<p><strong>ವಿಶ್ವಸಂಸ್ಥೆ : </strong>ಬಹುಕಾಲದಿಂದ ಪರಿಹಾರವಾಗದೇ ಉಳಿದಿರುವ ಜಮ್ಮು ಮತ್ತು ಕಾಶ್ಮೀರ ಹಾಗೂ ಪ್ಯಾಲೆಸ್ಟೀನ್ ವಿವಾದದಂತಹ ಸಮಸ್ಯೆಗಳಿಗೆ ಸಂಬಂಧಿಸಿ ನಿರ್ಣಯಗಳನ್ನು ಅನುಷ್ಠಾನಗೊಳಿಸಲು ಕಾಯ್ದಿರಿಸಿಕೊಂಡಿರುವ ‘ಆಯ್ಕೆ’ಗಳನ್ನು ಕಡ್ಡಾಯವಾಗಿ ಕೊನೆಗಾಣಿಸಬೇಕು ಎಂದು ಪಾಕಿಸ್ತಾನವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ಒತ್ತಾಯಿಸಿದೆ.</p>.<p>ಭದ್ರತಾ ಮಂಡಳಿ ಸಭೆಯಲ್ಲಿ ‘ವಿಶ್ವಶಾಂತಿ ಮತ್ತು ಭದ್ರತೆಗೆ ಅಂತರಾಷ್ಟ್ರೀಯ ಕಾನೂನು ಎತ್ತಿ ಹಿಡಿಯುವುದು’ ಕುರಿತು ಇತ್ತೀಚೆಗೆ ನಡೆದ ಚರ್ಚೆಯಲ್ಲಿ ವಿಶ್ವಸಂಸ್ಥೆಯಲ್ಲಿನ ಪಾಕ್ ರಾಯಭಾರಿ ಮಲಿಹಾ ಲೋಧಿ ಮಾತನಾಡಿದರು.</p>.<p>ಲೋಧಿ ಮತ್ತು ಪಾಕಿಸ್ತಾನದ ನಿಯೋಗವು ವಿಶ್ವಸಂಸ್ಥೆಯ ವಿವಿಧ ವೇದಿಕೆಗಳಲ್ಲಿ ಕಾಶ್ಮೀರ ವಿವಾದವನ್ನು ಬಗೆಹರಿಸಲು ಸತತವಾಗಿ ಪ್ರಸ್ತಾಪಿಸು ತ್ತಲೇ ಇದೆ.</p>.<p>ಈ ತಿಂಗಳ ಆರಂಭದಲ್ಲಿ ನಡೆದ ಮಾಹಿತಿ ಸಮಿತಿಯ ಅಧಿವೇಶನ ದಲ್ಲಿ ಪಾಕಿಸ್ತಾನದ ನಿಯೋಗದ ಪ್ರತಿನಿಧಿ ಮಸೂದ್ ಅನ್ವರ್, ‘ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ನಡೆಯುತ್ತಿದೆ’ ಎಂದು ಹೇಳುವ ಮೂಲಕ ಕಾಶ್ಮೀರ ವಿವಾದ ಕೆದಕಿದ್ದರು.</p>.<p>ಅನ್ವರ್ ಹೇಳಿಕೆಯನ್ನು ಭಾರತ ಬಲವಾಗಿ ತಿರಸ್ಕರಿಸಿದ್ದು, ‘ಸಮಿತಿಯ ಕೆಲಸ ಕಾರ್ಯಗಳಿಗೆ ಅವರ ಟೀಕೆಗಳು ಅಪ್ರಸ್ತುತವಾಗಿವೆ’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತೀಯ ಮಿಷನ್ ಸಚಿವ ಎಸ್.ಶ್ರೀನಿವಾಸ್ ಪ್ರಸಾದ್ ಅವರು ಟೀಕಿಸಿದ್ದಾರೆ.</p>.<p>‘ವಿವಾದಾಸ್ಪದ ಸಮಸ್ಯೆಗಳನ್ನು ಉಲ್ಲೇಖಿಸಿ ಅದನ್ನು ಸಮಿತಿಯ ಕಾರ್ಯಸೂಚಿಗೆ ಸೇರಿಸಲು ಮಾಡುತ್ತಿರುವ ಮತ್ತೊಂದು ಪ್ರಯತ್ನವಿದು. ಸಮಿತಿಯ ಕೆಲಸಕ್ಕೆ ಅಪ್ರಸ್ತುತವಾಗಿರುವ ಇಂತಹ ಪ್ರತಿಕ್ರಿಯೆಗಳನ್ನು ಸಂಪೂರ್ಣ ತಿರಸ್ಕರಿಸುತ್ತೇವೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ : </strong>ಬಹುಕಾಲದಿಂದ ಪರಿಹಾರವಾಗದೇ ಉಳಿದಿರುವ ಜಮ್ಮು ಮತ್ತು ಕಾಶ್ಮೀರ ಹಾಗೂ ಪ್ಯಾಲೆಸ್ಟೀನ್ ವಿವಾದದಂತಹ ಸಮಸ್ಯೆಗಳಿಗೆ ಸಂಬಂಧಿಸಿ ನಿರ್ಣಯಗಳನ್ನು ಅನುಷ್ಠಾನಗೊಳಿಸಲು ಕಾಯ್ದಿರಿಸಿಕೊಂಡಿರುವ ‘ಆಯ್ಕೆ’ಗಳನ್ನು ಕಡ್ಡಾಯವಾಗಿ ಕೊನೆಗಾಣಿಸಬೇಕು ಎಂದು ಪಾಕಿಸ್ತಾನವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ಒತ್ತಾಯಿಸಿದೆ.</p>.<p>ಭದ್ರತಾ ಮಂಡಳಿ ಸಭೆಯಲ್ಲಿ ‘ವಿಶ್ವಶಾಂತಿ ಮತ್ತು ಭದ್ರತೆಗೆ ಅಂತರಾಷ್ಟ್ರೀಯ ಕಾನೂನು ಎತ್ತಿ ಹಿಡಿಯುವುದು’ ಕುರಿತು ಇತ್ತೀಚೆಗೆ ನಡೆದ ಚರ್ಚೆಯಲ್ಲಿ ವಿಶ್ವಸಂಸ್ಥೆಯಲ್ಲಿನ ಪಾಕ್ ರಾಯಭಾರಿ ಮಲಿಹಾ ಲೋಧಿ ಮಾತನಾಡಿದರು.</p>.<p>ಲೋಧಿ ಮತ್ತು ಪಾಕಿಸ್ತಾನದ ನಿಯೋಗವು ವಿಶ್ವಸಂಸ್ಥೆಯ ವಿವಿಧ ವೇದಿಕೆಗಳಲ್ಲಿ ಕಾಶ್ಮೀರ ವಿವಾದವನ್ನು ಬಗೆಹರಿಸಲು ಸತತವಾಗಿ ಪ್ರಸ್ತಾಪಿಸು ತ್ತಲೇ ಇದೆ.</p>.<p>ಈ ತಿಂಗಳ ಆರಂಭದಲ್ಲಿ ನಡೆದ ಮಾಹಿತಿ ಸಮಿತಿಯ ಅಧಿವೇಶನ ದಲ್ಲಿ ಪಾಕಿಸ್ತಾನದ ನಿಯೋಗದ ಪ್ರತಿನಿಧಿ ಮಸೂದ್ ಅನ್ವರ್, ‘ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ನಡೆಯುತ್ತಿದೆ’ ಎಂದು ಹೇಳುವ ಮೂಲಕ ಕಾಶ್ಮೀರ ವಿವಾದ ಕೆದಕಿದ್ದರು.</p>.<p>ಅನ್ವರ್ ಹೇಳಿಕೆಯನ್ನು ಭಾರತ ಬಲವಾಗಿ ತಿರಸ್ಕರಿಸಿದ್ದು, ‘ಸಮಿತಿಯ ಕೆಲಸ ಕಾರ್ಯಗಳಿಗೆ ಅವರ ಟೀಕೆಗಳು ಅಪ್ರಸ್ತುತವಾಗಿವೆ’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತೀಯ ಮಿಷನ್ ಸಚಿವ ಎಸ್.ಶ್ರೀನಿವಾಸ್ ಪ್ರಸಾದ್ ಅವರು ಟೀಕಿಸಿದ್ದಾರೆ.</p>.<p>‘ವಿವಾದಾಸ್ಪದ ಸಮಸ್ಯೆಗಳನ್ನು ಉಲ್ಲೇಖಿಸಿ ಅದನ್ನು ಸಮಿತಿಯ ಕಾರ್ಯಸೂಚಿಗೆ ಸೇರಿಸಲು ಮಾಡುತ್ತಿರುವ ಮತ್ತೊಂದು ಪ್ರಯತ್ನವಿದು. ಸಮಿತಿಯ ಕೆಲಸಕ್ಕೆ ಅಪ್ರಸ್ತುತವಾಗಿರುವ ಇಂತಹ ಪ್ರತಿಕ್ರಿಯೆಗಳನ್ನು ಸಂಪೂರ್ಣ ತಿರಸ್ಕರಿಸುತ್ತೇವೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>