<p><strong>ಬೀಜಿಂಗ್ : </strong>ಗಾಜಾ ಪಟ್ಟಿಯಲ್ಲಿ ಹೆಚ್ಚುತ್ತಿರುವ ಮಾನವೀಯ ಬಿಕ್ಕಟ್ಟನ್ನು ತಡೆಯಲು ಅಂತರರಾಷ್ಟ್ರೀಯ ಸಮುದಾಯಗಳು ತುರ್ತಾಗಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ.</p><p>ಬೀಜಿಂಗ್ ನಡೆಯುತ್ತಿರುವ ವಿದೇಶಾಂಗ ಸಚಿವರ ಸಭೆಯಲ್ಲಿ ಪ್ಯಾಲೆಸ್ಟೀನ್ , ಇಂಡೋನೇಷ್ಯಾ, ಈಜಿಪ್ಟ್, ಸೌದಿ ಅರೇಬಿಯಾ ಹಾಗೂ ಜೋರ್ಡಾನ್ನ ವಿದೇಶಾಂಗ ಸಚಿವರು ಭಾಗವಹಿಸಿದ್ದರು. ಸಭೆಯಲ್ಲಿ ಪ್ಯಾಲೆಸ್ಟೀನ್–ಇಸ್ರೇಲ್ ನಡುವಿನ ಬಿಕ್ಕಟ್ಟಿನ ಕುರಿತು ಚರ್ಚೆಯಾಗಿದೆ. </p><p>‘ಹಿಂದಿನಿಂದಲೂ ಬೀಜಿಂಗ್ ಮುಸ್ಲಿಂ ರಾಷ್ಟ್ರಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಗಾಜಾದಲ್ಲಿನ ಪರಿಸ್ಥಿತಿಯನ್ನು ಹತೋಟಿಗೆ ತರಲು ನಾವೆಲ್ಲ ಒಟ್ಟಾಗಿ ಕೆಲಸ ಮಾಡಬೇಕಿದೆ. ಮಧ್ಯ ಪ್ರಾಚ್ಯದಲ್ಲಿ ಶಾಂತಿಯನ್ನು ಮರುಸ್ಥಾಪನೆ ಮಾಡಬೇಕಿದೆ’ ಎಂದು ವಾಂಗ್ ತಿಳಿಸಿದರು.</p><p>‘ಗಾಜಾದಲ್ಲಿ ಮಾನವೀಯ ಬಿಕ್ಕಟ್ಟು ಹೆಚ್ಚುತ್ತಿದೆ. ಗಾಜಾದ ಈಗಿನ ಪರಿಸ್ಥಿತಿಯು ಎಲ್ಲ ದೇಶಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಯಾರದ್ದು ಸರಿ, ಯಾರದ್ದು ತಪ್ಪು ಎನ್ನುವುದು ಮುಖ್ಯವಲ್ಲ. ಮಾನವೀಯತೆಯೊಂದೇ ಇಲ್ಲಿ ಮುಖ್ಯ’ ಎಂದರು.</p><p>‘ಗಾಜಾದಲ್ಲಿನ ಪರಿಸ್ಥಿತಿಯನ್ನು ನಿಯಂತ್ರಿಸಲು ಅಂತರರಾಷ್ಟ್ರೀಯ ಸಮುದಾಯಗಳು ತುರ್ತಾಗಿ ಕ್ರಮ ಕೈಗೊಳ್ಳಬೇಕಿದೆ. ಈ ಮಹಾ ಬಿಕ್ಕಟ್ಟು ಮುಂದುವರಿಯದಂತೆ ತಡೆಯಬೇಕಿದೆ’ ಎಂದು ಹೇಳಿದರು.</p><p>ಗಾಜಾದ ಮೇಲೆ ಇಸ್ರೇಲ್ ದಾಳಿಯನ್ನು ಬಲವಾಗಿ ಖಂಡಿಸಿರುವ ಚೀನಾ, ಕದನ ವಿರಾಮ ಘೋಷಿಸುವಂತೆ ಒತ್ತಾಯಿಸಿತ್ತು. ಬಿಕ್ಕಟ್ಟು ಪರಿಹರಿಸಲು ಎರಡು ರಾಜ್ಯ (ಟು ಸ್ಟೇಟ್) ಪರಿಕಲ್ಪನೆಯೊಂದೆ ಸಹಕಾರಿ ಎಂದು ತಿಳಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್ : </strong>ಗಾಜಾ ಪಟ್ಟಿಯಲ್ಲಿ ಹೆಚ್ಚುತ್ತಿರುವ ಮಾನವೀಯ ಬಿಕ್ಕಟ್ಟನ್ನು ತಡೆಯಲು ಅಂತರರಾಷ್ಟ್ರೀಯ ಸಮುದಾಯಗಳು ತುರ್ತಾಗಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ.</p><p>ಬೀಜಿಂಗ್ ನಡೆಯುತ್ತಿರುವ ವಿದೇಶಾಂಗ ಸಚಿವರ ಸಭೆಯಲ್ಲಿ ಪ್ಯಾಲೆಸ್ಟೀನ್ , ಇಂಡೋನೇಷ್ಯಾ, ಈಜಿಪ್ಟ್, ಸೌದಿ ಅರೇಬಿಯಾ ಹಾಗೂ ಜೋರ್ಡಾನ್ನ ವಿದೇಶಾಂಗ ಸಚಿವರು ಭಾಗವಹಿಸಿದ್ದರು. ಸಭೆಯಲ್ಲಿ ಪ್ಯಾಲೆಸ್ಟೀನ್–ಇಸ್ರೇಲ್ ನಡುವಿನ ಬಿಕ್ಕಟ್ಟಿನ ಕುರಿತು ಚರ್ಚೆಯಾಗಿದೆ. </p><p>‘ಹಿಂದಿನಿಂದಲೂ ಬೀಜಿಂಗ್ ಮುಸ್ಲಿಂ ರಾಷ್ಟ್ರಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಗಾಜಾದಲ್ಲಿನ ಪರಿಸ್ಥಿತಿಯನ್ನು ಹತೋಟಿಗೆ ತರಲು ನಾವೆಲ್ಲ ಒಟ್ಟಾಗಿ ಕೆಲಸ ಮಾಡಬೇಕಿದೆ. ಮಧ್ಯ ಪ್ರಾಚ್ಯದಲ್ಲಿ ಶಾಂತಿಯನ್ನು ಮರುಸ್ಥಾಪನೆ ಮಾಡಬೇಕಿದೆ’ ಎಂದು ವಾಂಗ್ ತಿಳಿಸಿದರು.</p><p>‘ಗಾಜಾದಲ್ಲಿ ಮಾನವೀಯ ಬಿಕ್ಕಟ್ಟು ಹೆಚ್ಚುತ್ತಿದೆ. ಗಾಜಾದ ಈಗಿನ ಪರಿಸ್ಥಿತಿಯು ಎಲ್ಲ ದೇಶಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಯಾರದ್ದು ಸರಿ, ಯಾರದ್ದು ತಪ್ಪು ಎನ್ನುವುದು ಮುಖ್ಯವಲ್ಲ. ಮಾನವೀಯತೆಯೊಂದೇ ಇಲ್ಲಿ ಮುಖ್ಯ’ ಎಂದರು.</p><p>‘ಗಾಜಾದಲ್ಲಿನ ಪರಿಸ್ಥಿತಿಯನ್ನು ನಿಯಂತ್ರಿಸಲು ಅಂತರರಾಷ್ಟ್ರೀಯ ಸಮುದಾಯಗಳು ತುರ್ತಾಗಿ ಕ್ರಮ ಕೈಗೊಳ್ಳಬೇಕಿದೆ. ಈ ಮಹಾ ಬಿಕ್ಕಟ್ಟು ಮುಂದುವರಿಯದಂತೆ ತಡೆಯಬೇಕಿದೆ’ ಎಂದು ಹೇಳಿದರು.</p><p>ಗಾಜಾದ ಮೇಲೆ ಇಸ್ರೇಲ್ ದಾಳಿಯನ್ನು ಬಲವಾಗಿ ಖಂಡಿಸಿರುವ ಚೀನಾ, ಕದನ ವಿರಾಮ ಘೋಷಿಸುವಂತೆ ಒತ್ತಾಯಿಸಿತ್ತು. ಬಿಕ್ಕಟ್ಟು ಪರಿಹರಿಸಲು ಎರಡು ರಾಜ್ಯ (ಟು ಸ್ಟೇಟ್) ಪರಿಕಲ್ಪನೆಯೊಂದೆ ಸಹಕಾರಿ ಎಂದು ತಿಳಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>