<p><strong>ವಾಷಿಂಗ್ಟನ್:</strong> ಜಮ್ಮು ಮತ್ತು ಕಾಶ್ಮೀರದ ಕಿಶನ್ಗಂಗಾ ಮತ್ತು ರಾಟ್ಲೆಯಲ್ಲಿ ಜಲ ವಿದ್ಯುತ್ ಘಟಕಗಳನ್ನು ನಿರ್ಮಿಸಲು ಭಾರತಕ್ಕೆ ಅನುಮತಿ ನೀಡಲಾಗಿದೆ ಎಂದು ವಿಶ್ವಬ್ಯಾಂಕ್ ತಿಳಿಸಿದೆ.</p>.<p>ಝೇಲಂ ಮತ್ತು ಚೆನಬ್ ನದಿ ವ್ಯಾಪ್ತಿಯ ಕಿಶನ್ಗಂಗಾದಲ್ಲಿ 330 ಮೆಗಾವಾಟ್ ಮತ್ತು ರಾಟ್ಲೆಯಲ್ಲಿ 850 ಮೆಗಾವಾಟ್ ಸಾಮರ್ಥ್ಯದ ಜಲ ವಿದ್ಯುತ್ ಘಟಕಗಳನ್ನು ನಿರ್ಮಿಸಲು ಉದ್ದೇಶಿಸಿದ್ದು ಕೆಲವು ಷರತ್ತುಗಳೊಂದಿಗೆ ಈ ಯೋಜನೆಗಳಿಗೆ ಒಪ್ಪಿಗೆ ಸೂಚಿಸಲಾಗಿದೆ.</p>.<p>ವಿಶ್ವಬ್ಯಾಂಕ್ನ ಈ ನಿರ್ಧಾರ ಪ್ರಸ್ತುತ ಸನ್ನಿವೇಶದಲ್ಲಿ ಭಾರತಕ್ಕೆ ಮಹತ್ವದ್ದಾಗಿದೆ ಎಂದು ವಿಶ್ಲೇಷಿಸಲಾಗಿದೆ.</p>.<p>ಪಾಕಿಸ್ತಾನವು ಈ ಯೋಜನೆಗಳ ಅನುಷ್ಠಾನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ಯೋಜನೆಯ ವಿನ್ಯಾಸದ ಬಗ್ಗೆ ಆತಂಕ ವ್ಯಕ್ತಪಡಿಸಿ ಕಳೆದ ವರ್ಷ ಪಾಕಿಸ್ತಾನ ವಿಶ್ವ ಬ್ಯಾಂಕ್ ಮೊರೆ ಹೋಗಿತ್ತು.</p>.<p>ಈ ಎಲ್ಲ ಅಂಶಗಳ ಕುರಿತು ವಿವರಗಳನ್ನು ಬಿಡುಗಡೆ ಮಾಡಿರುವ ವಿಶ್ವಬ್ಯಾಂಕ್, ಪಾಕಿಸ್ತಾನವು ಈ ಯೋಜನೆ ಸಂಬಂಧ ಮಧ್ಯಸ್ಥಿಕೆ ನ್ಯಾಯಾ<br /> ಲಯ ಸ್ಥಾಪಿಸುವಂತೆ ಒತ್ತಾಯಿಸಿತ್ತು. ಭಾರತ ಸಹ ಈ ವಿಷಯದ ಬಗ್ಗೆ ಪರಿಶೀಲಿಸಲು ತಟಸ್ಥ ರಾಷ್ಟ್ರಗಳ ತಜ್ಞರನ್ನು ನೇಮಿಸುವಂತೆ ಆಗ್ರಹಿಸಿತ್ತು. ಪಾಕಿಸ್ತಾನದ ಆಕ್ಷೇಪಗಳು ಕೇವಲ ತಾಂತ್ರಿಕತೆಗೆ ಸಂಬಂಧಿಸಿದ್ದಾಗಿವೆ ಎಂದು ಭಾರತ ವಾದ ಮಂಡಿಸಿತ್ತು.</p>.<p>ಈ ಬಗ್ಗೆ ವಿವರ ನೀಡಿರುವ ವಿಶ್ವಬ್ಯಾಂಕ್, ಉಭಯ ದೇಶಗಳು ತಮ್ಮದೇ ಆದ ಅಭಿಪ್ರಾಯ ಮಂಡಿಸಿವೆ. ಸಿಂಧೂ ಜಲ ಒಪ್ಪಂದದ ಅನ್ವಯ ಈ ಎರಡು ನದಿಗಳನ್ನು ‘ಪಶ್ಚಿಮದ ನದಿಗಳು’ ಎಂದು ಪರಿಗಣಿಸಲಾಗಿದೆ. ಹೀಗಾಗಿ ಈ ನದಿಗಳ ನೀರನ್ನು ಪಾಕಿಸ್ತಾನ ಸಹ ಯಾವುದೇ ಷರತ್ತುಗಳು ಇಲ್ಲದೆ ಬಳಸಬಹುದು. ಆದ್ದರಿಂದ ಎರಡು ಜಲ ವಿದ್ಯುತ್ ಘಟಕಗಳನ್ನು ನಿರ್ಮಿಸಲು ಭಾರತಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದೆ.</p>.<p>ಭಾರತ ಮತ್ತು ಪಾಕಿಸ್ತಾನ ಸತತ ಒಂಬತ್ತು ವರ್ಷಗಳ ಮಾತುಕತೆ ನಡೆಸಿದ ಬಳಿಕ 1960ರಲ್ಲಿ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ಸಿಂಧೂ ಜಲ ಒಪ್ಪಂದಕ್ಕೆ ಸಹಿ ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.</p>.<p><strong>ಮುಂದಿನ ತಿಂಗಳು ಮಾತುಕತೆ: </strong></p>.<p>ಸಿಂಧೂ ಜಲ ಒಪ್ಪಂದದ ಕುರಿತು ಭಾರತ ಮತ್ತು ಪಾಕಿಸ್ತಾನ ಮುಂದಿನ ತಿಂಗಳು ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿವೆ ಎಂದು ವಿಶ್ವಬ್ಯಾಂಕ್ ತಿಳಿಸಿದೆ.</p>.<p>ಈ ಒಪ್ಪಂದದ ಕುರಿತು ಉಭಯ ದೇಶಗಳ ಕಾರ್ಯದರ್ಶಿಗಳ ಮಟ್ಟದ ಮಾತುಕತೆ ಇತ್ತೀಚೆಗೆ ಮುಕ್ತಾಯವಾದ ನಂತರ ವಿಶ್ವಬ್ಯಾಂಕ್ ಈ ಹೇಳಿಕೆ ನೀಡಿದೆ.</p>.<p>‘ಕಾರ್ಯದರ್ಶಿಗಳ ನಡುವೆ ಸೌಹಾರ್ದಯುತ ವಾತಾವರಣದಲ್ಲಿ ಮಾತುಕತೆ ನಡೆದಿದೆ. ಮತ್ತೆ ಈ ಮಾತುಕತೆಯನ್ನು ಮುಂದುವರಿಸಲು ಮುಂದಿನ ತಿಂಗಳು ಸಭೆ ಕರೆಯಲು ಉಭಯ ದೇಶಗಳು ಒಪ್ಪಿಗೆ ಸೂಚಿಸಿವೆ’ ಎಂದು ವಿಶ್ವಬ್ಯಾಂಕ್ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್:</strong> ಜಮ್ಮು ಮತ್ತು ಕಾಶ್ಮೀರದ ಕಿಶನ್ಗಂಗಾ ಮತ್ತು ರಾಟ್ಲೆಯಲ್ಲಿ ಜಲ ವಿದ್ಯುತ್ ಘಟಕಗಳನ್ನು ನಿರ್ಮಿಸಲು ಭಾರತಕ್ಕೆ ಅನುಮತಿ ನೀಡಲಾಗಿದೆ ಎಂದು ವಿಶ್ವಬ್ಯಾಂಕ್ ತಿಳಿಸಿದೆ.</p>.<p>ಝೇಲಂ ಮತ್ತು ಚೆನಬ್ ನದಿ ವ್ಯಾಪ್ತಿಯ ಕಿಶನ್ಗಂಗಾದಲ್ಲಿ 330 ಮೆಗಾವಾಟ್ ಮತ್ತು ರಾಟ್ಲೆಯಲ್ಲಿ 850 ಮೆಗಾವಾಟ್ ಸಾಮರ್ಥ್ಯದ ಜಲ ವಿದ್ಯುತ್ ಘಟಕಗಳನ್ನು ನಿರ್ಮಿಸಲು ಉದ್ದೇಶಿಸಿದ್ದು ಕೆಲವು ಷರತ್ತುಗಳೊಂದಿಗೆ ಈ ಯೋಜನೆಗಳಿಗೆ ಒಪ್ಪಿಗೆ ಸೂಚಿಸಲಾಗಿದೆ.</p>.<p>ವಿಶ್ವಬ್ಯಾಂಕ್ನ ಈ ನಿರ್ಧಾರ ಪ್ರಸ್ತುತ ಸನ್ನಿವೇಶದಲ್ಲಿ ಭಾರತಕ್ಕೆ ಮಹತ್ವದ್ದಾಗಿದೆ ಎಂದು ವಿಶ್ಲೇಷಿಸಲಾಗಿದೆ.</p>.<p>ಪಾಕಿಸ್ತಾನವು ಈ ಯೋಜನೆಗಳ ಅನುಷ್ಠಾನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ಯೋಜನೆಯ ವಿನ್ಯಾಸದ ಬಗ್ಗೆ ಆತಂಕ ವ್ಯಕ್ತಪಡಿಸಿ ಕಳೆದ ವರ್ಷ ಪಾಕಿಸ್ತಾನ ವಿಶ್ವ ಬ್ಯಾಂಕ್ ಮೊರೆ ಹೋಗಿತ್ತು.</p>.