<p><strong>ಕೊಲಂಬೊ (ಪಿಟಿಐ):</strong> ತಮಿಳರ ಸಮಸ್ಯೆಗಳ ನಿವಾರಣೆಗೆ ಬೇರೆ ದೇಶಗಳತ್ತ ನೋಡುವ ಬದಲು ದೇಶದೊಳಗೇ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ಸರ್ಕಾರದೊಂದಿಗೆ ಕೈಜೋಡಿಸುವಂತೆ ಪ್ರಮುಖ ತಮಿಳು ಪಕ್ಷಗಳ ನಾಯಕರಿಗೆ ಶ್ರೀಲಂಕಾ ಅಧ್ಯಕ್ಷ ಮಹಿಂದ ರಾಜಪಕ್ಸೆ ಮನವಿ ಮಾಡಿದ್ದಾರೆ.<br /> <br /> ‘ಶಾಂತಿ ಮತ್ತು ಸಾಮರಸ್ಯ ನಿರ್ವಹಣೆಗಾಗಿ ತಮ್ಮೊಂದಿಗೆ ಕೈಜೋಡಿಸುವಂತೆ ಟಿಎನ್ಎ ನಾಯಕ ಸಂಪತ್ತನ್ ಮತ್ತು ಉತ್ತರ ಪ್ರಾಂತ್ಯದ ಮುಖ್ಯಮಂತ್ರಿ ವಿಘ್ನೇಶ್ವರನ್ ಅವರನ್ನು ಕೇಳಿಕೊಳ್ಳುತ್ತೇನೆ’ ಎಂದು ಸಂಸತ್ತಿನಲ್ಲಿ ಶುಕ್ರವಾರ 2014ರ ಬಜೆಟ್ ಚರ್ಚೆಯ ಸಂದರ್ಭದಲ್ಲಿ ರಾಜಪಕ್ಸೆ ತಿಳಿಸಿದ್ದಾರೆ.<br /> <br /> ಎಲ್ಲ ಸಮುದಾಯದವರೂ ಶಾಂತಿಯ ಜೊತೆ ಬರಬೇಕೇ ಹೊರತು ದ್ವೇಷದ ಜೊತೆಗಲ್ಲ. ಇದು ರಾಷ್ಟ್ರೀಯ ಸಾಮರಸ್ಯಕ್ಕಾಗಿ ನಮ್ಮ ಬದ್ಧತೆಯನ್ನು ತೋರಿಸುವ ಸಮಯ’ ಎಂದು ಅವರು ಹೇಳಿದ್ದಾರೆ.<br /> <br /> ‘ನಾವು ಬೇರೆಯವರಿಗೆ ಮಾದರಿಯಾಗುವ ರೀತಿ ಪರಿಹಾರವನ್ನು ಕಂಡುಕೊಳ್ಳಬೇಕು. ಮುಂದಿನ ಜನಾಂಗದ ದೃಷ್ಟಿಯಿಂದ ಇದು ನಮ್ಮ ಜವಾಬ್ದಾರಿಯಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ (ಪಿಟಿಐ):</strong> ತಮಿಳರ ಸಮಸ್ಯೆಗಳ ನಿವಾರಣೆಗೆ ಬೇರೆ ದೇಶಗಳತ್ತ ನೋಡುವ ಬದಲು ದೇಶದೊಳಗೇ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ಸರ್ಕಾರದೊಂದಿಗೆ ಕೈಜೋಡಿಸುವಂತೆ ಪ್ರಮುಖ ತಮಿಳು ಪಕ್ಷಗಳ ನಾಯಕರಿಗೆ ಶ್ರೀಲಂಕಾ ಅಧ್ಯಕ್ಷ ಮಹಿಂದ ರಾಜಪಕ್ಸೆ ಮನವಿ ಮಾಡಿದ್ದಾರೆ.<br /> <br /> ‘ಶಾಂತಿ ಮತ್ತು ಸಾಮರಸ್ಯ ನಿರ್ವಹಣೆಗಾಗಿ ತಮ್ಮೊಂದಿಗೆ ಕೈಜೋಡಿಸುವಂತೆ ಟಿಎನ್ಎ ನಾಯಕ ಸಂಪತ್ತನ್ ಮತ್ತು ಉತ್ತರ ಪ್ರಾಂತ್ಯದ ಮುಖ್ಯಮಂತ್ರಿ ವಿಘ್ನೇಶ್ವರನ್ ಅವರನ್ನು ಕೇಳಿಕೊಳ್ಳುತ್ತೇನೆ’ ಎಂದು ಸಂಸತ್ತಿನಲ್ಲಿ ಶುಕ್ರವಾರ 2014ರ ಬಜೆಟ್ ಚರ್ಚೆಯ ಸಂದರ್ಭದಲ್ಲಿ ರಾಜಪಕ್ಸೆ ತಿಳಿಸಿದ್ದಾರೆ.<br /> <br /> ಎಲ್ಲ ಸಮುದಾಯದವರೂ ಶಾಂತಿಯ ಜೊತೆ ಬರಬೇಕೇ ಹೊರತು ದ್ವೇಷದ ಜೊತೆಗಲ್ಲ. ಇದು ರಾಷ್ಟ್ರೀಯ ಸಾಮರಸ್ಯಕ್ಕಾಗಿ ನಮ್ಮ ಬದ್ಧತೆಯನ್ನು ತೋರಿಸುವ ಸಮಯ’ ಎಂದು ಅವರು ಹೇಳಿದ್ದಾರೆ.<br /> <br /> ‘ನಾವು ಬೇರೆಯವರಿಗೆ ಮಾದರಿಯಾಗುವ ರೀತಿ ಪರಿಹಾರವನ್ನು ಕಂಡುಕೊಳ್ಳಬೇಕು. ಮುಂದಿನ ಜನಾಂಗದ ದೃಷ್ಟಿಯಿಂದ ಇದು ನಮ್ಮ ಜವಾಬ್ದಾರಿಯಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>