<p><strong>ಇಸ್ಲಾಮಾಬಾದ್ (ಪಿಟಿಐ):</strong> ಭಯೋತ್ಪಾದನೆ ಸಂಬಂಧಿ ಚರ್ಚೆಗೆ ಎರಡೂ ಕಡೆಯ ರಾಷ್ಟ್ರೀಯ ಭದ್ರತಾ ಸಲಹೆಗಾರರ (ಎನ್ಎಸ್ಎ) ನಡುವೆ ಸಭೆ ನಡೆಸಲು ವ್ಯವಸ್ಥೆಯೊಂದನ್ನು ಸ್ಥಾಪಿಸುವ ತಮ್ಮ ಪ್ರಸ್ತಾವಕ್ಕೆ ಭಾರತ ‘ಸಕಾರಾತ್ಮಕ’ವಾಗಿ ಪ್ರತಿಕ್ರಿಯಿಸಲಿದೆ ಎಂದು ಪಾಕಿಸ್ತಾನ ಗುರುವಾರ ವಿಶ್ವಾಸ ವ್ಯಕ್ತಪಡಿಸಿದೆ.</p>.<p>ಪಾಕಿಸ್ತಾನದಲ್ಲಿರುವ ಭಾರತದ ಹೈಕಮೀಷನರ್ ಟಿ ಸಿ ಎ ರಾಘವನ್ ಅವರೊಂದಿಗಿನ ಬುಧವಾರ ನಡೆದ ಸಭೆಯ ವೇಳೆ ಪ್ರಧಾನಿ ನವಾಜ್ ಷರೀಫ್ ಅವರು ಈ ಪ್ರಸ್ತಾವದ ಬಗ್ಗೆ ಚರ್ಚಿಸಿದ್ದರು.</p>.<p>‘ಪಾಕಿಸ್ತಾನದಿಂದ ಹೊಮ್ಮಿರುವ ಪ್ರಸ್ತಾವಕ್ಕೆ ಪ್ರಾಮಾಣಿಕ ಹಾಗೂ ಸಕಾರಾತ್ಮಕ ಸ್ಪಂದನೆಯ ಪ್ರತಿಕ್ರಿಯೆ ಸಿಗಲಿದೆ ಎಂದು ನಾವು ಆಶಿಸಿದ್ದೇವೆ’ ಎಂದು ಪಾಕ್ನ ವಿದೇಶಾಂಗ ಕಾರ್ಯಾಲಯದ ವಕ್ತಾರ ಐಜಾಜ್ ಚೌಧರಿ ನುಡಿದಿದ್ದಾರೆ.</p>.<p>‘ಇದು ನಮ್ಮ ಪ್ರಧಾನಿ ಅವರು ಮಾಡಿರುವ ಪ್ರಸ್ತಾವ. ಉಭಯ ರಾಷ್ಟ್ರಗಳು ಮಾತುಕತೆ ನಡೆಸುವ ಅಗತ್ಯವಿದೆ ಎಂದುಕೊಂಡಿದ್ದೇವೆ. ವಿವಾದಗಳನ್ನು ಚರ್ಚಿಸಲು ಹಾಗೂ ಬಗೆಹರಿಸಿಕೊಳ್ಳಲು ಮಾತುಕತೆಯ ಮೂಲಕ ಮಾತ್ರವೇ ಸಾಧ್ಯ’ ಎಂದು ಅವರು ತಿಳಿಸಿದ್ದಾರೆ.</p>.<p>ಪಾಕ್ನ ನೆರೆಯ ರಾಷ್ಟ್ರಗಳು ಶಾಂತಿಯಿಂದಿರಬೇಕು ಎಂದು ಷರೀಫ್ ಆಶಿಸುತ್ತಾರೆ. ಅದಕ್ಕಾಗಿ ಅವರು ಭಾರತವೂ ಸೇರಿದಂತೆ ಎಲ್ಲಾ ನೆರೆಹೊರೆಯ ರಾಷ್ಟ್ರಗಳೊಂದಿಗೆ ಸಂಬಂಧ ಬೆಳೆಸುತ್ತಿದ್ದಾರೆ ಎಂದು ಚೌಧರಿ ಹೇಳಿದ್ದಾರೆ.</p>.<p>ಎನ್ಎಸ್ಎ ನಡುವೆ ಸಭೆ ನಡೆಸಲು ವ್ಯವಸ್ಥೆ ರಚನೆ ಸಂಬಂಧ ವಿದೇಶಾಂಗ ಕಾರ್ಯಾಲಯದ ವತಿಯಿಂದ ಅಧಿಕೃತವಾಗಿ ಪ್ರಸ್ತಾವ ರವಾನಿಸಲಾಗುವುದೇ ಎಂಬ ಪ್ರಶ್ನೆಗೆ ‘ ಪ್ರಧಾನಿ ಷರೀಫ್ಅವರು ಈ ವಿಷಯವನ್ನು ಭಾರತದ ಹೈಕಮೀಷನರ್ ಜೊತೆಗೆ ಚರ್ಚಿಸಿದ್ದಾರೆ. ಅಷ್ಟು ಅಧಿಕೃತ ಸಾಕು’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್ (ಪಿಟಿಐ):</strong> ಭಯೋತ್ಪಾದನೆ ಸಂಬಂಧಿ ಚರ್ಚೆಗೆ ಎರಡೂ ಕಡೆಯ ರಾಷ್ಟ್ರೀಯ ಭದ್ರತಾ ಸಲಹೆಗಾರರ (ಎನ್ಎಸ್ಎ) ನಡುವೆ ಸಭೆ ನಡೆಸಲು ವ್ಯವಸ್ಥೆಯೊಂದನ್ನು ಸ್ಥಾಪಿಸುವ ತಮ್ಮ ಪ್ರಸ್ತಾವಕ್ಕೆ ಭಾರತ ‘ಸಕಾರಾತ್ಮಕ’ವಾಗಿ ಪ್ರತಿಕ್ರಿಯಿಸಲಿದೆ ಎಂದು ಪಾಕಿಸ್ತಾನ ಗುರುವಾರ ವಿಶ್ವಾಸ ವ್ಯಕ್ತಪಡಿಸಿದೆ.</p>.<p>ಪಾಕಿಸ್ತಾನದಲ್ಲಿರುವ ಭಾರತದ ಹೈಕಮೀಷನರ್ ಟಿ ಸಿ ಎ ರಾಘವನ್ ಅವರೊಂದಿಗಿನ ಬುಧವಾರ ನಡೆದ ಸಭೆಯ ವೇಳೆ ಪ್ರಧಾನಿ ನವಾಜ್ ಷರೀಫ್ ಅವರು ಈ ಪ್ರಸ್ತಾವದ ಬಗ್ಗೆ ಚರ್ಚಿಸಿದ್ದರು.</p>.<p>‘ಪಾಕಿಸ್ತಾನದಿಂದ ಹೊಮ್ಮಿರುವ ಪ್ರಸ್ತಾವಕ್ಕೆ ಪ್ರಾಮಾಣಿಕ ಹಾಗೂ ಸಕಾರಾತ್ಮಕ ಸ್ಪಂದನೆಯ ಪ್ರತಿಕ್ರಿಯೆ ಸಿಗಲಿದೆ ಎಂದು ನಾವು ಆಶಿಸಿದ್ದೇವೆ’ ಎಂದು ಪಾಕ್ನ ವಿದೇಶಾಂಗ ಕಾರ್ಯಾಲಯದ ವಕ್ತಾರ ಐಜಾಜ್ ಚೌಧರಿ ನುಡಿದಿದ್ದಾರೆ.</p>.<p>‘ಇದು ನಮ್ಮ ಪ್ರಧಾನಿ ಅವರು ಮಾಡಿರುವ ಪ್ರಸ್ತಾವ. ಉಭಯ ರಾಷ್ಟ್ರಗಳು ಮಾತುಕತೆ ನಡೆಸುವ ಅಗತ್ಯವಿದೆ ಎಂದುಕೊಂಡಿದ್ದೇವೆ. ವಿವಾದಗಳನ್ನು ಚರ್ಚಿಸಲು ಹಾಗೂ ಬಗೆಹರಿಸಿಕೊಳ್ಳಲು ಮಾತುಕತೆಯ ಮೂಲಕ ಮಾತ್ರವೇ ಸಾಧ್ಯ’ ಎಂದು ಅವರು ತಿಳಿಸಿದ್ದಾರೆ.</p>.<p>ಪಾಕ್ನ ನೆರೆಯ ರಾಷ್ಟ್ರಗಳು ಶಾಂತಿಯಿಂದಿರಬೇಕು ಎಂದು ಷರೀಫ್ ಆಶಿಸುತ್ತಾರೆ. ಅದಕ್ಕಾಗಿ ಅವರು ಭಾರತವೂ ಸೇರಿದಂತೆ ಎಲ್ಲಾ ನೆರೆಹೊರೆಯ ರಾಷ್ಟ್ರಗಳೊಂದಿಗೆ ಸಂಬಂಧ ಬೆಳೆಸುತ್ತಿದ್ದಾರೆ ಎಂದು ಚೌಧರಿ ಹೇಳಿದ್ದಾರೆ.</p>.<p>ಎನ್ಎಸ್ಎ ನಡುವೆ ಸಭೆ ನಡೆಸಲು ವ್ಯವಸ್ಥೆ ರಚನೆ ಸಂಬಂಧ ವಿದೇಶಾಂಗ ಕಾರ್ಯಾಲಯದ ವತಿಯಿಂದ ಅಧಿಕೃತವಾಗಿ ಪ್ರಸ್ತಾವ ರವಾನಿಸಲಾಗುವುದೇ ಎಂಬ ಪ್ರಶ್ನೆಗೆ ‘ ಪ್ರಧಾನಿ ಷರೀಫ್ಅವರು ಈ ವಿಷಯವನ್ನು ಭಾರತದ ಹೈಕಮೀಷನರ್ ಜೊತೆಗೆ ಚರ್ಚಿಸಿದ್ದಾರೆ. ಅಷ್ಟು ಅಧಿಕೃತ ಸಾಕು’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>