<p><strong>ಕ್ಯುಬೆಕ್ ನಗರ, ಕೆನಡಾ: </strong>ಕೆನಡಾದ ಕ್ಯುಬೆಕ್ ನಗರದಲ್ಲಿರುವ ಮಸೀದಿಯೊಂದರಲ್ಲಿ ಶಸ್ತ್ರಧಾರಿ ವ್ಯಕ್ತಿಗಳು ನಡೆಸಿದ ಗುಂಡಿನ ದಾಳಿಗೆ 6 ಮಂದಿ ಸಾವಿಗೀಡಾಗಿದ್ದಾರೆ. ಭಾನುವಾರ ಸಂಜೆ ಪ್ರಾರ್ಥನೆ ವೇಳೆಗೆ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಎಂಟು ಮಂದಿಗೆ ಗಂಭೀರ ಗಾಯಗಳಾಗಿವೆ.<br /> <br /> ದಾಳಿ ನಂತರ ಇಬ್ಬರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಇದು ಉಗ್ರರ ಕೃತ್ಯ ಎಂದು ಪೊಲೀಸ್ ಇಲಾಖೆ ವಕ್ತಾರೆ ಕ್ರಿಸ್ಟಿಯನ್ ಕೌಲೊಂಬೆ ತಿಳಿಸಿದ್ದಾರೆ.<br /> <br /> ಈ ಬಗ್ಗೆ ಹೇಳಿಕೆ ನೀಡಿರುವ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡಿ, ‘ದೇಶ ಕಟ್ಟುವ ವಿಚಾರದಲ್ಲಿ ಮುಸ್ಲಿಂ ಹಾಗೂ ಕೆನಡಾದ ನಿವಾಸಿಗಳು ಬಹುಮುಖ್ಯ ಪಾತ್ರ ವಹಿಸುತ್ತಾರೆ. ಇಂತಹ ಅಮಾನವೀಯ ಕೃತ್ಯಗಳಿಗೆ ನಮ್ಮ ದೇಶದಲ್ಲಿ ಜಾಗವಿಲ್ಲ’ ಎಂದು ತಿಳಿಸಿದ್ದಾರೆ.<br /> <br /> ರಾತ್ರಿ 7.15ರ ಸುಮಾರಿಗೆ ಈ ದಾಳಿ ನಡೆದಿದ್ದು, ಮೃತರು 35 ರಿಂದ 75 ವರ್ಷದ ಒಳಗಿನವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ವಲಸಿಗ ಮುಸ್ಲಿಂರಿಗೆ ತಾತ್ಕಾಲಿಕವಾಗಿ ಆಶ್ರಯ ನೀಡುವುದಾಗಿ ಭಾನುವಾರ ಜಸ್ಟಿನ್ ಟ್ರುಡಿ ಹೇಳಿಕೆ ನೀಡಿದ್ದರು, ಇದರ ಬೆನ್ನಲ್ಲೇ ಈ ದಾಳಿ ನಡೆದಿರುವುದು ಕೆನಡಾದಲ್ಲಿ ಆತಂಕ ಸೃಷ್ಟಿಸಿದೆ. ಕಳೆದ ಜೂನ್ ತಿಂಗಳಲ್ಲಿ ಈ ಮಸೀದಿಯೂ ದುಷ್ಕರ್ಮಿಗಳ ಜನಾಂಗೀಯ ಆಕ್ರಮಣಕ್ಕೆ ತುತ್ತಾಗಿತ್ತು.</p>.<p>*<br /> ಇದೊಂದು ಭಯೋತ್ಪಾದಕ ದಾಳಿ. ಇಂತಹ ಕೃತ್ಯಗಳಿಗೆ ದೇಶದಲ್ಲಿ ಜಾಗವಿಲ್ಲ.