<h2>ಕೃಷಿ ಮಾರುಕಟ್ಟೆ ಶುಲ್ಕ ಸಂಗ್ರಹ ಖಾಸಗಿಯವರಿಗೆ</h2>.<p><strong>ಹುಬ್ಬಳ್ಳಿ, ಫೆ. 21–</strong> ರಾಜ್ಯದ ಎಲ್ಲ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಶುಲ್ಕ ಸಂಗ್ರಹ (ಸೆಸ್ ಕಲೆಕ್ಷನ್) ಹೊಣೆಯನ್ನು ಖಾಸಗಿಯವರಿಗೆ ವಹಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಪರಿ<br>ಶೀಲಿಸುತ್ತಿದೆ ಎಂದು ಕೃಷಿ ಮಾರುಕಟ್ಟೆ ರಾಜ್ಯ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.</p>.<p>ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಶೇಕಡ 50ರಷ್ಟು ಸೋರಿಕೆ ಉಂಟಾಗಿರುವುದರಿಂದ ‘ಸೆಸ್ ಕಲೆಕ್ಷನ್’ ಜವಾಬ್ದಾರಿಯನ್ನು ಖಾಸಗಿಯವರಿಗೆ ವಹಿಸಿಕೊಡುವ ಸಂಬಂಧ ತಜ್ಞರೊಂದಿಗೆ ಸಮಾಲೋಚಿಸಿ ನಿರ್ಧರಿಸಲಾಗುವುದು ಎಂದರು.</p>.<p>ದಲ್ಲಾಳಿಗಳು ಮತ್ತು ಅಧಿಕಾರಿಗಳು ಶಾಮೀಲಾಗಿ ಸರ್ಕಾರದ ಬೊಕ್ಕಸಕ್ಕೆ ಬರಬೇಕಾಗಿರುವ ಮಾರುಕಟ್ಟೆ ಶುಲ್ಕದ ಮೊತ್ತದಲ್ಲಿ ಭಾರೀ ಪ್ರಮಾಣದ ನಷ್ಟ ಉಂಟು ಮಾಡಿದ್ದಾರೆ. ಈ ವರ್ಷ ಕೇವಲ 70 ಕೋಟಿ ಸೆಸ್ ಹಣ ಸಂಗ್ರಹವಾಗಿದೆ ಎಂದ ಅವರು, ಖಾಸಗಿಯವರಿಗೆ ಈ ಜವಾಬ್ದಾರಿ ಹೊರಿಸುವುದರಿಂದ ಎರಡು ಪಟ್ಟು ‘ಸೆಸ್’ ಸಂಗ್ರಹವಾಗುವ ಆಶಯ ವ್ಯಕ್ತಪಡಿಸಿದರು.</p>.<h2>‘ರೈತ ಬಜಾರ್’ ಮಾರ್ಚ್ನಿಂದ ಆರಂಭ</h2>.<p><strong>ಹುಬ್ಬಳ್ಳಿ, ಫೆ. 21–</strong> ರೈತರು ಬೆಳೆದ ತರಕಾರಿ, ಹಣ್ಣು, ಹಂಪಲುಗಳನ್ನು ರೈತರೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ‘ರೈತ ಬಜಾರ್’ ಅನ್ನು ಹುಬ್ಬಳ್ಳಿಯಲ್ಲಿ ಮಾರ್ಚ್ ತಿಂಗಳಿಂದ ಆರಂಭಿಸಲಾಗುವುದು ಎಂದು ರಾಜ್ಯ ಕೃಷಿ ಮಾರುಕಟ್ಟೆ ಸಚಿವ ಆರ್.ಬಿ. ತಿಮ್ಮಾಪುರ ಇಂದಿಲ್ಲಿ ಪ್ರಕಟಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೈತರು ತಾವು ಬೆಳೆದ ತರಕಾರಿ, ಹಣ್ಣುಗಳನ್ನು ಹೊಲಗಳಿಂದ ಮಾರುಕಟ್ಟೆಗೆ ತಂದು ಗ್ರಾಹಕರಿಗೆ ಮುಟ್ಟಿಸುವಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ‘ರೈತ ಬಜಾರ್’ಗಳನ್ನು ಆರಂಭಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2>ಕೃಷಿ ಮಾರುಕಟ್ಟೆ ಶುಲ್ಕ ಸಂಗ್ರಹ ಖಾಸಗಿಯವರಿಗೆ</h2>.