ಜನರಿಗೆ ಮರಳು ಸಿಗಬೇಕು. ಅದಕ್ಕಾಗಿ ನದಿಗೇ ಇಳಿದು ಮರಳು ತೆಗೆಯುವ ನೇರ ಕಾರ್ಯಾಚರಣೆಗೆ ಇಳಿದಿದ್ದಾರೆ. ‘ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಾವಕ್ರಮ ಕೈಗೊಂಡರೂ ಅದನ್ನು ಎದುರಿಸಲು ಸಿದ್ಧ’ ಎಂದು ಸವಾಲು ಹಾಕಿದ್ದಾರೆ. ‘ಜನರ ಪರವಾಗಿ ಹೋರಾಟ ಮಾಡಿಕೊಂಡು ಬಂದ ನನಗೆ ಜೈಲು ಹೊಸದಲ್ಲ, ಮೊಕದ್ದಮೆ ಹಳೆಯದಲ್ಲ’ ಎಂದು ಡೈಲಾಗ್ ಹೊಡೆಯುತ್ತಿದ್ದಾರೆ.