ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಬಂದು ಹೋಗಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯವಳಿಯನ್ನು ವಶಕ್ಕೆ ಪಡೆದರು. ಜೊತೆಗೆ ಅವರು ತಂಗಿದ್ದ ಕೊಠಡಿಗಳಲ್ಲಿ ಪರಿಶೀಲನೆ ನಡೆಸಿದರು. ಐಟಿ ಅಧಿಕಾರಿಗಳು ಒಂದು ತಿಂಗಳಿನಿಂದ ಮಂಡ್ಯದಲ್ಲೇ ಇದ್ದು ಜೆಡಿಎಸ್–ಕಾಂಗ್ರೆಸ್ ಮುಖಂಡರ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.