<p><strong>ಹುಬ್ಬಳ್ಳಿ, ಫೆ. 21–</strong> ರಾಜ್ಯದ ಎಲ್ಲ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಶುಲ್ಕ ಸಂಗ್ರಹ (ಸೆಸ್ ಕಲೆಕ್ಷನ್) ಹೊಣೆಯನ್ನು ಖಾಸಗಿಯವರಿಗೆ ವಹಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಪರಿ<br>ಶೀಲಿಸುತ್ತಿದೆ ಎಂದು ಕೃಷಿ ಮಾರುಕಟ್ಟೆ ರಾಜ್ಯ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.</p>.<p>ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಶೇಕಡ 50ರಷ್ಟು ಸೋರಿಕೆ ಉಂಟಾಗಿರುವುದರಿಂದ ‘ಸೆಸ್ ಕಲೆಕ್ಷನ್’ ಜವಾಬ್ದಾರಿಯನ್ನು ಖಾಸಗಿಯವರಿಗೆ ವಹಿಸಿಕೊಡುವ ಸಂಬಂಧ ತಜ್ಞರೊಂದಿಗೆ ಸಮಾಲೋಚಿಸಿ ನಿರ್ಧರಿಸಲಾಗುವುದು ಎಂದರು.</p>.<p>ದಲ್ಲಾಳಿಗಳು ಮತ್ತು ಅಧಿಕಾರಿಗಳು ಶಾಮೀಲಾಗಿ ಸರ್ಕಾರದ ಬೊಕ್ಕಸಕ್ಕೆ ಬರಬೇಕಾಗಿರುವ ಮಾರುಕಟ್ಟೆ ಶುಲ್ಕದ ಮೊತ್ತದಲ್ಲಿ ಭಾರೀ ಪ್ರಮಾಣದ ನಷ್ಟ ಉಂಟು ಮಾಡಿದ್ದಾರೆ. ಈ ವರ್ಷ ಕೇವಲ 70 ಕೋಟಿ ಸೆಸ್ ಹಣ ಸಂಗ್ರಹವಾಗಿದೆ ಎಂದ ಅವರು, ಖಾಸಗಿಯವರಿಗೆ ಈ ಜವಾಬ್ದಾರಿ ಹೊರಿಸುವುದರಿಂದ ಎರಡು ಪಟ್ಟು ‘ಸೆಸ್’ ಸಂಗ್ರಹವಾಗುವ ಆಶಯ ವ್ಯಕ್ತಪಡಿಸಿದರು.</p>.<h2>‘ರೈತ ಬಜಾರ್’ ಮಾರ್ಚ್ನಿಂದ ಆರಂಭ</h2>.<p><strong>ಹುಬ್ಬಳ್ಳಿ, ಫೆ. 21–</strong> ರೈತರು ಬೆಳೆದ ತರಕಾರಿ, ಹಣ್ಣು, ಹಂಪಲುಗಳನ್ನು ರೈತರೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ‘ರೈತ ಬಜಾರ್’ ಅನ್ನು ಹುಬ್ಬಳ್ಳಿಯಲ್ಲಿ ಮಾರ್ಚ್ ತಿಂಗಳಿಂದ ಆರಂಭಿಸಲಾಗುವುದು ಎಂದು ರಾಜ್ಯ ಕೃಷಿ ಮಾರುಕಟ್ಟೆ ಸಚಿವ ಆರ್.ಬಿ. ತಿಮ್ಮಾಪುರ ಇಂದಿಲ್ಲಿ ಪ್ರಕಟಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೈತರು ತಾವು ಬೆಳೆದ ತರಕಾರಿ, ಹಣ್ಣುಗಳನ್ನು ಹೊಲಗಳಿಂದ ಮಾರುಕಟ್ಟೆಗೆ ತಂದು ಗ್ರಾಹಕರಿಗೆ ಮುಟ್ಟಿಸುವಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ‘ರೈತ ಬಜಾರ್’ಗಳನ್ನು ಆರಂಭಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>