<p><strong>ಬೀಜಿಂಗ್ (ಪಿಟಿಐ):</strong> ಕರ್ನಾಟಕದ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ರಾಜಕೀಯ ಪ್ರೇರಿತರಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ಮೊಕದ್ದಮೆ ದಾಖಲು ಮಾಡಲು ಅನುಮತಿ ನೀಡಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಶನಿವಾರ ಇಲ್ಲಿ ಆಪಾದಿಸಿದರು.‘ಮುಖ್ಯಮಂತ್ರಿಯವರು ನಿವೇಶನಗಳ ಹಂಚಿಕೆಯಲ್ಲಿ ಯಾವುದೇ ಅಕ್ರಮ ನಡೆಸಿಲ್ಲ’ ಎಂದರು.<br /> <br /> “ಕಾನೂನು ಪ್ರಕಾರ ಭೂಮಿಯ ‘ಡಿನೋಟಿಫಿಕೇಷನ್’ ಆದೇಶ ಹೊರಡಿಸುವುದು, ಮುಖ್ಯಮಂತ್ರಿಯವರ ವಿಶೇಷ ಅಧಿಕಾರವಾಗಿದ್ದು, ಹಿಂದಿನ ಮುಖ್ಯಮಂತ್ರಿಗಳು ಕೂಡಾ ಆ ರೀತಿ ಮಾಡಿದ್ದಾರೆ. ಇದರಲ್ಲಿ ತಪ್ಪೇನೂ ಇಲ್ಲ. <br /> <br /> ಯಡಿಯೂರಪ್ಪನವರಿಗಿಂತ ಮುಂಚೆ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿ, ಧರ್ಮಸಿಂಗ್, ಎಸ್.ಎಂ. ಕೃಷ್ಣ ಅವರೂ ಅನೇಕ ಸಲ ಈ ಅಧಿಕಾರವನ್ನು ಬಳಸಿದ್ದಾರೆ ಎಂದ ಅವರು, ‘ಪುತ್ರನಿಗೆ ಅನುಕೂಲ ಕಲ್ಪಿಸಲು ಯಡಿಯೂರಪ್ಪನವರು ‘ಡಿನೋಟಿಫಿಕೇಷನ್’ ಮಾಡಿರುವುದು ಮಾತ್ರ ಅನೈತಿಕ ಮತ್ತು ಯೋಗ್ಯವಲ್ಲ. ಇದು ಕಾನೂನಿನಡಿ ಸರಿ ಎನಿಸಿದರೂ, ನೈತಿಕತೆಯ ಆಧಾರದಲ್ಲಿ ಸರಿಯಲ್ಲ ಎಂಬುದು ಬಿಜೆಪಿ ಮತ್ತು ತಮ್ಮ ವೈಯಕ್ತಿಕ ನಿಲುವು ಸಹ ಆಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್ (ಪಿಟಿಐ):</strong> ಕರ್ನಾಟಕದ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ರಾಜಕೀಯ ಪ್ರೇರಿತರಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ಮೊಕದ್ದಮೆ ದಾಖಲು ಮಾಡಲು ಅನುಮತಿ ನೀಡಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಶನಿವಾರ ಇಲ್ಲಿ ಆಪಾದಿಸಿದರು.‘ಮುಖ್ಯಮಂತ್ರಿಯವರು ನಿವೇಶನಗಳ ಹಂಚಿಕೆಯಲ್ಲಿ ಯಾವುದೇ ಅಕ್ರಮ ನಡೆಸಿಲ್ಲ’ ಎಂದರು.<br /> <br /> “ಕಾನೂನು ಪ್ರಕಾರ ಭೂಮಿಯ ‘ಡಿನೋಟಿಫಿಕೇಷನ್’ ಆದೇಶ ಹೊರಡಿಸುವುದು, ಮುಖ್ಯಮಂತ್ರಿಯವರ ವಿಶೇಷ ಅಧಿಕಾರವಾಗಿದ್ದು, ಹಿಂದಿನ ಮುಖ್ಯಮಂತ್ರಿಗಳು ಕೂಡಾ ಆ ರೀತಿ ಮಾಡಿದ್ದಾರೆ. ಇದರಲ್ಲಿ ತಪ್ಪೇನೂ ಇಲ್ಲ. <br /> <br /> ಯಡಿಯೂರಪ್ಪನವರಿಗಿಂತ ಮುಂಚೆ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿ, ಧರ್ಮಸಿಂಗ್, ಎಸ್.ಎಂ. ಕೃಷ್ಣ ಅವರೂ ಅನೇಕ ಸಲ ಈ ಅಧಿಕಾರವನ್ನು ಬಳಸಿದ್ದಾರೆ ಎಂದ ಅವರು, ‘ಪುತ್ರನಿಗೆ ಅನುಕೂಲ ಕಲ್ಪಿಸಲು ಯಡಿಯೂರಪ್ಪನವರು ‘ಡಿನೋಟಿಫಿಕೇಷನ್’ ಮಾಡಿರುವುದು ಮಾತ್ರ ಅನೈತಿಕ ಮತ್ತು ಯೋಗ್ಯವಲ್ಲ. ಇದು ಕಾನೂನಿನಡಿ ಸರಿ ಎನಿಸಿದರೂ, ನೈತಿಕತೆಯ ಆಧಾರದಲ್ಲಿ ಸರಿಯಲ್ಲ ಎಂಬುದು ಬಿಜೆಪಿ ಮತ್ತು ತಮ್ಮ ವೈಯಕ್ತಿಕ ನಿಲುವು ಸಹ ಆಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>