<p><strong>ಇಸ್ಲಾಮಾಬಾದ್ (ಪಿಟಿಐ):</strong> ರಾಷ್ಟ್ರಾಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳ ಮರುತನಿಖೆಗಾಗಿ ಜುಲೈ 25ರೊಳಗೆ ಸ್ವಿಟ್ಜರ್ಲೆಂಡ್ ಸರ್ಕಾರದೊಂದಿಗೆ ಪತ್ರ ವ್ಯವಹಾರ ನಡೆಸಬೇಕೆಂದು ನೂತನ ಪ್ರಧಾನಿಗೆ ಸುಪ್ರೀಂಕೋರ್ಟ್ ಗುರುವಾರ ಆದೇಶಿಸಿದೆ. <br /> <br /> ಇದರೊಂದಿಗೆ ರಾಷ್ಟ್ರದಲ್ಲಿ ಮತ್ತೊಮ್ಮೆ ರಾಜಕೀಯ ಸಂಘರ್ಷದ ಸನ್ನಿವೇಶ ನಿಚ್ಚಳವಾಗಿದೆ.<br /> <br /> ಕಾನೂನು ತಜ್ಞರೊಂದಿಗೆ ಅಥವಾ ಸರ್ಕಾರದೊಳಗೆ ಮರು ಚರ್ಚೆ ಮಾಡದೆ ಈ ಕಾರ್ಯ ಮಾಡಬೇಕು ಎಂದು ನ್ಯಾಯಮೂರ್ತಿ ಆಸಿಫ್ ಸಯೀದ್ ಖಾನ್ ಖೋಸಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ಸ್ಪಷ್ಟಪಡಿಸಿದೆ.<br /> <br /> ಪ್ರಧಾನಿ ರಜಾ ಪರ್ವೇಜ್ ಅಶ್ರಫ್ ಅವರು ಕ್ರಮ ಕೈಗೊಳ್ಳದಿದ್ದರೆ, ನ್ಯಾಯಾಲಯವು ಅವರ ವಿರುದ್ಧ ಸಂವಿಧಾನದ ಅಡಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಲಾಗಿದೆ.25ರಂದು ವಿಚಾರಣೆ ನಡೆಯುವ ವೇಳೆ, ಕೋರ್ಟ್ನ ಆದೇಶ ಪಾಲಿಸಿರುವುದರ ಕುರಿತು ವರದಿ ಲಗತ್ತಿಸುವಂತೆಯೂ ನ್ಯಾಯಪೀಠ ಸೂಚಿಸಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್ (ಪಿಟಿಐ):</strong> ರಾಷ್ಟ್ರಾಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳ ಮರುತನಿಖೆಗಾಗಿ ಜುಲೈ 25ರೊಳಗೆ ಸ್ವಿಟ್ಜರ್ಲೆಂಡ್ ಸರ್ಕಾರದೊಂದಿಗೆ ಪತ್ರ ವ್ಯವಹಾರ ನಡೆಸಬೇಕೆಂದು ನೂತನ ಪ್ರಧಾನಿಗೆ ಸುಪ್ರೀಂಕೋರ್ಟ್ ಗುರುವಾರ ಆದೇಶಿಸಿದೆ. <br /> <br /> ಇದರೊಂದಿಗೆ ರಾಷ್ಟ್ರದಲ್ಲಿ ಮತ್ತೊಮ್ಮೆ ರಾಜಕೀಯ ಸಂಘರ್ಷದ ಸನ್ನಿವೇಶ ನಿಚ್ಚಳವಾಗಿದೆ.<br /> <br /> ಕಾನೂನು ತಜ್ಞರೊಂದಿಗೆ ಅಥವಾ ಸರ್ಕಾರದೊಳಗೆ ಮರು ಚರ್ಚೆ ಮಾಡದೆ ಈ ಕಾರ್ಯ ಮಾಡಬೇಕು ಎಂದು ನ್ಯಾಯಮೂರ್ತಿ ಆಸಿಫ್ ಸಯೀದ್ ಖಾನ್ ಖೋಸಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ಸ್ಪಷ್ಟಪಡಿಸಿದೆ.<br /> <br /> ಪ್ರಧಾನಿ ರಜಾ ಪರ್ವೇಜ್ ಅಶ್ರಫ್ ಅವರು ಕ್ರಮ ಕೈಗೊಳ್ಳದಿದ್ದರೆ, ನ್ಯಾಯಾಲಯವು ಅವರ ವಿರುದ್ಧ ಸಂವಿಧಾನದ ಅಡಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಲಾಗಿದೆ.25ರಂದು ವಿಚಾರಣೆ ನಡೆಯುವ ವೇಳೆ, ಕೋರ್ಟ್ನ ಆದೇಶ ಪಾಲಿಸಿರುವುದರ ಕುರಿತು ವರದಿ ಲಗತ್ತಿಸುವಂತೆಯೂ ನ್ಯಾಯಪೀಠ ಸೂಚಿಸಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>