<p>ಲಷ್ಕರ್–ಎ–ತಯಬಾ (ಎಲ್ಇಟಿ) ಸಂಘಟನೆಯ ಪ್ರಮುಖ ನಾಯಕ ಹಾಗೂ ಮೋಸ್ಟ್ ವಾಂಟೆಡ್ ಉಗ್ರರಲ್ಲಿ ಒಬ್ಬನಾದ ಫೈಸಲ್ ನದೀಮ್ ಅಲಿಯಾಸ್ ಅಬು ಕ್ವತಲ್, ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝೇಲಂ ಜಿಲ್ಲೆಯ ದಿನಾ ಪ್ರದೇಶದಲ್ಲಿ ಶನಿವಾರ ರಾತ್ರಿ ಹತ್ಯೆಯಾಗಿದ್ದಾನೆ. ಈ ಬಗ್ಗೆ 'ಇಂಡಿಯಾ ಟುಡೇ' ವರದಿ ಮಾಡಿದೆ.</p><p>ಕ್ವತಲ್ ರಕ್ಷಣೆಯ ಹೊಣೆಯನ್ನು ಪಾಕಿಸ್ತಾನ ಸೇನೆಯೇ ಹೊತ್ತಿತ್ತು. ಎಲ್ಇಟಿಯೂ ಹೆಚ್ಚುವರಿ ಭದ್ರತೆ ಒದಗಿಸಿತ್ತು. ಆದಾಗ್ಯೂ, ಆತನ ಮೇಲೆ ಶನಿವಾರ ರಾತ್ರಿ 7ರ ಸುಮಾರಿಗೆ ಅಪರಿಚಿತರು ದಾಳಿ ಮಾಡಿದ್ದಾರೆ. ಅವರು, 15–20 ಸುತ್ತು ಗುಂಡು ಹಾರಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p><p>ಕ್ವತಲ್, ಲಷ್ಕರ್–ಎ–ತಯಬಾ ಸಂಸ್ಥಾಪಕ ಹಾಗೂ 2008ರ ನವೆಂಬರ್ 26ರಂದು ಮುಂಬೈ ಮೇಲೆ ನಡೆದ ದಾಳಿಯ ಮಾಸ್ಟರ್ಮೈಂಡ್ ಹಫೀಜ್ ಸಯೀದ್ನ ಸಂಬಂಧಿ ಹಾಗೂ ಸಹಚರ. ಆತನನ್ನು ಸಂಘಟನೆಯ ಮುಖ್ಯ ಕಾರ್ಯಾಚರಣಾ ಕಮಾಂಡರ್ ಆಗಿ ನೇಮಿಸಿದ್ದ ಸಯೀದ್, ಕಾಶ್ಮೀರದಲ್ಲಿ ದಾಳಿಗಳನ್ನು ನಡೆಸಲು ಆದೇಶಿಸಿದ್ದ.</p>.<p>ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಡಾಂಗ್ರಿಯಲ್ಲಿ 2023ರ ಜನವರಿಯ 1ರಂದು ನಡೆದ ದಾಳಿಗೆ ಸಂಬಂಧಿಸಿದಂತೆ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕ್ವತಲ್ ವಿರುದ್ಧ ಆರೋಪ ಪಟ್ಟಿ ದಾಖಲಿಸಿದೆ. ಆ ದಿನ ಉಗ್ರರು ಏಕಾಏಕಿ ನಡೆಸಿದ ಗುಂಡಿನ ಈ ದಾಳಿಯಲ್ಲಿ 7 ನಾಗರಿಕರು ಮೃತಪಟ್ಟು, 13 ಮಂದಿ ಗಾಯಗೊಂಡಿದ್ದರು.</p><p>ಸಂಘಟನೆಗೆ ಉಗ್ರರ ಸೇರ್ಪಡೆ ಹಾಗೂ ಭಾರತದ ಗಡಿಯುದ್ದಕ್ಕೂ ನಿಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕ್ವತಲ್, ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರನ್ನು ಗುರಿಯಾಗಿಸಿ, ಅದರಲ್ಲೂ ಅಲ್ಪಸಂಖ್ಯಾತರು, ಭದ್ರತಾ ಸಿಬ್ಬಂದಿ ಮೇಲೆ ದಾಳಿ ಸಂಘಟಿಸುತ್ತಿದ್ದ.</p><p>2002–03ರಲ್ಲಿ ಭಾರತದ ಗಡಿ ಪ್ರವೇಶಿಸಿದ್ದ ಕ್ವತಲ್ಗೆ, ಅಲಿ, ಹಬೀಬುಲ್ಲಾ, ನೌಮನ್, ಮೊಹಮ್ಮದ್ ಕ್ವಾಸಿಂ ಎಂಬಿತ್ಯಾದಿ ಹೆಸರುಗಳಿವೆ.</p>.