<p><strong>ವಾಷಿಂಗ್ಟನ್:</strong> ಭಾರತದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕದಲ್ಲಿ ಪ್ರಶ್ನಿಸಿದ್ದ ಪತ್ರಕರ್ತೆಯ ವಿರುದ್ಧ ಆನ್ಲೈನ್ ವೇದಿಕೆಗಳಲ್ಲಿ ನಿಂದನೆ, ಕಿರುಕುಳ ಎದುರಾಗುತ್ತಿವೆ. ಇದನ್ನು ಶ್ವೇತಭವನ ತೀವ್ರವಾಗಿ ಖಂಡಿಸಿದೆ.</p>.<p>ಕಳೆದ ವಾರ ಮೋದಿ ಅವರು ಅಮೆರಿಕ ಪ್ರವಾಸದಲ್ಲಿದ್ದಾಗ, ಅಧ್ಯಕ್ಷ ಜೋ ಬೈಡನ್ ಅವರ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದರು.</p>.<p>ಈ ವೇಳೆ ವಾಲ್ ಸ್ಟ್ರೀಟ್ ಜರ್ನಲ್ನ ಪತ್ರಕರ್ತೆ ಸಬ್ರಿನಾ ಸಿದ್ದಿಕ್ಕಿ ಅವರು, ಭಾರತದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಅವುಗಳ ಸುಧಾರಣೆ ಹಾಗೂ ವಾಕ್ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತು ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದರು.</p>.<p>ಪತ್ರಿಕಾಗೋಷ್ಠಿಯಾದ ಮಾರನೇ ದಿನದಿಂದಲೇ ಆ ಪತ್ರಕರ್ತೆಗೆ ಆನ್ಲೈನ್ ವೇದಿಕೆಗಳ ಮೂಲಕ ನಿಂದನೆಗಳು ಬರುತ್ತಿವೆ. ಅವರ ಪ್ರಶ್ನೆಗಳು ಯಾರಿಂದಲೋ ‘ಪ್ರೇರಿತ’ವಾಗಿವೆ ಮತ್ತು ಅವರು ‘ಪಾಕಿಸ್ತಾನಿ ಇಸ್ಲಾಮಿಸ್ಟ್’ ಎಂದೆಲ್ಲ ಕೆಲವರು ಅಪಾದನೆಗಳನ್ನು ಮಾಡಿದ್ದಾರೆ.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಶ್ವೇತಭವನದ ಸಮನ್ವಯಕಾರ (ಕಾರ್ಯತಂತ್ರ ಸಂವಹನ) ಜಾನ್ ಕಿರ್ಬಿ, ‘ಈ ಕಿರುಕುಳದ ವರದಿಗಳ ಬಗ್ಗೆ ನಮಗೆ ತಿಳಿದಿದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾದದ್ದು. ಪತ್ರಕರ್ತರಿಗೆ ಎದುರಾಗುವ ಯಾವುದೇ ಬಗೆಯ ಕಿರುಕುಳವನ್ನು ನಾವು ಪೂರ್ಣವಾಗಿ ಖಂಡಿಸುತ್ತೇವೆ’ ಎಂದು ಹೇಳಿದ್ದಾರೆ.</p>.<p>‘ಶ್ವೇತಭವನವು ಪತ್ರಿಕಾ ಸ್ವಾತಂತ್ರ್ಯಕ್ಕೆ ಬದ್ಧವಾಗಿದೆ ಮತ್ತು ಪತ್ರಕರ್ತರಿಗೆ ಎದುರಾಗುವ ಯಾವುದೇ ರೀತಿಯ ಬೆದರಿಕೆ ಅಥವಾ ಕಿರುಕುಳವನ್ನು ಖಂಡಿಸುತ್ತದೆ’ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪಿಯರ್ ಪ್ರತಿಕ್ರಿಯಿಸಿದ್ದಾರೆ.</p>.<p>ದಕ್ಷಿಣ ಏಷ್ಯಾ ಪತ್ರಕರ್ತರ ಸಂಘ (ಎಸ್ಎಜೆಎ) ಕೂಡ ಸಿದ್ದಿಕಿ ಅವರಿಗೆ ಬೆಂಬಲ ನೀಡಿದೆ.</p>.<p>ಸಿದ್ದಿಕಿ ಅವರ ಪ್ರಶ್ನಗೆ, ಜಂಟಿ ಪತ್ರಿಕಾಗೋಷ್ಠಿಯಲ್ಲಿ ಉತ್ತರಿಸಿದ್ದ ಪ್ರಧಾನಿ ಮೋದಿ ಅವರು, ಭಾರತದ ಪ್ರಜಾಪ್ರಭುತ್ವ ಮತ್ತು ತಮ್ಮ ಸರ್ಕಾರದ ಸಾಧನೆಗಳು ಹಾಗೂ ಮಾನವ ಹಕ್ಕುಗಳ ಕುರಿತು ಬಲವಾಗಿ ಸಮರ್ಥಿಸಿಕೊಂಡಿದ್ದರು. ತಮ್ಮ ಸರ್ಕಾರದ ಮೂಲ ಅಡಿಪಾಯವೇ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಯಾಸ್’ ಆಗಿದೆ. ಅಂದರೆ ನಾವು ಎಲ್ಲರ ವಿಶ್ವಾಸದ ಜತೆಗೆ ಒಟ್ಟಾಗಿ ಮುಂದೆ ಸಾಗುತ್ತಿದ್ದೇವೆ ಎಂದು ಹೇಳಿದ್ದರು.</p>.<p>‘ಸಂವಿಧಾನದ ಮೂಲ ತತ್ವಗಳ ಆಶಯದಂತೆ ನಮ್ಮ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಹೀಗಾಗಿ ನಮ್ಮಲ್ಲಿ ಜಾತಿ, ಧರ್ಮ, ಲಿಂಗ, ಧರ್ಮದ ಆಧಾರದ ಮೇಲೆ ತಾರತಮ್ಯ ಸಾಧ್ಯವಿಲ್ಲ’ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್:</strong> ಭಾರತದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕದಲ್ಲಿ ಪ್ರಶ್ನಿಸಿದ್ದ ಪತ್ರಕರ್ತೆಯ ವಿರುದ್ಧ ಆನ್ಲೈನ್ ವೇದಿಕೆಗಳಲ್ಲಿ ನಿಂದನೆ, ಕಿರುಕುಳ ಎದುರಾಗುತ್ತಿವೆ. ಇದನ್ನು ಶ್ವೇತಭವನ ತೀವ್ರವಾಗಿ ಖಂಡಿಸಿದೆ.</p>.<p>ಕಳೆದ ವಾರ ಮೋದಿ ಅವರು ಅಮೆರಿಕ ಪ್ರವಾಸದಲ್ಲಿದ್ದಾಗ, ಅಧ್ಯಕ್ಷ ಜೋ ಬೈಡನ್ ಅವರ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದರು.</p>.<p>ಈ ವೇಳೆ ವಾಲ್ ಸ್ಟ್ರೀಟ್ ಜರ್ನಲ್ನ ಪತ್ರಕರ್ತೆ ಸಬ್ರಿನಾ ಸಿದ್ದಿಕ್ಕಿ ಅವರು, ಭಾರತದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಅವುಗಳ ಸುಧಾರಣೆ ಹಾಗೂ ವಾಕ್ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತು ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದರು.</p>.