<p><strong>ಬೀಜಿಂಗ್: </strong>ತನ್ನ ಭೂಪ್ರದೇಶವನ್ನು ರಕ್ಷಿಸಿಕೊಳ್ಳುವಲ್ಲಿ ಚೀನಾದ ಸೇನೆಗಿರುವ ಸಾಮರ್ಥ್ಯದ ಬಗ್ಗೆ ಭ್ರಮೆಗಳನ್ನು ಬಿತ್ತುವುದು ಬೇಡ ಎಂದು ಅಲ್ಲಿನ ರಕ್ಷಣಾ ಸಚಿವಾಲಯ ಸೋಮವಾರ ಭಾರತಕ್ಕೆ ಎಚ್ಚರಿಕೆ ನೀಡಿದೆ. ಸಿಕ್ಕಿಂ ಗಡಿ ವಿವಾದಕ್ಕೆ ಸಂಬಂಧಿಸಿ ಚೀನಾ ಈ ಎಚ್ಚರಿಕೆ ನೀಡಿದೆ.</p>.<p>‘ಪರ್ವತವನ್ನು ಅಲುಗಾಡಿಸುವುದು ಸುಲಭ. ಆದರೆ, ಚೀನಾ ಸೇನೆಯನ್ನು ಅಲುಗಾಡಿಸುವುದು ಕಠಿಣ’ ಎಂದು ರಕ್ಷಣಾ ಸಚಿವಾಲಯದ ವಕ್ತಾರ ವು ಖ್ವಿಯಾನ್ ಹೇಳಿದ್ದಾರೆ. ಚೀನಾದ ಸಾರ್ವಭೌಮತ್ವವನ್ನು ಕಾಪಾಡುವ ಮತ್ತು ಭೂಪ್ರದೇಶವನ್ನು ರಕ್ಷಿಸುವ ಸಾಮರ್ಥ್ಯವನ್ನು ಬಲಯುತಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.</p>.<p>ಡಾಂಗ್ಲಾಂಗ್ ಪ್ರದೇಶದಲ್ಲಿ ಜೂನ್ನಲ್ಲಿ ಭಾರತೀಯ ಸೈನಿಕರು ಗಡಿ ಅತಿಕ್ರಮಣ ಮಾಡಿ ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸಿದ್ದಾರೆ ಎಂದು ಚೀನಾ ಆರೋಪಿಸಿದೆ. ಭಾರತ ಮತ್ತು ಭೂತಾನ್ ಆ ಪ್ರದೇಶವನ್ನು ಡೊಕ್ಲಾಂ ಎಂದು ಕರೆಯುತ್ತಿದ್ದು, ಭೂತಾನ್ಗೆ ಸೇರಿದ್ದೆಂದು ಪ್ರತಿಪಾದಿಸಿವೆ.</p>.<p>‘ಉಭಯ ದೇಶಗಳು ವಿವಾದಿತ ಪ್ರದೇಶದಿಂದ ಸೇನೆಯನ್ನು ಹಿಂದಕ್ಕೆ ಕರೆಸಿಕೊಂಡು ಮಾತುಕತೆ ನಡೆಸಬೇಕು’ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕಳೆದ ವಾರ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್: </strong>ತನ್ನ ಭೂಪ್ರದೇಶವನ್ನು ರಕ್ಷಿಸಿಕೊಳ್ಳುವಲ್ಲಿ ಚೀನಾದ ಸೇನೆಗಿರುವ ಸಾಮರ್ಥ್ಯದ ಬಗ್ಗೆ ಭ್ರಮೆಗಳನ್ನು ಬಿತ್ತುವುದು ಬೇಡ ಎಂದು ಅಲ್ಲಿನ ರಕ್ಷಣಾ ಸಚಿವಾಲಯ ಸೋಮವಾರ ಭಾರತಕ್ಕೆ ಎಚ್ಚರಿಕೆ ನೀಡಿದೆ. ಸಿಕ್ಕಿಂ ಗಡಿ ವಿವಾದಕ್ಕೆ ಸಂಬಂಧಿಸಿ ಚೀನಾ ಈ ಎಚ್ಚರಿಕೆ ನೀಡಿದೆ.</p>.<p>‘ಪರ್ವತವನ್ನು ಅಲುಗಾಡಿಸುವುದು ಸುಲಭ. ಆದರೆ, ಚೀನಾ ಸೇನೆಯನ್ನು ಅಲುಗಾಡಿಸುವುದು ಕಠಿಣ’ ಎಂದು ರಕ್ಷಣಾ ಸಚಿವಾಲಯದ ವಕ್ತಾರ ವು ಖ್ವಿಯಾನ್ ಹೇಳಿದ್ದಾರೆ. ಚೀನಾದ ಸಾರ್ವಭೌಮತ್ವವನ್ನು ಕಾಪಾಡುವ ಮತ್ತು ಭೂಪ್ರದೇಶವನ್ನು ರಕ್ಷಿಸುವ ಸಾಮರ್ಥ್ಯವನ್ನು ಬಲಯುತಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.</p>.<p>ಡಾಂಗ್ಲಾಂಗ್ ಪ್ರದೇಶದಲ್ಲಿ ಜೂನ್ನಲ್ಲಿ ಭಾರತೀಯ ಸೈನಿಕರು ಗಡಿ ಅತಿಕ್ರಮಣ ಮಾಡಿ ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸಿದ್ದಾರೆ ಎಂದು ಚೀನಾ ಆರೋಪಿಸಿದೆ. ಭಾರತ ಮತ್ತು ಭೂತಾನ್ ಆ ಪ್ರದೇಶವನ್ನು ಡೊಕ್ಲಾಂ ಎಂದು ಕರೆಯುತ್ತಿದ್ದು, ಭೂತಾನ್ಗೆ ಸೇರಿದ್ದೆಂದು ಪ್ರತಿಪಾದಿಸಿವೆ.</p>.<p>‘ಉಭಯ ದೇಶಗಳು ವಿವಾದಿತ ಪ್ರದೇಶದಿಂದ ಸೇನೆಯನ್ನು ಹಿಂದಕ್ಕೆ ಕರೆಸಿಕೊಂಡು ಮಾತುಕತೆ ನಡೆಸಬೇಕು’ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕಳೆದ ವಾರ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>