ಬಲೂಚಿಸ್ತಾನದಲ್ಲಿ ಮತ್ತೊಂದು ದಾಳಿ: ಯೋಧರಿದ್ದ ಬಸ್ ಮೇಲೆ ಬಾಂಬ್, ಐವರು ಹುತಾತ್ಮ.33 ಉಗ್ರರ ಹತ್ಯೆ; 31 ಯೋಧರು ಹುತಾತ್ಮ, 354 ಒತ್ತೆಯಾಳುಗಳ ರಕ್ಷಣೆ: ಪಾಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಷ್ಕರ್–ಎ–ತಯಬಾ (ಎಲ್ಇಟಿ) ಸಂಘಟನೆಯ ಪ್ರಮುಖ ನಾಯಕ ಹಾಗೂ ಮೋಸ್ಟ್ ವಾಂಟೆಡ್ ಉಗ್ರರಲ್ಲಿ ಒಬ್ಬನಾದ ಫೈಸಲ್ ನದೀಮ್ ಅಲಿಯಾಸ್ ಅಬು ಕ್ವತಲ್, ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝೇಲಂ ಜಿಲ್ಲೆಯ ದಿನಾ ಪ್ರದೇಶದಲ್ಲಿ ಶನಿವಾರ ರಾತ್ರಿ ಹತ್ಯೆಯಾಗಿದ್ದಾನೆ. ಈ ಬಗ್ಗೆ 'ಇಂಡಿಯಾ ಟುಡೇ' ವರದಿ ಮಾಡಿದೆ.</p><p>ಕ್ವತಲ್ ರಕ್ಷಣೆಯ ಹೊಣೆಯನ್ನು ಪಾಕಿಸ್ತಾನ ಸೇನೆಯೇ ಹೊತ್ತಿತ್ತು. ಎಲ್ಇಟಿಯೂ ಹೆಚ್ಚುವರಿ ಭದ್ರತೆ ಒದಗಿಸಿತ್ತು. ಆದಾಗ್ಯೂ, ಆತನ ಮೇಲೆ ಶನಿವಾರ ರಾತ್ರಿ 7ರ ಸುಮಾರಿಗೆ ಅಪರಿಚಿತರು ದಾಳಿ ಮಾಡಿದ್ದಾರೆ. ಅವರು, 15–20 ಸುತ್ತು ಗುಂಡು ಹಾರಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p><p>ಕ್ವತಲ್, ಲಷ್ಕರ್–ಎ–ತಯಬಾ ಸಂಸ್ಥಾಪಕ ಹಾಗೂ 2008ರ ನವೆಂಬರ್ 26ರಂದು ಮುಂಬೈ ಮೇಲೆ ನಡೆದ ದಾಳಿಯ ಮಾಸ್ಟರ್ಮೈಂಡ್ ಹಫೀಜ್ ಸಯೀದ್ನ ಸಂಬಂಧಿ ಹಾಗೂ ಸಹಚರ. ಆತನನ್ನು ಸಂಘಟನೆಯ ಮುಖ್ಯ ಕಾರ್ಯಾಚರಣಾ ಕಮಾಂಡರ್ ಆಗಿ ನೇಮಿಸಿದ್ದ ಸಯೀದ್, ಕಾಶ್ಮೀರದಲ್ಲಿ ದಾಳಿಗಳನ್ನು ನಡೆಸಲು ಆದೇಶಿಸಿದ್ದ.</p>.<p>ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಡಾಂಗ್ರಿಯಲ್ಲಿ 2023ರ ಜನವರಿಯ 1ರಂದು ನಡೆದ ದಾಳಿಗೆ ಸಂಬಂಧಿಸಿದಂತೆ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕ್ವತಲ್ ವಿರುದ್ಧ ಆರೋಪ ಪಟ್ಟಿ ದಾಖಲಿಸಿದೆ. ಆ ದಿನ ಉಗ್ರರು ಏಕಾಏಕಿ ನಡೆಸಿದ ಗುಂಡಿನ ಈ ದಾಳಿಯಲ್ಲಿ 7 ನಾಗರಿಕರು ಮೃತಪಟ್ಟು, 13 ಮಂದಿ ಗಾಯಗೊಂಡಿದ್ದರು.</p><p>ಸಂಘಟನೆಗೆ ಉಗ್ರರ ಸೇರ್ಪಡೆ ಹಾಗೂ ಭಾರತದ ಗಡಿಯುದ್ದಕ್ಕೂ ನಿಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕ್ವತಲ್, ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರನ್ನು ಗುರಿಯಾಗಿಸಿ, ಅದರಲ್ಲೂ ಅಲ್ಪಸಂಖ್ಯಾತರು, ಭದ್ರತಾ ಸಿಬ್ಬಂದಿ ಮೇಲೆ ದಾಳಿ ಸಂಘಟಿಸುತ್ತಿದ್ದ.</p><p>2002–03ರಲ್ಲಿ ಭಾರತದ ಗಡಿ ಪ್ರವೇಶಿಸಿದ್ದ ಕ್ವತಲ್ಗೆ, ಅಲಿ, ಹಬೀಬುಲ್ಲಾ, ನೌಮನ್, ಮೊಹಮ್ಮದ್ ಕ್ವಾಸಿಂ ಎಂಬಿತ್ಯಾದಿ ಹೆಸರುಗಳಿವೆ.</p>.ಬಲೂಚಿಸ್ತಾನದಲ್ಲಿ ಮತ್ತೊಂದು ದಾಳಿ: ಯೋಧರಿದ್ದ ಬಸ್ ಮೇಲೆ ಬಾಂಬ್, ಐವರು ಹುತಾತ್ಮ.33 ಉಗ್ರರ ಹತ್ಯೆ; 31 ಯೋಧರು ಹುತಾತ್ಮ, 354 ಒತ್ತೆಯಾಳುಗಳ ರಕ್ಷಣೆ: ಪಾಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>