<p><strong>ಕೊಲಂಬೊ (ಪಿಟಿಐ):</strong> ಎಲ್ಟಿಟಿಇ ನಾಯಕ ವೇಲುಪಿಳ್ಳೈ ಪ್ರಭಾಕರನ್ ಇನ್ನೂ ಬದುಕಿದ್ದಾರೆ ಎಂದು ಶ್ರೀಲಂಕಾ ತಮಿಳು ರಾಷ್ಟ್ರೀಯವಾದಿಗಳು ಭಾವಿಸಿದ್ದಾರೆ. ನಾಪತ್ತೆಯಾಗಿರುವ ವ್ಯಕ್ತಿಗಳ ಪತ್ತೆಗಾಗಿ ಹೊಸದಾಗಿ ಕಚೇರಿಯೊಂದನ್ನು ತೆರೆಯಲಾಗಿದ್ದು, ಪ್ರಭಾಕರನ್ ನಾಪತ್ತೆಯಾಗಿರುವ ಮಾಹಿತಿಯನ್ನು ಆ ಕಚೇರಿಗೆ ನೀಡುವುದಾಗಿ ತಮಿಳು ರಾಷ್ಟ್ರೀಯ ಮೈತ್ರಿಕೂಟದ ಮುಖಂಡ ಎಂ.ಶಿವಾಜಿಲಿಂಗಂ ಹೇಳಿದ್ದಾರೆ.<br /> <br /> ಲಿಬರೇಷನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್ಟಿಟಿಇ) ಹೆಸರಿನಲ್ಲಿ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಪ್ರತ್ಯೇಕ ಹೋರಾಟ ಕೈಗೊಂಡಿದ್ದ ಪ್ರಭಾಕರನ್ ಅವರನ್ನು 2009ರ ಮೇ 19ರಂದು ಮುಲ್ಲೈವೈಕ್ಕಲ್ನಲ್ಲಿ ಹತ್ಯೆ ಮಾಡಿದ್ದಾಗಿ ಶ್ರೀಲಂಕಾ ಸೇನೆ ಹೇಳಿಕೊಂಡಿತ್ತು.<br /> <br /> <strong>ಬದುಕಿರುವ ನಂಬಿಕೆ: </strong>ಸರ್ಕಾರದ ವಾದವನ್ನು ಒಪ್ಪದ ಕೆಲವು ತಮಿಳು ರಾಷ್ಟ್ರೀಯವಾದಿಗಳು, ಪ್ರಭಾಕರನ್ ಈಗಲೂ ಬದುಕಿರುವ ಸಾಧ್ಯತೆ ಇದೆ ಎಂದೇ ನಂಬಿದ್ದಾರೆ. 2009ರ ಯುದ್ಧದಲ್ಲಿ ಅವರು ತಪ್ಪಿಸಿಕೊಂಡಿರಬಹುದು ಎಂದು ಭಾವಿಸಿದ್ದಾರೆ.<br /> <br /> ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿಯ ನಿರ್ಣಯ ಜಾರಿಯ ಭಾಗವಾಗಿ ಶ್ರೀಲಂಕಾ ಸರ್ಕಾರವು ಹೊಸದಾಗಿ ಈ ಕಚೇರಿ ಆರಂಭಿಸಿದೆ.<br /> ಅಂತರರಾಷ್ಟ್ರೀಯ ರೆಡ್ಕ್ರಾಸ್ ಸಂಸ್ಥೆಯು ನಡೆಸಿದ ಸಮೀಕ್ಷೆ ಪ್ರಕಾರ 2009ರಿಂದ ಈಚೆಗೆ 16 ಸಾವಿರ ಜನರು ನಾಪತ್ತೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ (ಪಿಟಿಐ):</strong> ಎಲ್ಟಿಟಿಇ ನಾಯಕ ವೇಲುಪಿಳ್ಳೈ ಪ್ರಭಾಕರನ್ ಇನ್ನೂ ಬದುಕಿದ್ದಾರೆ ಎಂದು ಶ್ರೀಲಂಕಾ ತಮಿಳು ರಾಷ್ಟ್ರೀಯವಾದಿಗಳು ಭಾವಿಸಿದ್ದಾರೆ. ನಾಪತ್ತೆಯಾಗಿರುವ ವ್ಯಕ್ತಿಗಳ ಪತ್ತೆಗಾಗಿ ಹೊಸದಾಗಿ ಕಚೇರಿಯೊಂದನ್ನು ತೆರೆಯಲಾಗಿದ್ದು, ಪ್ರಭಾಕರನ್ ನಾಪತ್ತೆಯಾಗಿರುವ ಮಾಹಿತಿಯನ್ನು ಆ ಕಚೇರಿಗೆ ನೀಡುವುದಾಗಿ ತಮಿಳು ರಾಷ್ಟ್ರೀಯ ಮೈತ್ರಿಕೂಟದ ಮುಖಂಡ ಎಂ.ಶಿವಾಜಿಲಿಂಗಂ ಹೇಳಿದ್ದಾರೆ.<br /> <br /> ಲಿಬರೇಷನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್ಟಿಟಿಇ) ಹೆಸರಿನಲ್ಲಿ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಪ್ರತ್ಯೇಕ ಹೋರಾಟ ಕೈಗೊಂಡಿದ್ದ ಪ್ರಭಾಕರನ್ ಅವರನ್ನು 2009ರ ಮೇ 19ರಂದು ಮುಲ್ಲೈವೈಕ್ಕಲ್ನಲ್ಲಿ ಹತ್ಯೆ ಮಾಡಿದ್ದಾಗಿ ಶ್ರೀಲಂಕಾ ಸೇನೆ ಹೇಳಿಕೊಂಡಿತ್ತು.<br /> <br /> <strong>ಬದುಕಿರುವ ನಂಬಿಕೆ: </strong>ಸರ್ಕಾರದ ವಾದವನ್ನು ಒಪ್ಪದ ಕೆಲವು ತಮಿಳು ರಾಷ್ಟ್ರೀಯವಾದಿಗಳು, ಪ್ರಭಾಕರನ್ ಈಗಲೂ ಬದುಕಿರುವ ಸಾಧ್ಯತೆ ಇದೆ ಎಂದೇ ನಂಬಿದ್ದಾರೆ. 2009ರ ಯುದ್ಧದಲ್ಲಿ ಅವರು ತಪ್ಪಿಸಿಕೊಂಡಿರಬಹುದು ಎಂದು ಭಾವಿಸಿದ್ದಾರೆ.<br /> <br /> ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿಯ ನಿರ್ಣಯ ಜಾರಿಯ ಭಾಗವಾಗಿ ಶ್ರೀಲಂಕಾ ಸರ್ಕಾರವು ಹೊಸದಾಗಿ ಈ ಕಚೇರಿ ಆರಂಭಿಸಿದೆ.<br /> ಅಂತರರಾಷ್ಟ್ರೀಯ ರೆಡ್ಕ್ರಾಸ್ ಸಂಸ್ಥೆಯು ನಡೆಸಿದ ಸಮೀಕ್ಷೆ ಪ್ರಕಾರ 2009ರಿಂದ ಈಚೆಗೆ 16 ಸಾವಿರ ಜನರು ನಾಪತ್ತೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>