<p><strong>ಇಸ್ಲಾಮಾಬಾದ್ (ಪಿಟಿಐ): </strong>ಮುಂಬೈ ದಾಳಿಯಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಲಷ್ಕರ್-ಎ-ತೈಯ್ಯಬಾದ ಕಮಾಂಡರ್ ಝಾಕಿ-ಉರ್- ರೆಹಮಾನ್ ಲಖ್ವಿ ಸೇರಿದಂತೆ ಏಳು ಆರೋಪಿಗಳನ್ನು ರಾವಲ್ಪಿಂಡಿ ನ್ಯಾಯಾಲಯದಿಂದ ಇಲ್ಲಿನ ಹೊಸ ಭಯೋತ್ಪಾದನಾ ನಿಗ್ರಹ ನ್ಯಾಯಾಲಯಕ್ಕೆ ಸ್ಥಳಾಂತರಿಸಲಾಗಿದೆ.<br /> <br /> ಇಸ್ಲಾಮಾಬಾದ್ ನ್ಯಾಯಾಲಯದ ನ್ಯಾಯಮೂರ್ತಿ ಕೌಸರ್ ಅಬ್ಬಾಸ್ ಜೈದಿ ಇರುವ ಭಯೋತ್ಪಾದನಾ ವಿರೋಧಿ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾಯಿಸಬೇಕೆಂದು ರಾವಲ್ಪಿಂಡಿಯ ನ್ಯಾಯಮೂರ್ತಿ ಚೌಧರಿ ಹಬೀಬ್-ಉರ್-ರೆಹಮಾನ್ ಅವರು ಸರ್ಕಾರಿ ವಕೀಲರಿಂದ ಅರ್ಜಿ ಪಡೆದ ನಂತರ ಈ ಸಂಬಂಧ ಆದೇಶ ಹೊರಡಿಸಿದರು.<br /> <br /> ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಇತ್ತೀಚೆಗೆ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ವಿರುದ್ಧದ ಪ್ರಕರಣದ ವಿಚಾರಣೆಗಾಗಿ ಜೈದಿಯವರ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಅಲ್ಲಿಯವರೆಗೂ ಇಸ್ಲಾಮಾಬಾದ್ ಯಾವುದೇ ಭಯೋತ್ಪಾದನಾ ವಿರೋಧಿ ನ್ಯಾಯಾಲಯವನ್ನು ಹೊಂದಿರಲಿಲ್ಲ. ಎಲ್ಲಾ ಭಯೋತ್ಪಾದನಾ ಪ್ರಕರಣಗಳನ್ನು ರಾವಲ್ಪಿಂಡಿಯ ನ್ಯಾಯಾಲಯದಲ್ಲೇ ವಿಚಾರಣೆಗೆ ಒಳಪಡಿಸಲಾಗುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್ (ಪಿಟಿಐ): </strong>ಮುಂಬೈ ದಾಳಿಯಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಲಷ್ಕರ್-ಎ-ತೈಯ್ಯಬಾದ ಕಮಾಂಡರ್ ಝಾಕಿ-ಉರ್- ರೆಹಮಾನ್ ಲಖ್ವಿ ಸೇರಿದಂತೆ ಏಳು ಆರೋಪಿಗಳನ್ನು ರಾವಲ್ಪಿಂಡಿ ನ್ಯಾಯಾಲಯದಿಂದ ಇಲ್ಲಿನ ಹೊಸ ಭಯೋತ್ಪಾದನಾ ನಿಗ್ರಹ ನ್ಯಾಯಾಲಯಕ್ಕೆ ಸ್ಥಳಾಂತರಿಸಲಾಗಿದೆ.<br /> <br /> ಇಸ್ಲಾಮಾಬಾದ್ ನ್ಯಾಯಾಲಯದ ನ್ಯಾಯಮೂರ್ತಿ ಕೌಸರ್ ಅಬ್ಬಾಸ್ ಜೈದಿ ಇರುವ ಭಯೋತ್ಪಾದನಾ ವಿರೋಧಿ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾಯಿಸಬೇಕೆಂದು ರಾವಲ್ಪಿಂಡಿಯ ನ್ಯಾಯಮೂರ್ತಿ ಚೌಧರಿ ಹಬೀಬ್-ಉರ್-ರೆಹಮಾನ್ ಅವರು ಸರ್ಕಾರಿ ವಕೀಲರಿಂದ ಅರ್ಜಿ ಪಡೆದ ನಂತರ ಈ ಸಂಬಂಧ ಆದೇಶ ಹೊರಡಿಸಿದರು.<br /> <br /> ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಇತ್ತೀಚೆಗೆ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ವಿರುದ್ಧದ ಪ್ರಕರಣದ ವಿಚಾರಣೆಗಾಗಿ ಜೈದಿಯವರ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಅಲ್ಲಿಯವರೆಗೂ ಇಸ್ಲಾಮಾಬಾದ್ ಯಾವುದೇ ಭಯೋತ್ಪಾದನಾ ವಿರೋಧಿ ನ್ಯಾಯಾಲಯವನ್ನು ಹೊಂದಿರಲಿಲ್ಲ. ಎಲ್ಲಾ ಭಯೋತ್ಪಾದನಾ ಪ್ರಕರಣಗಳನ್ನು ರಾವಲ್ಪಿಂಡಿಯ ನ್ಯಾಯಾಲಯದಲ್ಲೇ ವಿಚಾರಣೆಗೆ ಒಳಪಡಿಸಲಾಗುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>