ಮುಜಫರಾಬಾದ್ (ಪಾಕಿಸ್ತಾನ): ವಿವಾದಿತ ಕಾಶ್ಮೀರದ ಭಾಗದಲ್ಲಿ ಭಾರತದ ಯೋಧರು ಶನಿವಾರ ರಾತ್ರಿ ಗುಂಡಿನ ದಾಳಿ ನಡೆಸಿದ್ದಾರೆ. ಕದನ ವಿರಾಮ ಉಲ್ಲಂಘಿಸಿ ಈ ದಾಳಿ ನಡೆಸಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪಾಕಿಸ್ತಾನ ಸೇನೆ ಆರೋಪಿಸಿದೆ.
ಚಿರಿಕೋಟ್ ಭಾಗದ ಗಡಿ ನಿಯಂತ್ರಣ ರೇಖೆ ಬಳಿ ಈ ಘಟನೆ ನಡೆದಿದೆ ಎಂದು ಪಾಕಿಸ್ತಾನ ಸೇನೆ ಹೇಳಿದೆ. ದಾಳಿಯಲ್ಲಿ ಮಹಮ್ಮದ್ ವಾಸಿಂ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುತ್ತಿಗೆಗೆ ಗುಂಡು ತಗುಲಿದ್ದರಿಂದ ಅವರು ಬದುಕುಳಿಯಲಿಲ್ಲ ಎಂದು ತಿಳಿಸಿದೆ.
ಪಾಕ್ ಖಂಡನೆ: ಭಾರತದಲ್ಲಿ ನಡೆದ ಉಗ್ರರ ದಾಳಿಯನ್ನು ವಿಶ್ವಸಂಸ್ಥೆ ಮತ್ತು ಪಾಕಿಸ್ತಾನ ತೀವ್ರವಾಗಿ ಖಂಡಿಸಿವೆ.