<p><strong>ಕಾಬೂಲ್:</strong> ತಾಲಿಬಾನ್ ಉಗ್ರರ ವಶದಲ್ಲಿದಲ್ಲಿರುವ ಅಫ್ಗಾನಿಸ್ತಾನದಿಂದ ಬೇರೆಡೆಗೆ ತೆರಳಲು ಕಾಬೂಲ್ ವಿಮಾನ ನಿಲ್ದಾಣದಲ್ಲಿ ಜನ ಮುಗಿಬಿದ್ದ ವಿಡಿಯೊಗಳನ್ನು ನೋಡಿದ್ದೇವೆ. ಆದರೆ, ಇದಕ್ಕೆ ಅಪವಾದವೆಂಬಂತೆ ಕಾಬೂಲ್ನಲ್ಲಿ ಉಳಿದಿರುವ ಏಕೈಕ ಹಿಂದೂ ಅರ್ಚಕರೊಬ್ಬರು ದೇಶ ಬಿಟ್ಟು ಬರುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.</p>.<p>ರತನ್ ನಾಥ್ ದೇವಾಲಯದ ಅರ್ಚಕ ಪಂಡಿತ್ ರಾಜೇಶ್ ಕುಮಾರ್ ಎಂಬವರು ಇಂತಹ ನಿಲುವು ತಳೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳು ವೈರಲ್ ಆಗಿವೆ.</p>.<p>ಅಫ್ಗಾನಿಸ್ತಾನದಲ್ಲಿ ತಾಲಿಬಾನ್ಗಳು ತಮ್ಮ ಆಕ್ರಮಣವನ್ನು ಮುಂದುವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರ್ ಅವರನ್ನು ಕಾಬೂಲ್ನಿಂದ ಹೊರಹೋಗುವಂತೆ ಒತ್ತಾಯಿಸಲಾಗಿದೆ. ಅಲ್ಲಿರುವ ಹಲವು ಹಿಂದೂಗಳು ಅವರ ಪ್ರಯಾಣ ಮತ್ತು ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲು ಮುಂದಾಗಿದ್ದರು. ಆದರೆ, ದೇವಾಲಯದ ಬಗ್ಗೆ ಅಚಲ ನಿಷ್ಠೆ ಹೊಂದಿರುವ ಅವರು ದೇಗುಲ ಬಿಟ್ಟು ತೆರಳಲು ಸಿದ್ಧರಿಲ್ಲ. ತಪ್ಪಿಸಿಕೊಳ್ಳುವ ಮಾರ್ಗವನ್ನು ಹುಡುಕುತ್ತಿಲ್ಲ.</p>.<p>ಈ ಬಗ್ಗೆ ತಮ್ಮ ಟ್ವಿಟರ್ ಹ್ಯಾಂಡಲ್ @ಭಾರದ್ವಾಜ್ ಸ್ಪೀ್ಕ್ಸ್ನಲ್ಲಿ, ಕಾಬೂಲ್ ನ ರತನ್ ನಾಥ್ ದೇವಸ್ಥಾನದ ಅರ್ಚಕ ಪಂಡಿತ್ ರಾಜೇಶ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದು, ‘ಕೆಲವು ಹಿಂದೂಗಳು ಕಾಬೂಲ್ ಬಿಟ್ಟು ಹೋಗುವಂತೆ ನನ್ನನ್ನು ಒತ್ತಾಯಿಸಿದ್ದಾರೆ. ನನ್ನ ಪ್ರಯಾಣಕ್ಕೆ ಮತ್ತು ಉಳಿಯಲು ಅವಕಾಶ ಮಾಡಿಕೊಡುವುದಾಗಿ ಹೇಳಿದರು. ಆದರೆ, ನನ್ನ ಪೂರ್ವಜರು ನೂರಾರು ವರ್ಷಗಳಿಂದ ಈ ಮಂದಿರಕ್ಕೆ ಸೇವೆ ಸಲ್ಲಿಸಿದ್ದಾರೆ. ನಾನು ಅದನ್ನು ಕೈಬಿಡುವುದಿಲ್ಲ. ತಾಲಿಬಾನ್ ನನ್ನನ್ನು ಕೊಂದರೆ, ನಾನು ಅದನ್ನು ನನ್ನ ಸೇವೆ ಎಂದು ಪರಿಗಣಿಸುತ್ತೇನೆ’. ಎಂದು ಹೇಳಿದ್ಧಾರೆ.</p>.<p>ಭಾನುವಾರ ತಾಲಿಬಾನ್ ಉಗ್ರರು ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ಗೆ ದಾಳಿ ಮಾಡುತ್ತಿದ್ದಂತೆ ಅಧ್ಯಕ್ಷ ಅಶ್ರಫ್ ಘನಿ ಪಲಾಯನ ಮಾಡಿದರು. ಬಳಿಕ, ಕಾಬೂಲ್ ಬಿಟ್ಟು ತೆರಳಲು ಸಾವಿರಾರು ಭಯಗ್ರಸ್ತ ಆಫ್ಗಾನ್ ಜನರು ಏರ್ಪೋರ್ಟ್ಗೆ ಮುಗಿಬಿದ್ದಿದ್ದರು.</p>.<p>ಈ ಮಧ್ಯೆ, ಅಫ್ಗಾನಿಸ್ತಾನದಲ್ಲಿರುವ ಸಿಖ್ ಮತ್ತು ಹಿಂದೂ ಸಮುದಾಯಗಳ ಪ್ರತಿನಿಧಿಗಳೊಂದಿಗೆ ಸಂಪರ್ಕದಲ್ಲಿದ್ದು, ಅವರ ಸುರಕ್ಷತೆ ಮತ್ತು ಸ್ಥಳಾಂತರಕ್ಕೆ ಎಲ್ಲ ರಿತಿಯ ಕ್ರಮ ಕೈಗೊಳ್ಳುವುದಾಗಿ ವಿದೇಶಾಂಗ ಇಲಾಖೆ ತಿಳಿಸಿದೆ.</p>.<p><strong>ಇದನ್ನೂ ಓದಿ.. <a href="https://www.prajavani.net/technology/social-media/facebook-bans-taliban-supporting-content-858533.html">ತಾಲಿಬಾನ್, ಸಂಬಂಧಿತ ಕಂಟೆಂಟ್ಗಳನ್ನು ನಿಷೇಧಿಸಿದ ಫೇಸ್ಬುಕ್</a></strong><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಬೂಲ್:</strong> ತಾಲಿಬಾನ್ ಉಗ್ರರ ವಶದಲ್ಲಿದಲ್ಲಿರುವ ಅಫ್ಗಾನಿಸ್ತಾನದಿಂದ ಬೇರೆಡೆಗೆ ತೆರಳಲು ಕಾಬೂಲ್ ವಿಮಾನ ನಿಲ್ದಾಣದಲ್ಲಿ ಜನ ಮುಗಿಬಿದ್ದ ವಿಡಿಯೊಗಳನ್ನು ನೋಡಿದ್ದೇವೆ. ಆದರೆ, ಇದಕ್ಕೆ ಅಪವಾದವೆಂಬಂತೆ ಕಾಬೂಲ್ನಲ್ಲಿ ಉಳಿದಿರುವ ಏಕೈಕ ಹಿಂದೂ ಅರ್ಚಕರೊಬ್ಬರು ದೇಶ ಬಿಟ್ಟು ಬರುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.</p>.<p>ರತನ್ ನಾಥ್ ದೇವಾಲಯದ ಅರ್ಚಕ ಪಂಡಿತ್ ರಾಜೇಶ್ ಕುಮಾರ್ ಎಂಬವರು ಇಂತಹ ನಿಲುವು ತಳೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳು ವೈರಲ್ ಆಗಿವೆ.</p>.<p>ಅಫ್ಗಾನಿಸ್ತಾನದಲ್ಲಿ ತಾಲಿಬಾನ್ಗಳು ತಮ್ಮ ಆಕ್ರಮಣವನ್ನು ಮುಂದುವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರ್ ಅವರನ್ನು ಕಾಬೂಲ್ನಿಂದ ಹೊರಹೋಗುವಂತೆ ಒತ್ತಾಯಿಸಲಾಗಿದೆ. ಅಲ್ಲಿರುವ ಹಲವು ಹಿಂದೂಗಳು ಅವರ ಪ್ರಯಾಣ ಮತ್ತು ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲು ಮುಂದಾಗಿದ್ದರು. ಆದರೆ, ದೇವಾಲಯದ ಬಗ್ಗೆ ಅಚಲ ನಿಷ್ಠೆ ಹೊಂದಿರುವ ಅವರು ದೇಗುಲ ಬಿಟ್ಟು ತೆರಳಲು ಸಿದ್ಧರಿಲ್ಲ. ತಪ್ಪಿಸಿಕೊಳ್ಳುವ ಮಾರ್ಗವನ್ನು ಹುಡುಕುತ್ತಿಲ್ಲ.