ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಮೀನುಗಾರರ ಹತ್ಯೆ ಪ್ರಮಾದ ಆಗಿಲ್ಲ'

Last Updated 8 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ): ಪರ್ಷಿಯನ್ ಕೊಲ್ಲಿಯಲ್ಲಿ ಕಳೆದ ವರ್ಷ ಭಾರತದ  ಮೂಲದ ಮೀನುಗಾರನೊಬ್ಬರ ಹತ್ಯೆ ಪ್ರಕರಣದಲ್ಲಿ ಯಾವುದೇ ಪ್ರಮಾದ ಆಗಿಲ್ಲ ಎಂದು ಈ ಬಗ್ಗೆ ತನಿಖೆ ನಡೆಸಿದ ಅಮೆರಿಕದ ನೌಕಾ ಪಡೆಯ ತನಿಖಾ ತಂಡ ಹೇಳಿದೆ.

ದುಬೈ ಕರಾವಳಿಯಲ್ಲಿ ಭಾರತೀಯ ಮೀನುಗಾರರಿದ್ದ ದೋಣಿಯ ಮೇಲೆ ಅಮೆರಿಕ ನೌಕೆಯ ಸಿಬ್ಬಂದಿ 2012ರ ಜುಲೈ 16ರಂದು ಗುಂಡು ಹಾರಿಸಿದ್ದರು. ಇದರಿಂದ ಒಬ್ಬರು ಮೃತಪಟ್ಟು, ಮೂವರಿಗೆ ಗಾಯವಾಗಿತ್ತು.ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಭಾರತ ಆಗ್ರಹಿಸಿತ್ತು.

`ನೌಕಾ ಪಡೆ ನೌಕೆಯ ಸನಿಹಕ್ಕೆ ಬರುತ್ತಿದ್ದ ಮೀನುಗಾರರ ದೋಣಿಗೆ ಎಚ್ಚರಿಕೆ ಕೊಟ್ಟರೂ ಎಚ್ಚೆತ್ತುಕೊಳ್ಳಲಿಲ್ಲ. ಆಗ ಗುಂಡು ಹಾರಿಸದೇ ಬೇರೆ ದಾರಿ ಇರಲಿಲ್ಲ' ಎಂದು ತನಿಖಾ ವರದಿ ಹೇಳಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT