<p><strong>ಇಸ್ಲಾಮಾಬಾದ್ (ಪಿಟಿಐ):</strong> ಪಾಕಿಸ್ತಾನದ ಕೆಲ ಭಾಗಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾದ ಹಠಾತ್ ಪ್ರವಾಹದಿಂದ 19 ಮಂದಿ ಮೃತಪಟ್ಟು, 42ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.<br /> <br /> ಇಲ್ಲಿನ ಖೈಬರ್ ಫಕ್ತುಂಖ್ವಾ, ಗಿಲ್ಗಿಟ್ ಬಲ್ಟಿಸ್ತಾನ್, ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಸೇರಿದಂತೆ ಕೆಲ ಬುಡಕಟ್ಟು ಪ್ರದೇಶಗಳಲ್ಲಿ ದಿಢೀರ್ ಪ್ರವಾಹ ಉಂಟಾಗಿ ಹೆಚ್ಚಿನ ಪ್ರಮಾಣದ ಆಸ್ತಿ- ಪಾಸ್ತಿಗೆ ಹಾನಿಯಾಗಿದೆ.<br /> <br /> ಪಂಜಾಬ್ನಲ್ಲಿ ಆರು ಮಂದಿ ಹಾಗೂ ಇತರೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ 13 ಮಂದಿ ಮೃತಪಟ್ಟು, 34 ಜನ ಗಾಯಗೊಂಡಿರುವುದಾಗಿ `ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್' ವರದಿ ಮಾಡಿದೆ.<br /> <br /> ಇಲ್ಲಿನ ವಾರ್ಸಾಕ್ ಅಣೆಕಟ್ಟಿನಿಂದಶನಿವಾರ 50 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಗೆ ಬಿಡಲಾಗಿದ್ದು, ಇದರಿಂದಾಗಿ ನೌಶೆರಾ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ಚಿತ್ರಾಲ್, ಸ್ವಾತ್ ಕಣಿವೆ, ಪೆಶಾವರ, ಕೋಹಿಸ್ತಾನ್ ಸೇರಿದಂತೆ ಖೈಬರ್ ಫಕ್ತುಂಖ್ವಾ ಪ್ರಾಂತ್ಯದ ಏಳು ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿದ್ದು, ಈ ಸ್ಥಳಗಳಿಂದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೇಳಿದೆ.<br /> <br /> ಪ್ರವಾಹ ಸ್ಥಳಗಳಿಗೆ ಆಹಾರ ಮತ್ತು ನೀರು ಸರಬರಾಜು ಮಾಡಲಾಗಿದೆ. ಸಂವಹನಕ್ಕೆ ತೊಂದರೆಯಾಗಿದ್ದು, ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ ಎಂದು ಪಿಡಿಎಂಎ ನಿರ್ದೇಶಕರು ತಿಳಿಸಿದ್ದಾರೆ..</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್ (ಪಿಟಿಐ):</strong> ಪಾಕಿಸ್ತಾನದ ಕೆಲ ಭಾಗಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾದ ಹಠಾತ್ ಪ್ರವಾಹದಿಂದ 19 ಮಂದಿ ಮೃತಪಟ್ಟು, 42ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.<br /> <br /> ಇಲ್ಲಿನ ಖೈಬರ್ ಫಕ್ತುಂಖ್ವಾ, ಗಿಲ್ಗಿಟ್ ಬಲ್ಟಿಸ್ತಾನ್, ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಸೇರಿದಂತೆ ಕೆಲ ಬುಡಕಟ್ಟು ಪ್ರದೇಶಗಳಲ್ಲಿ ದಿಢೀರ್ ಪ್ರವಾಹ ಉಂಟಾಗಿ ಹೆಚ್ಚಿನ ಪ್ರಮಾಣದ ಆಸ್ತಿ- ಪಾಸ್ತಿಗೆ ಹಾನಿಯಾಗಿದೆ.<br /> <br /> ಪಂಜಾಬ್ನಲ್ಲಿ ಆರು ಮಂದಿ ಹಾಗೂ ಇತರೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ 13 ಮಂದಿ ಮೃತಪಟ್ಟು, 34 ಜನ ಗಾಯಗೊಂಡಿರುವುದಾಗಿ `ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್' ವರದಿ ಮಾಡಿದೆ.<br /> <br /> ಇಲ್ಲಿನ ವಾರ್ಸಾಕ್ ಅಣೆಕಟ್ಟಿನಿಂದಶನಿವಾರ 50 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಗೆ ಬಿಡಲಾಗಿದ್ದು, ಇದರಿಂದಾಗಿ ನೌಶೆರಾ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ಚಿತ್ರಾಲ್, ಸ್ವಾತ್ ಕಣಿವೆ, ಪೆಶಾವರ, ಕೋಹಿಸ್ತಾನ್ ಸೇರಿದಂತೆ ಖೈಬರ್ ಫಕ್ತುಂಖ್ವಾ ಪ್ರಾಂತ್ಯದ ಏಳು ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿದ್ದು, ಈ ಸ್ಥಳಗಳಿಂದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೇಳಿದೆ.<br /> <br /> ಪ್ರವಾಹ ಸ್ಥಳಗಳಿಗೆ ಆಹಾರ ಮತ್ತು ನೀರು ಸರಬರಾಜು ಮಾಡಲಾಗಿದೆ. ಸಂವಹನಕ್ಕೆ ತೊಂದರೆಯಾಗಿದ್ದು, ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ ಎಂದು ಪಿಡಿಎಂಎ ನಿರ್ದೇಶಕರು ತಿಳಿಸಿದ್ದಾರೆ..</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>