಲೆ ಎಸಗಿದ ಅಪರಾಧ’ದ ಕಾರಣ ಶೇಖ್ ಹಸೀನಾ, ಸಂಪುಟ ಸಚಿವರು, ಸಲಹೆಗಾರರು, ಸೇನಾಧಿಕಾರಿಗಳ ವಿರುದ್ಧ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ (ಐಸಿಟಿ) ಬಂಧನ ವಾರಂಟ್ ಹೊರಡಿಸಿತ್ತು.</p><p>‘ಭಾರತ ಸರ್ಕಾರಕ್ಕೆ ನಾವು ಅಧಿಕೃತ ರಾಜತಾಂತ್ರಿಕ ಸಂದೇಶವನ್ನು ಕಳುಹಿಸಿದ್ದು, ನ್ಯಾಯಾಂಗ ಪ್ರಕ್ರಿಯೆಗೆ ಒಳಪಡಿಸಲಿಕ್ಕಾಗಿ ಶೇಖ್ ಹಸೀನಾ ಅವರನ್ನು ವಾಪಸ್ ಕಳುಹಿಸಬೇಕು ಎಂದು ಕೇಳಿದ್ದೇವೆ’ ಎಂದು ವಿದೇಶಾಂಗ ಇಲಾಖೆಯ ಸಲಹೆಗಾರ ತೌಹೀದ್ ಹೊಸೈನ್ ತಿಳಿಸಿದರು.</p><p>‘ಪದಚ್ಯುತಗೊಂಡ ಬಾಂಗ್ಲಾದೇಶದ ಪ್ರಧಾನಿಯನ್ನು ವಾಪಸ್ ಕರೆಸುವ ಸಂಬಂಧ ವಿದೇಶಾಂಗ ಇಲಾಖೆಗೆ ಪತ್ರ ಬರೆದಿದ್ದೇವೆ’ ಎಂದು ಗೃಹ ಸಚಿವಾಲಯದ ಸಲಹೆಗಾರ ಜಹಾಂಗೀರ್ ಆಲಂ ತಿಳಿಸಿದ್ದರು. </p><p>ಭಾರತ ಹಾಗೂ ಬಾಂಗ್ಲಾದೇಶದ ನಡುವೆ ಈಗಾಗಲೇ ‘ಹಸ್ತಾಂತರ ಒಪ್ಪಂದ’ವಿದ್ದು, ಅದರ ಅನ್ವಯವೇ ಹಸೀನಾ ಅವರನ್ನು ಮರಳಿ ದೇಶಕ್ಕೆ ಕರೆಸಿಕೊಳ್ಳಲಾಗುವುದು ಎಂದು ಆಲಂ ಸ್ಪಷ್ಟಪಡಿಸಿದ್ದರು.</p>.ಬಾಂಗ್ಲಾದೇಶ | ಚಿನ್ಮಯ್ ಕೃಷ್ಣ ದಾಸ್ ಬಿಡುಗಡೆಗೆ ಶೇಖ್ ಹಸೀನಾ ಆಗ್ರಹ.ಬಾಂಗ್ಲಾದೇಶ | ಶೇಖ್ ಹಸೀನಾ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ನ್ಯಾಯಮಂಡಳಿ.ಬಾಂಗ್ಲಾದೇಶ: ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಮತ್ತೆ 5 ಕೊಲೆ ಪ್ರಕರಣ ದಾಖಲು.ಶೇಖ್ ಹಸೀನಾ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡಲು ಬಾಂಗ್ಲಾ ಸರ್ಕಾರ ನಿರ್ಧಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಮರಳಿ ಢಾಕಾಗೆ ಕಳುಹಿಸಿಕೊಡಬೇಕು ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಸೋಮವಾರ ಭಾರತಕ್ಕೆ ರಾಜತಾಂತ್ರಿಕ ಮನವಿ ಸಲ್ಲಿಸಿದೆ.</p><p>ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬಳಿಕ ಬಾಂಗ್ಲಾದೇಶದ ಸರ್ಕಾರ ಪತನಗೊಂಡು, 16 ವರ್ಷಗಳಿಂದ ಪ್ರಧಾನಿಯಾಗಿದ್ದ ಶೇಖ್ ಹಸೀನಾ (77) ಅವರು ಆಗಸ್ಟ್ 5ರಂದು ಭಾರತಕ್ಕೆ ಪಲಾಯನಗೈದಿದ್ದರು. </p><p>‘ನರಮೇಧ ಹಾಗೂ ಮಾನವೀಯತೆ ಮೇಲೆ ಎಸಗಿದ ಅಪರಾಧ’ದ ಕಾರಣ ಶೇಖ್ ಹಸೀನಾ, ಸಂಪುಟ ಸಚಿವರು, ಸಲಹೆಗಾರರು, ಸೇನಾಧಿಕಾರಿಗಳ ವಿರುದ್ಧ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ (ಐಸಿಟಿ) ಬಂಧನ ವಾರಂಟ್ ಹೊರಡಿಸಿತ್ತು.</p><p>‘ಭಾರತ ಸರ್ಕಾರಕ್ಕೆ ನಾವು ಅಧಿಕೃತ ರಾಜತಾಂತ್ರಿಕ ಸಂದೇಶವನ್ನು ಕಳುಹಿಸಿದ್ದು, ನ್ಯಾಯಾಂಗ ಪ್ರಕ್ರಿಯೆಗೆ ಒಳಪಡಿಸಲಿಕ್ಕಾಗಿ ಶೇಖ್ ಹಸೀನಾ ಅವರನ್ನು ವಾಪಸ್ ಕಳುಹಿಸಬೇಕು ಎಂದು ಕೇಳಿದ್ದೇವೆ’ ಎಂದು ವಿದೇಶಾಂಗ ಇಲಾಖೆಯ ಸಲಹೆಗಾರ ತೌಹೀದ್ ಹೊಸೈನ್ ತಿಳಿಸಿದರು.</p><p>‘ಪದಚ್ಯುತಗೊಂಡ ಬಾಂಗ್ಲಾದೇಶದ ಪ್ರಧಾನಿಯನ್ನು ವಾಪಸ್ ಕರೆಸುವ ಸಂಬಂಧ ವಿದೇಶಾಂಗ ಇಲಾಖೆಗೆ ಪತ್ರ ಬರೆದಿದ್ದೇವೆ’ ಎಂದು ಗೃಹ ಸಚಿವಾಲಯದ ಸಲಹೆಗಾರ ಜಹಾಂಗೀರ್ ಆಲಂ ತಿಳಿಸಿದ್ದರು. </p><p>ಭಾರತ ಹಾಗೂ ಬಾಂಗ್ಲಾದೇಶದ ನಡುವೆ ಈಗಾಗಲೇ ‘ಹಸ್ತಾಂತರ ಒಪ್ಪಂದ’ವಿದ್ದು, ಅದರ ಅನ್ವಯವೇ ಹಸೀನಾ ಅವರನ್ನು ಮರಳಿ ದೇಶಕ್ಕೆ ಕರೆಸಿಕೊಳ್ಳಲಾಗುವುದು ಎಂದು ಆಲಂ ಸ್ಪಷ್ಟಪಡಿಸಿದ್ದರು.</p>.ಬಾಂಗ್ಲಾದೇಶ | ಚಿನ್ಮಯ್ ಕೃಷ್ಣ ದಾಸ್ ಬಿಡುಗಡೆಗೆ ಶೇಖ್ ಹಸೀನಾ ಆಗ್ರಹ.ಬಾಂಗ್ಲಾದೇಶ | ಶೇಖ್ ಹಸೀನಾ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ನ್ಯಾಯಮಂಡಳಿ.ಬಾಂಗ್ಲಾದೇಶ: ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಮತ್ತೆ 5 ಕೊಲೆ ಪ್ರಕರಣ ದಾಖಲು.ಶೇಖ್ ಹಸೀನಾ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡಲು ಬಾಂಗ್ಲಾ ಸರ್ಕಾರ ನಿರ್ಧಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>