<br /> <em><strong>–ಜಸ್ಟಿನ್ ಟ್ರುಡಿ,<br /> ಕೆನಡಾ ಪ್ರಧಾನಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕ್ಯುಬೆಕ್ ನಗರ, ಕೆನಡಾ: </strong>ಕೆನಡಾದ ಕ್ಯುಬೆಕ್ ನಗರದಲ್ಲಿರುವ ಮಸೀದಿಯೊಂದರಲ್ಲಿ ಶಸ್ತ್ರಧಾರಿ ವ್ಯಕ್ತಿಗಳು ನಡೆಸಿದ ಗುಂಡಿನ ದಾಳಿಗೆ 6 ಮಂದಿ ಸಾವಿಗೀಡಾಗಿದ್ದಾರೆ. ಭಾನುವಾರ ಸಂಜೆ ಪ್ರಾರ್ಥನೆ ವೇಳೆಗೆ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಎಂಟು ಮಂದಿಗೆ ಗಂಭೀರ ಗಾಯಗಳಾಗಿವೆ.<br /> <br /> ದಾಳಿ ನಂತರ ಇಬ್ಬರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಇದು ಉಗ್ರರ ಕೃತ್ಯ ಎಂದು ಪೊಲೀಸ್ ಇಲಾಖೆ ವಕ್ತಾರೆ ಕ್ರಿಸ್ಟಿಯನ್ ಕೌಲೊಂಬೆ ತಿಳಿಸಿದ್ದಾರೆ.<br /> <br /> ಈ ಬಗ್ಗೆ ಹೇಳಿಕೆ ನೀಡಿರುವ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡಿ, ‘ದೇಶ ಕಟ್ಟುವ ವಿಚಾರದಲ್ಲಿ ಮುಸ್ಲಿಂ ಹಾಗೂ ಕೆನಡಾದ ನಿವಾಸಿಗಳು ಬಹುಮುಖ್ಯ ಪಾತ್ರ ವಹಿಸುತ್ತಾರೆ. ಇಂತಹ ಅಮಾನವೀಯ ಕೃತ್ಯಗಳಿಗೆ ನಮ್ಮ ದೇಶದಲ್ಲಿ ಜಾಗವಿಲ್ಲ’ ಎಂದು ತಿಳಿಸಿದ್ದಾರೆ.<br /> <br /> ರಾತ್ರಿ 7.15ರ ಸುಮಾರಿಗೆ ಈ ದಾಳಿ ನಡೆದಿದ್ದು, ಮೃತರು 35 ರಿಂದ 75 ವರ್ಷದ ಒಳಗಿನವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ವಲಸಿಗ ಮುಸ್ಲಿಂರಿಗೆ ತಾತ್ಕಾಲಿಕವಾಗಿ ಆಶ್ರಯ ನೀಡುವುದಾಗಿ ಭಾನುವಾರ ಜಸ್ಟಿನ್ ಟ್ರುಡಿ ಹೇಳಿಕೆ ನೀಡಿದ್ದರು, ಇದರ ಬೆನ್ನಲ್ಲೇ ಈ ದಾಳಿ ನಡೆದಿರುವುದು ಕೆನಡಾದಲ್ಲಿ ಆತಂಕ ಸೃಷ್ಟಿಸಿದೆ. ಕಳೆದ ಜೂನ್ ತಿಂಗಳಲ್ಲಿ ಈ ಮಸೀದಿಯೂ ದುಷ್ಕರ್ಮಿಗಳ ಜನಾಂಗೀಯ ಆಕ್ರಮಣಕ್ಕೆ ತುತ್ತಾಗಿತ್ತು.</p>.<p>*<br /> ಇದೊಂದು ಭಯೋತ್ಪಾದಕ ದಾಳಿ. ಇಂತಹ ಕೃತ್ಯಗಳಿಗೆ ದೇಶದಲ್ಲಿ ಜಾಗವಿಲ್ಲ.<br /> <em><strong>–ಜಸ್ಟಿನ್ ಟ್ರುಡಿ,<br /> ಕೆನಡಾ ಪ್ರಧಾನಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>