<p><strong>ಕಾಬೂಲ್(ಐಎಎನ್ಎಸ್): </strong>ಮೈಮನಾ ನಗರದ ಜನತೆ ನವರೋಜ್(ಅಫಘಾನಿಗಳ ಹೊಸ ವರ್ಷ) ಸಂಭ್ರಮದ ಸಿದ್ಧತೆಯಲ್ಲಿದ್ದಾಗ ಉಗ್ರರು ಆತ್ಮಹತ್ಯಾ ಬಾಂಬ್ ದಾಳಿ ನಡೆಸಿ, 15 ಜನರನ್ನು ಬಲಿ ತೆಗೆದುಕೊಂಡಿದ್ದಾರೆ.<br /> <br /> ‘ದಾಳಿಯಲ್ಲಿ 20 ಜನರೂ ಗಾಯಗೊಂಡಿದ್ದಾರೆ’ ಎಂದು ಪ್ರಾಂತ್ಯದ ರಾಜ್ಯಪಾಲ ಮೊಹಮ್ಮದ್ ಅಲ್ಲಾಹ ಬಕ್ತಾಶ್ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸ್ಫೋಟದ ತೀವ್ರತೆಯಿಂದ ಸ್ಥಳದಲ್ಲಿದ್ದ ಅಂಗಡಿಗಳು, ವಾಹನಗಳು ಹಾನಿಗೀಡಾಗಿವೆ. ಯಾವುದೇ ಭಯೋತ್ಪಾದಕ ಸಂಘಟನೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಬೂಲ್(ಐಎಎನ್ಎಸ್): </strong>ಮೈಮನಾ ನಗರದ ಜನತೆ ನವರೋಜ್(ಅಫಘಾನಿಗಳ ಹೊಸ ವರ್ಷ) ಸಂಭ್ರಮದ ಸಿದ್ಧತೆಯಲ್ಲಿದ್ದಾಗ ಉಗ್ರರು ಆತ್ಮಹತ್ಯಾ ಬಾಂಬ್ ದಾಳಿ ನಡೆಸಿ, 15 ಜನರನ್ನು ಬಲಿ ತೆಗೆದುಕೊಂಡಿದ್ದಾರೆ.<br /> <br /> ‘ದಾಳಿಯಲ್ಲಿ 20 ಜನರೂ ಗಾಯಗೊಂಡಿದ್ದಾರೆ’ ಎಂದು ಪ್ರಾಂತ್ಯದ ರಾಜ್ಯಪಾಲ ಮೊಹಮ್ಮದ್ ಅಲ್ಲಾಹ ಬಕ್ತಾಶ್ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸ್ಫೋಟದ ತೀವ್ರತೆಯಿಂದ ಸ್ಥಳದಲ್ಲಿದ್ದ ಅಂಗಡಿಗಳು, ವಾಹನಗಳು ಹಾನಿಗೀಡಾಗಿವೆ. ಯಾವುದೇ ಭಯೋತ್ಪಾದಕ ಸಂಘಟನೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>