<p><strong>ಟೆಹರಾನ್(ಎಎಫ್ಪಿ): </strong>ಇನ್ನೇನು ನೇಣಿಗೇರಬೇಕಾಗಿದ್ದ ಮಗನ ಕೊಲೆಗಾರನನ್ನು ತಾಯಿಯೇ ರಕ್ಷಿಸಿದ ಅಪರೂಪದ ಘಟನೆ ಇರಾನ್ನಲ್ಲಿ ನಡೆದಿದೆ.<br /> <br /> ೨೦೦೭ರಲ್ಲಿ ನಡೆದ ಬೀದಿ ಕಾಳಗದಲ್ಲಿ ಬಲಾಲ್ ಎಂಬಾತ ಅಬ್ದುಲ್ಲಾ ಹುಸೇನ್ ಜಾದ್ ಎಂಬಾತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಈ ಆರೋಪಕ್ಕಾಗಿ ಬಲಾಲ್ನನ್ನು ಮಂಗಳವಾರ ಬೆಳಿಗ್ಗೆ ಸಾರ್ವಜನಿಕವಾಗಿ ನೇಣಿಗೇರಿಸಲು ಸಿದ್ಧತೆ ಮಾಡಲಾಗಿತ್ತು.<br /> <br /> ಆದರೆ ಆ ವೇಳೆಗೆ ಅಲ್ಲಿ ಬಂದ ಹುಸೇನ್ ತಾಯಿ ಸಮೆರಾ ಅಲಿನೆಜಾದ್, ‘ಮಕ್ಕಳಿಲ್ಲದ ಮನೆಯಲ್ಲಿ ಬದುಕುವುದು ಎಷ್ಟು ಕಷ್ಟ ಎನ್ನುವುದು ನಿಮಗೆ ಗೊತ್ತಾ’ ಎಂದು ಅಲ್ಲಿ ಸೇರಿದ್ದ ಜನಸ್ತೋಮವನ್ನು ಕೇಳಿದರು. ನಂತರ ಭಾವೋದ್ವೇಗದಿಂದ ಬಲಾಲ್ ಕೆನ್ನೆಗೆ ಹೊಡೆದು ಆತನ ಕೊರಳಲ್ಲಿದ್ದ ಕುಣಿಕೆಯನ್ನು ಕಳಚಿದರು. <br /> <br /> ‘ನನಗೆ ನಂಬಿಕೆ ಇದೆ. ನನ್ನ ಪುತ್ರ ಕನಸಿನಲ್ಲಿ ಬಂದು ಅಮ್ಮಾ ನಾನು ಇಲ್ಲಿ ಶಾಂತಿಯಿಂದ ಇದ್ದೇನೆ ಎಂದಿದ್ದ. ಇದಾದ ಬಳಿಕ ನನ್ನ ತಾಯಿ ಸೇರಿದಂತೆ ಎಲ್ಲ ಬಂಧುಗಳು ನನ್ನ ಪುತ್ರನನ್ನು ಕೊಲೆ ಮಾಡಿದ ಆರೋಪಿಯನ್ನು ಕ್ಷಮಿಸುವಂತೆ ಒತ್ತಾಯಿಸಿದರು.’<br /> ‘ಜೀವದಾನ ನೀಡಿ ಎಂದು ಆರೋಪಿ ಕೂಗಿಗೊಳ್ಳುತ್ತಿದ್ದ. ನಾನು ಆತನ ಕೆನ್ನೆಗೆ ಬಾರಿಸಿದೆ. ಆಗ ನನಗೆ ಸಮಾಧಾನವಾಯಿತು. ಈಗ ನಾನು ಅವನನ್ನು ಕ್ಷಮಿಸಿದ್ದೇನೆ. ನನ್ನಲ್ಲಿ ನಿರಾಳ ಭಾವ ಮನೆ ಮಾಡಿದೆ’ ಎಂದು ಸಮೆರಾ ಅಲಿನೆಜಾದ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಟೆಹರಾನ್(ಎಎಫ್ಪಿ): </strong>ಇನ್ನೇನು ನೇಣಿಗೇರಬೇಕಾಗಿದ್ದ ಮಗನ ಕೊಲೆಗಾರನನ್ನು ತಾಯಿಯೇ ರಕ್ಷಿಸಿದ ಅಪರೂಪದ ಘಟನೆ ಇರಾನ್ನಲ್ಲಿ ನಡೆದಿದೆ.