ಕೊಲಂಬೊ (ಪಿಟಿಐ): ಶ್ರೀಲಂಕಾದಲ್ಲಿ ಸುರಿದ ಭಾರಿ ಮಳೆಗೆ ಭೀಕರ ಭೂಕುಸಿತ ಉಂಟಾಗಿದ್ದು, ಸುಮಾರು 200 ಜನರು ಸಜೀವ ಸಮಾಧಿಯಾಗಿದ್ದಾರೆ. ಈ ತಾಣದಲ್ಲಿ ಭಾರತ ಮೂಲದ ಕಾರ್ಮಿಕರು ಪ್ರಧಾನವಾಗಿ ವಾಸಿಸುತ್ತಿದ್ದರು ಎನ್ನಲಾಗಿದ್ದು, ಸೇನೆ ಸೇರಿದಂತೆ ವಿವಿಧ ಭದ್ರತಾ ಪಡೆಗಳು ಗುರುವಾರ ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ.