<p><strong> ಇಸ್ಲಾಮಾಬಾದ್/ದುಬೈ (ಪಿಟಿಐ): </strong> ವಿಶ್ವದ ವಿವಿಧೆಡೆ ನೆಲೆಸಿರುವ ಭಾರತೀಯರು ಗುರುವಾರ ದೇಶದ 63ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು.<br /> <br /> ಪಾಕಿಸ್ತಾನದಲ್ಲಿರುವ ಭಾರತೀಯ ಹೈ ಕಮಿಷನರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೈ ಕಮಿಷನರ್ ಶರತ್ ಸಭರವಾಲ್ ತ್ರಿವರ್ಣ ಧ್ವಜ ಹಾರಿಸಿ ಚಾಲನೆ ನೀಡಿದರು. ಗಣರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಬುಧವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣವನ್ನು ಶರತ್ ವಾಚಿಸಿದರು. <br /> <br /> ಇಸ್ಲಾಮಾಬಾದ್ ಕೇಂದ್ರ ಭಾಗದಲ್ಲಿರುವ ಈ ಕಚೇರಿಯಲ್ಲಿ ಬಿಗಿ ಭದ್ರತೆಯಲ್ಲಿಯೇ ಕಾರ್ಯಕ್ರಮ ನಡೆಯಿತು. ಕಚೇರಿಯ ಸಿಬ್ಬಂದಿ ಮಕ್ಕಳು ದೇಶಭಕ್ತಿ ಗೀತೆಗಳನ್ನು ಹಾಡಿದರು.<br /> <br /> ಇದರ ಜೊತೆಗೆ ಇಸ್ಲಾಮಾಬಾದ್ನಲ್ಲಿ ವಿವಿಧ ಸಾಂಪ್ರದಾಯಿಕ ಕಾರ್ಯಕ್ರಮಗಳೂ ಜರುಗಿದವು. ಲಾಹೋರ್ನಲ್ಲಿ ಜ.27 ಮತ್ತು ಕರಾಚಿಯಲ್ಲಿ ಜ. 29 ಭಾರತದ ಹೈ ಕಮಿಷನರ್ ಅವರು ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲಿದ್ದಾರೆ.<br /> <br /> ಪ್ರಸಿದ್ಧ ವಾಣಿಜ್ಯೋದ್ಯಮಿಗಳು, ರಾಜಕಾರಣಿಗಳು, ನಾಗರಿಕ ಸಂಘಟನೆಗಳ ಕಾರ್ಯಕರ್ತರು, ಪತ್ರಕರ್ತರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಕಳೆದ ವರ್ಷ ಹೈ ಕಮಿಷನರ್ ಅವರು 15 ವರ್ಷಗಳ ಬಳಿಕ ಮೊದಲ ಬಾರಿಗೆ ಕರಾಚಿಯಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ್ದರು.<br /> <br /> ಸಿಂಗಪುರದಲ್ಲಿ ಭಾರತದ ಹೈ ಕಮಿಷನರ್ ಟಿ.ಸಿ.ಎ. ರಾಘವನ್ ನೇತೃತ್ವದಲ್ಲಿ ಗಣರಾಜ್ಯೋತ್ಸವ ಜರುಗಿತು. ರಾಘವನ್ ಅವರಿಂದ ಜರುಗಿದ ಧ್ವಜಾರೋಹಣದಲ್ಲಿ ಸುಮಾರು ಐದು ನೂರಕ್ಕೂ ಹೆಚ್ಚು ಭಾರತೀಯರು ಪಾಲ್ಗೊಂಡಿದ್ದರು. ಬೆಳಿಗ್ಗೆ ಜರುಗಿದ ಕಾರ್ಯಕ್ರಮದಲ್ಲಿ ಭಾರತೀಯ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಮತ್ತು ನೃತ್ಯ ಜರುಗಿತು.<br /> <br /> ಸೌದಿ ಅರೇಬಿಯಾ ರಾಜಧಾನಿ ರಿಯಾದ್ನಲ್ಲಿ ಭಾರತೀಯರು ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಗಣರಾಜ್ಯೊತ್ಸವವನ್ನು ಆಚರಿಸಿದರು.<br /> <br /> ತಮಿಳುನಾಡು ತೌಹೀದ್ ಜಮಾತ್ (ಟಿಎನ್ಟಿಜೆ) ಎಂಬ ಸಾಮಾಜಿಕ ಸಂಘಟನೆಯಿಂದ ಈ ಶಿಬಿರ ಆಯೋಜಿಸಿತ್ತು. ದಾನಿಗಳಿಂದ ಸಂಗ್ರಹವಾದ 111 ಲೀಟರ್ ರಕ್ತವನ್ನು ಕಿಂಗ್ ಫಹಾಡ್ ಮೆಡಿಕಲ್ ಸಿಟಿ (ಕೆಎಫ್ಎಂಸಿ) ಗೆ ನೀಡಲಾಯಿತು. ಖಾಸಗಿ ಕಂಪೆನಿಯಲ್ಲಿ ಎಂಜಿನಿಯರ್ ಆಗಿರುವ ಫೇಸಲ್ ಮೊಹಮ್ಮದ್ ಈ ಸಂಘಟನೆಯ ಅಧ್ಯಕ್ಷರಾಗಿದ್ದು, ಈ ವರ್ಷ ಗಣರಾಜ್ಯೋತ್ಸವನ್ನು ಅರ್ಥಪೂರ್ಣವಾಗಿ ಆಚರಿಸಲು ಈ ಶಿಬಿರ ಏರ್ಪಡಿಸಲಾಗಿತ್ತು ಎಂದು ಹೇಳಿದರು.<br /> <br /> ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಈಜಿಪ್ಟ್ ನಾಗರಿಕರೂ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಶೇಖ್ ಖಲೀಫ್ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong> ಇಸ್ಲಾಮಾಬಾದ್/ದುಬೈ (ಪಿಟಿಐ): </strong> ವಿಶ್ವದ ವಿವಿಧೆಡೆ ನೆಲೆಸಿರುವ ಭಾರತೀಯರು ಗುರುವಾರ ದೇಶದ 63ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು.<br /> <br /> ಪಾಕಿಸ್ತಾನದಲ್ಲಿರುವ ಭಾರತೀಯ ಹೈ ಕಮಿಷನರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೈ ಕಮಿಷನರ್ ಶರತ್ ಸಭರವಾಲ್ ತ್ರಿವರ್ಣ ಧ್ವಜ ಹಾರಿಸಿ ಚಾಲನೆ ನೀಡಿದರು. ಗಣರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಬುಧವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣವನ್ನು ಶರತ್ ವಾಚಿಸಿದರು. <br /> <br /> ಇಸ್ಲಾಮಾಬಾದ್ ಕೇಂದ್ರ ಭಾಗದಲ್ಲಿರುವ ಈ ಕಚೇರಿಯಲ್ಲಿ ಬಿಗಿ ಭದ್ರತೆಯಲ್ಲಿಯೇ ಕಾರ್ಯಕ್ರಮ ನಡೆಯಿತು. ಕಚೇರಿಯ ಸಿಬ್ಬಂದಿ ಮಕ್ಕಳು ದೇಶಭಕ್ತಿ ಗೀತೆಗಳನ್ನು ಹಾಡಿದರು.<br /> <br /> ಇದರ ಜೊತೆಗೆ ಇಸ್ಲಾಮಾಬಾದ್ನಲ್ಲಿ ವಿವಿಧ ಸಾಂಪ್ರದಾಯಿಕ ಕಾರ್ಯಕ್ರಮಗಳೂ ಜರುಗಿದವು. ಲಾಹೋರ್ನಲ್ಲಿ ಜ.27 ಮತ್ತು ಕರಾಚಿಯಲ್ಲಿ ಜ. 29 ಭಾರತದ ಹೈ ಕಮಿಷನರ್ ಅವರು ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲಿದ್ದಾರೆ.<br /> <br /> ಪ್ರಸಿದ್ಧ ವಾಣಿಜ್ಯೋದ್ಯಮಿಗಳು, ರಾಜಕಾರಣಿಗಳು, ನಾಗರಿಕ ಸಂಘಟನೆಗಳ ಕಾರ್ಯಕರ್ತರು, ಪತ್ರಕರ್ತರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಕಳೆದ ವರ್ಷ ಹೈ ಕಮಿಷನರ್ ಅವರು 15 ವರ್ಷಗಳ ಬಳಿಕ ಮೊದಲ ಬಾರಿಗೆ ಕರಾಚಿಯಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ್ದರು.<br /> <br /> ಸಿಂಗಪುರದಲ್ಲಿ ಭಾರತದ ಹೈ ಕಮಿಷನರ್ ಟಿ.ಸಿ.ಎ. ರಾಘವನ್ ನೇತೃತ್ವದಲ್ಲಿ ಗಣರಾಜ್ಯೋತ್ಸವ ಜರುಗಿತು. ರಾಘವನ್ ಅವರಿಂದ ಜರುಗಿದ ಧ್ವಜಾರೋಹಣದಲ್ಲಿ ಸುಮಾರು ಐದು ನೂರಕ್ಕೂ ಹೆಚ್ಚು ಭಾರತೀಯರು ಪಾಲ್ಗೊಂಡಿದ್ದರು. ಬೆಳಿಗ್ಗೆ ಜರುಗಿದ ಕಾರ್ಯಕ್ರಮದಲ್ಲಿ ಭಾರತೀಯ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಮತ್ತು ನೃತ್ಯ ಜರುಗಿತು.<br /> <br /> ಸೌದಿ ಅರೇಬಿಯಾ ರಾಜಧಾನಿ ರಿಯಾದ್ನಲ್ಲಿ ಭಾರತೀಯರು ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಗಣರಾಜ್ಯೊತ್ಸವವನ್ನು ಆಚರಿಸಿದರು.<br /> <br /> ತಮಿಳುನಾಡು ತೌಹೀದ್ ಜಮಾತ್ (ಟಿಎನ್ಟಿಜೆ) ಎಂಬ ಸಾಮಾಜಿಕ ಸಂಘಟನೆಯಿಂದ ಈ ಶಿಬಿರ ಆಯೋಜಿಸಿತ್ತು. ದಾನಿಗಳಿಂದ ಸಂಗ್ರಹವಾದ 111 ಲೀಟರ್ ರಕ್ತವನ್ನು ಕಿಂಗ್ ಫಹಾಡ್ ಮೆಡಿಕಲ್ ಸಿಟಿ (ಕೆಎಫ್ಎಂಸಿ) ಗೆ ನೀಡಲಾಯಿತು. ಖಾಸಗಿ ಕಂಪೆನಿಯಲ್ಲಿ ಎಂಜಿನಿಯರ್ ಆಗಿರುವ ಫೇಸಲ್ ಮೊಹಮ್ಮದ್ ಈ ಸಂಘಟನೆಯ ಅಧ್ಯಕ್ಷರಾಗಿದ್ದು, ಈ ವರ್ಷ ಗಣರಾಜ್ಯೋತ್ಸವನ್ನು ಅರ್ಥಪೂರ್ಣವಾಗಿ ಆಚರಿಸಲು ಈ ಶಿಬಿರ ಏರ್ಪಡಿಸಲಾಗಿತ್ತು ಎಂದು ಹೇಳಿದರು.<br /> <br /> ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಈಜಿಪ್ಟ್ ನಾಗರಿಕರೂ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಶೇಖ್ ಖಲೀಫ್ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>