<p><strong>ಕಲಬುರ್ಗಿ:</strong> ‘ಕಾಲ್ಪನಿಕ ವೇತನ ಸಮಸ್ಯೆ ಪರಿಹರಿಸಲಾಗುವುದು. ಎನ್ಪಿಎಸ್ ರದ್ದುಪಡಿಸಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವ ಸಂಬಂಧ ಈಗ ಏನನ್ನೂ ಹೇಳುವುದಿಲ್ಲ. ಮುಂದಿನ ಒಂದು ವರ್ಷದ ಒಳಗಾಗಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.</p>.<p>ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಶಿಕ್ಷಕರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಶಿಕ್ಷಕರ ವರ್ಗಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಶಿಕ್ಷಕರ ವರ್ಗಾವಣೆಯಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗೊತ್ತಿಗೆ. ನಾನು ಶಿಕ್ಷಣ ಸಚಿವನಾದರೆ ವರ್ಗಾವಣೆ ಸಮಸ್ಯೆಯನ್ನು ಪರಿಹರಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>‘ಪ್ರೌಢಶಿಕ್ಷಣದಲ್ಲಿ ದೈಹಿಕ ಶಿಕ್ಷಣ ಪಠ್ಯವನ್ನು ಸೇರಿಸಬೇಕಾಗಿತ್ತು. ಈ ಹಿಂದೆ ಇದ್ದ ಶಿಕ್ಷಣ ಸಚಿವರು ಆ ನಿಟ್ಟಿನಲ್ಲಿ ಏನೂ ಮಾಡಿಲ್ಲ’ ಎಂದರು.</p>.<p>‘<strong>ನೆಮ್ಮದಿಯ ವಾತಾವರಣ’</strong></p>.<p>‘ಶಿಕ್ಷಕರು ನೆಮ್ಮದಿಯಿಂದ ಬೋಧನೆ ಮಾಡುವ ವಾತಾವರಣ ನಿರ್ಮಾಣ ಆಗಬೇಕು. ಆ ನಿಟ್ಟಿನಲ್ಲಿ ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸಿ, ಶಿಕ್ಷಕರ ಸಮಸ್ಯೆ ಪರಿಹರಿಸಲಾಗುವುದು’ ಎಂದು ಬಸವರಾಜ ಹೊರಟ್ಟಿ ಹೇಳಿದರು.</p>.<p>‘ಶಿಕ್ಷಕರು ವರ್ಗಾವಣೆ, ವೇತನ ಇನ್ನಿತರ ವಿಷಯಗಳ ಬಗ್ಗೆ ಹೆಚ್ಚು ಗಮನ ಹರಿಸದೆ ಗುಣಮಟ್ಟದ ಬೋಧನೆಗೆ ಹೆಚ್ಚು ಒತ್ತು ನೀಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ‘ಕಾಲ್ಪನಿಕ ವೇತನ ಸಮಸ್ಯೆ ಪರಿಹರಿಸಲಾಗುವುದು. ಎನ್ಪಿಎಸ್ ರದ್ದುಪಡಿಸಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವ ಸಂಬಂಧ ಈಗ ಏನನ್ನೂ ಹೇಳುವುದಿಲ್ಲ. ಮುಂದಿನ ಒಂದು ವರ್ಷದ ಒಳಗಾಗಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.</p>.<p>ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಶಿಕ್ಷಕರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಶಿಕ್ಷಕರ ವರ್ಗಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಶಿಕ್ಷಕರ ವರ್ಗಾವಣೆಯಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗೊತ್ತಿಗೆ. ನಾನು ಶಿಕ್ಷಣ ಸಚಿವನಾದರೆ ವರ್ಗಾವಣೆ ಸಮಸ್ಯೆಯನ್ನು ಪರಿಹರಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>‘ಪ್ರೌಢಶಿಕ್ಷಣದಲ್ಲಿ ದೈಹಿಕ ಶಿಕ್ಷಣ ಪಠ್ಯವನ್ನು ಸೇರಿಸಬೇಕಾಗಿತ್ತು. ಈ ಹಿಂದೆ ಇದ್ದ ಶಿಕ್ಷಣ ಸಚಿವರು ಆ ನಿಟ್ಟಿನಲ್ಲಿ ಏನೂ ಮಾಡಿಲ್ಲ’ ಎಂದರು.</p>.<p>‘<strong>ನೆಮ್ಮದಿಯ ವಾತಾವರಣ’</strong></p>.<p>‘ಶಿಕ್ಷಕರು ನೆಮ್ಮದಿಯಿಂದ ಬೋಧನೆ ಮಾಡುವ ವಾತಾವರಣ ನಿರ್ಮಾಣ ಆಗಬೇಕು. ಆ ನಿಟ್ಟಿನಲ್ಲಿ ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸಿ, ಶಿಕ್ಷಕರ ಸಮಸ್ಯೆ ಪರಿಹರಿಸಲಾಗುವುದು’ ಎಂದು ಬಸವರಾಜ ಹೊರಟ್ಟಿ ಹೇಳಿದರು.</p>.<p>‘ಶಿಕ್ಷಕರು ವರ್ಗಾವಣೆ, ವೇತನ ಇನ್ನಿತರ ವಿಷಯಗಳ ಬಗ್ಗೆ ಹೆಚ್ಚು ಗಮನ ಹರಿಸದೆ ಗುಣಮಟ್ಟದ ಬೋಧನೆಗೆ ಹೆಚ್ಚು ಒತ್ತು ನೀಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>