<br /> <br /> ೨೦೦೭ರಲ್ಲಿ ನಡೆದ ಬೀದಿ ಕಾಳಗದಲ್ಲಿ ಬಲಾಲ್ ಎಂಬಾತ ಅಬ್ದುಲ್ಲಾ ಹುಸೇನ್ ಜಾದ್ ಎಂಬಾತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಈ ಆರೋಪಕ್ಕಾಗಿ ಬಲಾಲ್ನನ್ನು ಮಂಗಳವಾರ ಬೆಳಿಗ್ಗೆ ಸಾರ್ವಜನಿಕವಾಗಿ ನೇಣಿಗೇರಿಸಲು ಸಿದ್ಧತೆ ಮಾಡಲಾಗಿತ್ತು.<br /> <br /> ಆದರೆ ಆ ವೇಳೆಗೆ ಅಲ್ಲಿ ಬಂದ ಹುಸೇನ್ ತಾಯಿ ಸಮೆರಾ ಅಲಿನೆಜಾದ್, ‘ಮಕ್ಕಳಿಲ್ಲದ ಮನೆಯಲ್ಲಿ ಬದುಕುವುದು ಎಷ್ಟು ಕಷ್ಟ ಎನ್ನುವುದು ನಿಮಗೆ ಗೊತ್ತಾ’ ಎಂದು ಅಲ್ಲಿ ಸೇರಿದ್ದ ಜನಸ್ತೋಮವನ್ನು ಕೇಳಿದರು. ನಂತರ ಭಾವೋದ್ವೇಗದಿಂದ ಬಲಾಲ್ ಕೆನ್ನೆಗೆ ಹೊಡೆದು ಆತನ ಕೊರಳಲ್ಲಿದ್ದ ಕುಣಿಕೆಯನ್ನು ಕಳಚಿದರು. <br /> <br /> ‘ನನಗೆ ನಂಬಿಕೆ ಇದೆ. ನನ್ನ ಪುತ್ರ ಕನಸಿನಲ್ಲಿ ಬಂದು ಅಮ್ಮಾ ನಾನು ಇಲ್ಲಿ ಶಾಂತಿಯಿಂದ ಇದ್ದೇನೆ ಎಂದಿದ್ದ. ಇದಾದ ಬಳಿಕ ನನ್ನ ತಾಯಿ ಸೇರಿದಂತೆ ಎಲ್ಲ ಬಂಧುಗಳು ನನ್ನ ಪುತ್ರನನ್ನು ಕೊಲೆ ಮಾಡಿದ ಆರೋಪಿಯನ್ನು ಕ್ಷಮಿಸುವಂತೆ ಒತ್ತಾಯಿಸಿದರು.’<br /> ‘ಜೀವದಾನ ನೀಡಿ ಎಂದು ಆರೋಪಿ ಕೂಗಿಗೊಳ್ಳುತ್ತಿದ್ದ. ನಾನು ಆತನ ಕೆನ್ನೆಗೆ ಬಾರಿಸಿದೆ. ಆಗ ನನಗೆ ಸಮಾಧಾನವಾಯಿತು. ಈಗ ನಾನು ಅವನನ್ನು ಕ್ಷಮಿಸಿದ್ದೇನೆ. ನನ್ನಲ್ಲಿ ನಿರಾಳ ಭಾವ ಮನೆ ಮಾಡಿದೆ’ ಎಂದು ಸಮೆರಾ ಅಲಿನೆಜಾದ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>