ನವದೆಹಲಿ, ಅ. 6– ಮಾಜಿ ರಾಜರನ್ನು ಅಮಾನ್ಯಗೊಳಿಸಿ ರಾಷ್ಟ್ರಪತಿ ಹೊರಡಿಸಿರುವ ಆಜ್ಞೆಯ ಕ್ರಮಬದ್ಧತೆಯನ್ನು ಪ್ರಶ್ನಿಸಿ ಎಂಟು ಜನ ಮಾಜಿ ಅರಸರು ಸಲ್ಲಿಸಿರುವ ರಿಟ್ ಅರ್ಜಿಗಳ ವಿಚಾರಣೆಗಾಗಿ ಭಾರತದ ಶ್ರೇಷ್ಠ ನ್ಯಾಯಾಧೀಶರು ಸುಪ್ರೀಂ ಕೋರ್ಟಿನ ಹನ್ನೊಂದು ಜನ ನ್ಯಾಯಾಧೀಶರನ್ನೊಳಗೊಂಡ ಪೂರ್ಣ ಪೀಠವೊಂದನ್ನು ರಚಿಸಿದ್ದಾರೆ.