</p>.<p>ಈ ಬಗ್ಗೆ ತಮ್ಮ ಟ್ವಿಟರ್ ಹ್ಯಾಂಡಲ್ @ಭಾರದ್ವಾಜ್ ಸ್ಪೀ್ಕ್ಸ್ನಲ್ಲಿ, ಕಾಬೂಲ್ ನ ರತನ್ ನಾಥ್ ದೇವಸ್ಥಾನದ ಅರ್ಚಕ ಪಂಡಿತ್ ರಾಜೇಶ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದು, ‘ಕೆಲವು ಹಿಂದೂಗಳು ಕಾಬೂಲ್ ಬಿಟ್ಟು ಹೋಗುವಂತೆ ನನ್ನನ್ನು ಒತ್ತಾಯಿಸಿದ್ದಾರೆ. ನನ್ನ ಪ್ರಯಾಣಕ್ಕೆ ಮತ್ತು ಉಳಿಯಲು ಅವಕಾಶ ಮಾಡಿಕೊಡುವುದಾಗಿ ಹೇಳಿದರು. ಆದರೆ, ನನ್ನ ಪೂರ್ವಜರು ನೂರಾರು ವರ್ಷಗಳಿಂದ ಈ ಮಂದಿರಕ್ಕೆ ಸೇವೆ ಸಲ್ಲಿಸಿದ್ದಾರೆ. ನಾನು ಅದನ್ನು ಕೈಬಿಡುವುದಿಲ್ಲ. ತಾಲಿಬಾನ್ ನನ್ನನ್ನು ಕೊಂದರೆ, ನಾನು ಅದನ್ನು ನನ್ನ ಸೇವೆ ಎಂದು ಪರಿಗಣಿಸುತ್ತೇನೆ’. ಎಂದು ಹೇಳಿದ್ಧಾರೆ.</p>.<p>ಭಾನುವಾರ ತಾಲಿಬಾನ್ ಉಗ್ರರು ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ಗೆ ದಾಳಿ ಮಾಡುತ್ತಿದ್ದಂತೆ ಅಧ್ಯಕ್ಷ ಅಶ್ರಫ್ ಘನಿ ಪಲಾಯನ ಮಾಡಿದರು. ಬಳಿಕ, ಕಾಬೂಲ್ ಬಿಟ್ಟು ತೆರಳಲು ಸಾವಿರಾರು ಭಯಗ್ರಸ್ತ ಆಫ್ಗಾನ್ ಜನರು ಏರ್ಪೋರ್ಟ್ಗೆ ಮುಗಿಬಿದ್ದಿದ್ದರು.</p>.<p>ಈ ಮಧ್ಯೆ, ಅಫ್ಗಾನಿಸ್ತಾನದಲ್ಲಿರುವ ಸಿಖ್ ಮತ್ತು ಹಿಂದೂ ಸಮುದಾಯಗಳ ಪ್ರತಿನಿಧಿಗಳೊಂದಿಗೆ ಸಂಪರ್ಕದಲ್ಲಿದ್ದು, ಅವರ ಸುರಕ್ಷತೆ ಮತ್ತು ಸ್ಥಳಾಂತರಕ್ಕೆ ಎಲ್ಲ ರಿತಿಯ ಕ್ರಮ ಕೈಗೊಳ್ಳುವುದಾಗಿ ವಿದೇಶಾಂಗ ಇಲಾಖೆ ತಿಳಿಸಿದೆ.</p>.<p><strong>ಇದನ್ನೂ ಓದಿ.. <a href="https://www.prajavani.net/technology/social-media/facebook-bans-taliban-supporting-content-858533.html">ತಾಲಿಬಾನ್, ಸಂಬಂಧಿತ ಕಂಟೆಂಟ್ಗಳನ್ನು ನಿಷೇಧಿಸಿದ ಫೇಸ್ಬುಕ್</a></strong><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>