<p>ಕೈರೊ (ಪಿಟಿಐ): `ಅಧಿಕಾರದಲ್ಲಿ ಮುಂದುವರೆಯಲು ಕಾನೂನು ಅಥವಾ ಅಧಿಕಾರದ ದುರ್ಬಳಕೆ ಮಾಡಿಕೊಂಡಿಲ್ಲ' ಎಂದು ಈಜಿಪ್ಟ್ ಅಧ್ಯಕ್ಷ ಮೊಹಮ್ಮದ್ ಮುರ್ಸಿ ಅವರು ನ್ಯಾಯಾಂಗಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ.</p>.<p>ಹಿರಿಯ ನ್ಯಾಯಮೂರ್ತಿಗಳನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ಅಧ್ಯಕ್ಷರ ಕಚೇರಿಯಿಂದ ಈ ಪ್ರಕಟಣೆ ಹೊರಬಿದ್ದಿದೆ. `ಅಧ್ಯಕ್ಷರ ನಿರ್ಧಾರಗಳನ್ನು ಯಾರೂ ಪ್ರಶ್ನಿಸದಂತೆ ತಾತ್ಕಾಲಿಕ ಕಾನೂನು ರಿಯಾಯ್ತಿ ನೀಡುವ ಶಾಸನವನ್ನು ಜನತೆ ಹಾಗೂ ವಿರೋಧ ಪಕ್ಷಗಳ ಸದಸ್ಯರು ತಪ್ಪು ತಿಳಿದುಕೊಂಡಿದ್ದಾರೆ' ಎಂದು ಪ್ರಕಟಣೆ ತಿಳಿಸಿದೆ.</p>.<p>ತಮ್ಮ ನಿರ್ಧಾರಗಳನ್ನು ಯಾರೂ ಪ್ರಶ್ನಿಸದಂತೆ ವಿಶೇಷ ರಿಯಾಯ್ತಿ ನೀಡುವ ಶಾಸನ ಜಾರಿಗೊಳಿಸುವ ಮೂಲಕ ಅಧ್ಯಕ್ಷ ಮುರ್ಸಿ, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಕಾನೂನಿನ ಸ್ವಾತಂತ್ರ್ಯವನ್ನು ಬಲಿ ಕೊಟ್ಟಿದ್ದಾರೆ ಎಂದು ವಿರೋಧಿಗಳು ಆರೋಪಿಸಿದ್ದಾರೆ.</p>.<p>ಈ ನಿರ್ಣಯ ವಿರೋಧಿಸಿ ಆಂದೋಲನ ನಡೆಸಲು ಅವರು ಉದ್ದೇಶಿಸಿದ್ದಾರೆ. ಇದರಿಂದ ಎಚ್ಚೆತ್ತುಕೊಂಡಿರುವ ಮುರ್ಸಿ ಇದೀಗ ತೇಪೆ ಹಚ್ಚುವ ಕೆಲಸಕ್ಕೆ ಮುಂದಾಗಿದ್ದಾರೆ.ಮುರ್ಸಿ ಸರ್ಕಾರ ಈಜಿಪ್ಟ್ ಜನರ ಭಾವನೆಗಳಿಗೆ ಬೆಲೆ ಕೊಡಬೇಕು ಎಂದು ಶ್ವೇತ ಭವನ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೈರೊ (ಪಿಟಿಐ): `ಅಧಿಕಾರದಲ್ಲಿ ಮುಂದುವರೆಯಲು ಕಾನೂನು ಅಥವಾ ಅಧಿಕಾರದ ದುರ್ಬಳಕೆ ಮಾಡಿಕೊಂಡಿಲ್ಲ' ಎಂದು ಈಜಿಪ್ಟ್ ಅಧ್ಯಕ್ಷ ಮೊಹಮ್ಮದ್ ಮುರ್ಸಿ ಅವರು ನ್ಯಾಯಾಂಗಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ.</p>.<p>ಹಿರಿಯ ನ್ಯಾಯಮೂರ್ತಿಗಳನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ಅಧ್ಯಕ್ಷರ ಕಚೇರಿಯಿಂದ ಈ ಪ್ರಕಟಣೆ ಹೊರಬಿದ್ದಿದೆ. `ಅಧ್ಯಕ್ಷರ ನಿರ್ಧಾರಗಳನ್ನು ಯಾರೂ ಪ್ರಶ್ನಿಸದಂತೆ ತಾತ್ಕಾಲಿಕ ಕಾನೂನು ರಿಯಾಯ್ತಿ ನೀಡುವ ಶಾಸನವನ್ನು ಜನತೆ ಹಾಗೂ ವಿರೋಧ ಪಕ್ಷಗಳ ಸದಸ್ಯರು ತಪ್ಪು ತಿಳಿದುಕೊಂಡಿದ್ದಾರೆ' ಎಂದು ಪ್ರಕಟಣೆ ತಿಳಿಸಿದೆ.</p>.<p>ತಮ್ಮ ನಿರ್ಧಾರಗಳನ್ನು ಯಾರೂ ಪ್ರಶ್ನಿಸದಂತೆ ವಿಶೇಷ ರಿಯಾಯ್ತಿ ನೀಡುವ ಶಾಸನ ಜಾರಿಗೊಳಿಸುವ ಮೂಲಕ ಅಧ್ಯಕ್ಷ ಮುರ್ಸಿ, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಕಾನೂನಿನ ಸ್ವಾತಂತ್ರ್ಯವನ್ನು ಬಲಿ ಕೊಟ್ಟಿದ್ದಾರೆ ಎಂದು ವಿರೋಧಿಗಳು ಆರೋಪಿಸಿದ್ದಾರೆ.</p>.<p>ಈ ನಿರ್ಣಯ ವಿರೋಧಿಸಿ ಆಂದೋಲನ ನಡೆಸಲು ಅವರು ಉದ್ದೇಶಿಸಿದ್ದಾರೆ. ಇದರಿಂದ ಎಚ್ಚೆತ್ತುಕೊಂಡಿರುವ ಮುರ್ಸಿ ಇದೀಗ ತೇಪೆ ಹಚ್ಚುವ ಕೆಲಸಕ್ಕೆ ಮುಂದಾಗಿದ್ದಾರೆ.ಮುರ್ಸಿ ಸರ್ಕಾರ ಈಜಿಪ್ಟ್ ಜನರ ಭಾವನೆಗಳಿಗೆ ಬೆಲೆ ಕೊಡಬೇಕು ಎಂದು ಶ್ವೇತ ಭವನ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>