<p>ಈ ಎಲ್ಲ ಅಂಶಗಳ ಕುರಿತು ವಿವರಗಳನ್ನು ಬಿಡುಗಡೆ ಮಾಡಿರುವ ವಿಶ್ವಬ್ಯಾಂಕ್, ಪಾಕಿಸ್ತಾನವು ಈ ಯೋಜನೆ ಸಂಬಂಧ ಮಧ್ಯಸ್ಥಿಕೆ ನ್ಯಾಯಾ<br /> ಲಯ ಸ್ಥಾಪಿಸುವಂತೆ ಒತ್ತಾಯಿಸಿತ್ತು. ಭಾರತ ಸಹ ಈ ವಿಷಯದ ಬಗ್ಗೆ ಪರಿಶೀಲಿಸಲು ತಟಸ್ಥ ರಾಷ್ಟ್ರಗಳ ತಜ್ಞರನ್ನು ನೇಮಿಸುವಂತೆ ಆಗ್ರಹಿಸಿತ್ತು. ಪಾಕಿಸ್ತಾನದ ಆಕ್ಷೇಪಗಳು ಕೇವಲ ತಾಂತ್ರಿಕತೆಗೆ ಸಂಬಂಧಿಸಿದ್ದಾಗಿವೆ ಎಂದು ಭಾರತ ವಾದ ಮಂಡಿಸಿತ್ತು.</p>.<p>ಈ ಬಗ್ಗೆ ವಿವರ ನೀಡಿರುವ ವಿಶ್ವಬ್ಯಾಂಕ್, ಉಭಯ ದೇಶಗಳು ತಮ್ಮದೇ ಆದ ಅಭಿಪ್ರಾಯ ಮಂಡಿಸಿವೆ. ಸಿಂಧೂ ಜಲ ಒಪ್ಪಂದದ ಅನ್ವಯ ಈ ಎರಡು ನದಿಗಳನ್ನು ‘ಪಶ್ಚಿಮದ ನದಿಗಳು’ ಎಂದು ಪರಿಗಣಿಸಲಾಗಿದೆ. ಹೀಗಾಗಿ ಈ ನದಿಗಳ ನೀರನ್ನು ಪಾಕಿಸ್ತಾನ ಸಹ ಯಾವುದೇ ಷರತ್ತುಗಳು ಇಲ್ಲದೆ ಬಳಸಬಹುದು. ಆದ್ದರಿಂದ ಎರಡು ಜಲ ವಿದ್ಯುತ್ ಘಟಕಗಳನ್ನು ನಿರ್ಮಿಸಲು ಭಾರತಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದೆ.</p>.<p>ಭಾರತ ಮತ್ತು ಪಾಕಿಸ್ತಾನ ಸತತ ಒಂಬತ್ತು ವರ್ಷಗಳ ಮಾತುಕತೆ ನಡೆಸಿದ ಬಳಿಕ 1960ರಲ್ಲಿ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ಸಿಂಧೂ ಜಲ ಒಪ್ಪಂದಕ್ಕೆ ಸಹಿ ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.</p>.<p><strong>ಮುಂದಿನ ತಿಂಗಳು ಮಾತುಕತೆ: </strong></p>.<p>ಸಿಂಧೂ ಜಲ ಒಪ್ಪಂದದ ಕುರಿತು ಭಾರತ ಮತ್ತು ಪಾಕಿಸ್ತಾನ ಮುಂದಿನ ತಿಂಗಳು ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿವೆ ಎಂದು ವಿಶ್ವಬ್ಯಾಂಕ್ ತಿಳಿಸಿದೆ.</p>.<p>ಈ ಒಪ್ಪಂದದ ಕುರಿತು ಉಭಯ ದೇಶಗಳ ಕಾರ್ಯದರ್ಶಿಗಳ ಮಟ್ಟದ ಮಾತುಕತೆ ಇತ್ತೀಚೆಗೆ ಮುಕ್ತಾಯವಾದ ನಂತರ ವಿಶ್ವಬ್ಯಾಂಕ್ ಈ ಹೇಳಿಕೆ ನೀಡಿದೆ.</p>.<p>‘ಕಾರ್ಯದರ್ಶಿಗಳ ನಡುವೆ ಸೌಹಾರ್ದಯುತ ವಾತಾವರಣದಲ್ಲಿ ಮಾತುಕತೆ ನಡೆದಿದೆ. ಮತ್ತೆ ಈ ಮಾತುಕತೆಯನ್ನು ಮುಂದುವರಿಸಲು ಮುಂದಿನ ತಿಂಗಳು ಸಭೆ ಕರೆಯಲು ಉಭಯ ದೇಶಗಳು ಒಪ್ಪಿಗೆ ಸೂಚಿಸಿವೆ’ ಎಂದು ವಿಶ್ವಬ್ಯಾಂಕ್ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>