<p>ಪತ್ರಿಕಾಗೋಷ್ಠಿಯಾದ ಮಾರನೇ ದಿನದಿಂದಲೇ ಆ ಪತ್ರಕರ್ತೆಗೆ ಆನ್ಲೈನ್ ವೇದಿಕೆಗಳ ಮೂಲಕ ನಿಂದನೆಗಳು ಬರುತ್ತಿವೆ. ಅವರ ಪ್ರಶ್ನೆಗಳು ಯಾರಿಂದಲೋ ‘ಪ್ರೇರಿತ’ವಾಗಿವೆ ಮತ್ತು ಅವರು ‘ಪಾಕಿಸ್ತಾನಿ ಇಸ್ಲಾಮಿಸ್ಟ್’ ಎಂದೆಲ್ಲ ಕೆಲವರು ಅಪಾದನೆಗಳನ್ನು ಮಾಡಿದ್ದಾರೆ.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಶ್ವೇತಭವನದ ಸಮನ್ವಯಕಾರ (ಕಾರ್ಯತಂತ್ರ ಸಂವಹನ) ಜಾನ್ ಕಿರ್ಬಿ, ‘ಈ ಕಿರುಕುಳದ ವರದಿಗಳ ಬಗ್ಗೆ ನಮಗೆ ತಿಳಿದಿದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾದದ್ದು. ಪತ್ರಕರ್ತರಿಗೆ ಎದುರಾಗುವ ಯಾವುದೇ ಬಗೆಯ ಕಿರುಕುಳವನ್ನು ನಾವು ಪೂರ್ಣವಾಗಿ ಖಂಡಿಸುತ್ತೇವೆ’ ಎಂದು ಹೇಳಿದ್ದಾರೆ.</p>.<p>‘ಶ್ವೇತಭವನವು ಪತ್ರಿಕಾ ಸ್ವಾತಂತ್ರ್ಯಕ್ಕೆ ಬದ್ಧವಾಗಿದೆ ಮತ್ತು ಪತ್ರಕರ್ತರಿಗೆ ಎದುರಾಗುವ ಯಾವುದೇ ರೀತಿಯ ಬೆದರಿಕೆ ಅಥವಾ ಕಿರುಕುಳವನ್ನು ಖಂಡಿಸುತ್ತದೆ’ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪಿಯರ್ ಪ್ರತಿಕ್ರಿಯಿಸಿದ್ದಾರೆ.</p>.<p>ದಕ್ಷಿಣ ಏಷ್ಯಾ ಪತ್ರಕರ್ತರ ಸಂಘ (ಎಸ್ಎಜೆಎ) ಕೂಡ ಸಿದ್ದಿಕಿ ಅವರಿಗೆ ಬೆಂಬಲ ನೀಡಿದೆ.</p>.<p>ಸಿದ್ದಿಕಿ ಅವರ ಪ್ರಶ್ನಗೆ, ಜಂಟಿ ಪತ್ರಿಕಾಗೋಷ್ಠಿಯಲ್ಲಿ ಉತ್ತರಿಸಿದ್ದ ಪ್ರಧಾನಿ ಮೋದಿ ಅವರು, ಭಾರತದ ಪ್ರಜಾಪ್ರಭುತ್ವ ಮತ್ತು ತಮ್ಮ ಸರ್ಕಾರದ ಸಾಧನೆಗಳು ಹಾಗೂ ಮಾನವ ಹಕ್ಕುಗಳ ಕುರಿತು ಬಲವಾಗಿ ಸಮರ್ಥಿಸಿಕೊಂಡಿದ್ದರು. ತಮ್ಮ ಸರ್ಕಾರದ ಮೂಲ ಅಡಿಪಾಯವೇ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಯಾಸ್’ ಆಗಿದೆ. ಅಂದರೆ ನಾವು ಎಲ್ಲರ ವಿಶ್ವಾಸದ ಜತೆಗೆ ಒಟ್ಟಾಗಿ ಮುಂದೆ ಸಾಗುತ್ತಿದ್ದೇವೆ ಎಂದು ಹೇಳಿದ್ದರು.</p>.<p>‘ಸಂವಿಧಾನದ ಮೂಲ ತತ್ವಗಳ ಆಶಯದಂತೆ ನಮ್ಮ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಹೀಗಾಗಿ ನಮ್ಮಲ್ಲಿ ಜಾತಿ, ಧರ್ಮ, ಲಿಂಗ, ಧರ್ಮದ ಆಧಾರದ ಮೇಲೆ ತಾರತಮ್ಯ ಸಾಧ್ಯವಿಲ್ಲ’ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>