<p><strong>ಲಾಹೋರ್ (ಪಿಟಿಐ): </strong>ಕಾಶ್ಮೀರಿಗಳ ಸಾವಿಗೆ ಗೃಹ ಸಚಿವ ರಾಜನಾಥ್ ಸಿಂಗ್ ಕಾರಣ ಎಂದು ಆರೋಪಿಸಿರುವ ನಿಷೇಧಿತ ಜಮಾತ್ ಉದ್–ದವಾ (ಜೆಯುಡಿ) ಸಂಘಟನೆ ಮುಖ್ಯಸ್ಥ , ಮುಂಬೈ ದಾಳಿಯ ಸಂಚುಕೋರ ಹಫೀಜ್ ಸಯೀದ್ ಪಾಕ್ಗೆ ರಾಜನಾಥ್ ಭೇಟಿ ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.</p>.<p>ಇಸ್ಲಾಮಾಬಾದ್ನಲ್ಲಿ ಆಗಸ್ಟ್ 4ರಂದು ನಡೆಯಲಿರುವ ಸಾರ್ಕ್ ರಾಷ್ಟ್ರಗಳ ಗೃಹಸಚಿವರ 7ನೇ ಸಮ್ಮೇಳನದಲ್ಲಿ ರಾಜನಾಥ್ ಸಿಂಗ್ ಅವರು ಭಾಗವಹಿಸಲಿದ್ದಾರೆ.<br /> <br /> ಅಮಾಯಕ ಕಾಶ್ಮೀರಿಗಳ ಸಾವಿಗೆ ಕಾರಣವಾದ ರಾಜನಾಥ್ ಅವರನ್ನು ಸಮಾವೇಶಕ್ಕೆ ಸ್ವಾಗತಿಸುವ ಮೂಲಕ ಪಾಕಿಸ್ತಾನ ಸರ್ಕಾರ ಕಾಶ್ಮೀರ ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ಅವಮಾನ ಮಾಡುತ್ತಿದೆ ಎಂದು ಹಫೀಜ್ ಆರೋಪಿಸಿದ್ದಾರೆ. <br /> <br /> ಆಗಸ್ಟ್ 3 ರಂದು ರಾಜನಾಥ್ ಸಿಂಗ್ ಅವರು ಇಸ್ಲಾಮಾಬಾದ್ಗೆ ಬಂದರೆ ಜೆಯುಡಿ ದೇಶದಾದ್ಯಂತ ಪ್ರತಿಭಟನೆ ನಡೆಸಲಿದೆ. ಕರಾಚಿ, ಪೇಶಾವರ, ಮುಲ್ತಾನ್, ಫೈಸಲಾಬಾದ್, ಮುಜಾಫರಾಬಾದ್ ಸೇರಿದಂತೆ ಇನ್ನಿತರ ನಗರಗಳಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಾಹೋರ್ (ಪಿಟಿಐ): </strong>ಕಾಶ್ಮೀರಿಗಳ ಸಾವಿಗೆ ಗೃಹ ಸಚಿವ ರಾಜನಾಥ್ ಸಿಂಗ್ ಕಾರಣ ಎಂದು ಆರೋಪಿಸಿರುವ ನಿಷೇಧಿತ ಜಮಾತ್ ಉದ್–ದವಾ (ಜೆಯುಡಿ) ಸಂಘಟನೆ ಮುಖ್ಯಸ್ಥ , ಮುಂಬೈ ದಾಳಿಯ ಸಂಚುಕೋರ ಹಫೀಜ್ ಸಯೀದ್ ಪಾಕ್ಗೆ ರಾಜನಾಥ್ ಭೇಟಿ ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.</p>.<p>ಇಸ್ಲಾಮಾಬಾದ್ನಲ್ಲಿ ಆಗಸ್ಟ್ 4ರಂದು ನಡೆಯಲಿರುವ ಸಾರ್ಕ್ ರಾಷ್ಟ್ರಗಳ ಗೃಹಸಚಿವರ 7ನೇ ಸಮ್ಮೇಳನದಲ್ಲಿ ರಾಜನಾಥ್ ಸಿಂಗ್ ಅವರು ಭಾಗವಹಿಸಲಿದ್ದಾರೆ.<br /> <br /> ಅಮಾಯಕ ಕಾಶ್ಮೀರಿಗಳ ಸಾವಿಗೆ ಕಾರಣವಾದ ರಾಜನಾಥ್ ಅವರನ್ನು ಸಮಾವೇಶಕ್ಕೆ ಸ್ವಾಗತಿಸುವ ಮೂಲಕ ಪಾಕಿಸ್ತಾನ ಸರ್ಕಾರ ಕಾಶ್ಮೀರ ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ಅವಮಾನ ಮಾಡುತ್ತಿದೆ ಎಂದು ಹಫೀಜ್ ಆರೋಪಿಸಿದ್ದಾರೆ. <br /> <br /> ಆಗಸ್ಟ್ 3 ರಂದು ರಾಜನಾಥ್ ಸಿಂಗ್ ಅವರು ಇಸ್ಲಾಮಾಬಾದ್ಗೆ ಬಂದರೆ ಜೆಯುಡಿ ದೇಶದಾದ್ಯಂತ ಪ್ರತಿಭಟನೆ ನಡೆಸಲಿದೆ. ಕರಾಚಿ, ಪೇಶಾವರ, ಮುಲ್ತಾನ್, ಫೈಸಲಾಬಾದ್, ಮುಜಾಫರಾಬಾದ್ ಸೇರಿದಂತೆ ಇನ್ನಿತರ ನಗರಗಳಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>