ಈ ಸಂದರ್ಭದಲ್ಲಿ ಮಾತನಾಡಿದ ಖರ್ಗೆ ಅವರು, ಸಾಮಾಜಿಕ ಭದ್ರತೆ, ಉದ್ಯೋಗಾವಕಾಶ, ಗಣಿ ಸುರಕ್ಷತೆ ಮೊದಲಾದ ವಿಷಯಗಳ ಬಗ್ಗೆ ವಿವರಿಸಿ, ಉಳಿದ ದೇಶಗಳಿಗೆ ಹೋಲಿಸಿದರೆ ಭಾರತದ ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಬೆಳವಣಿಗೆಯು ತೀವ್ರಗತಿಯಲ್ಲಿದೆ ಎಂದು ಹೇಳಿದರು. ಮಕ್ಕಳ ಶಿಕ್ಷಣದ ಬಗೆಗಿನ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ ಅವರು, ಗ್ರಾಮೀಣ ಪ್ರದೇಶದಲ್ಲಿನ ಶೈಕ್ಷಣಿಕ ಅಭಿವೃದ್ದಿ ತಮ್ಮ ಪ್ರಾಥಮಿಕ ಆದ್ಯತೆ ಎಂದು ತಿಳಿಸಿದರು.