<p><strong>ದಕ್ಷಿಣ ಆಫ್ರಿಕ ಅಧ್ಯಕ್ಷರಾಗಿ ಮಂಡೇಲಾ ಆಯ್ಕೆ<br />ಕೇಪ್ಟೌನ್, ಮೇ 9 (ಎಪಿ, ಪಿಟಿಐ)– ಆ</strong>ಫ್ರಿಕನ್ ನ್ಯಾಷನಲ್ ಕಾಂಗ್ರೆಸ್ನ ನಾಯಕ ಡಾ. ನೆಲ್ಸನ್ ಮಂಡೇಲಾ ಅವರು ದಕ್ಷಿಣ ಆಫ್ರಿಕದ ಮೊದಲ ಕಪ್ಪು ವರ್ಣೀಯ ಅಧ್ಯಕ್ಷರಾಗಿ ಇಂದು ಆಯ್ಕೆಯಾದರು. ದಕ್ಷಿಣ ಆಫ್ರಿಕದ ಇತಿಹಾಸದಲ್ಲಿ ಮೂರು ಶತಮಾನಗಳಿಗಿಂತಲೂ ಹೆಚ್ಚು ಕಾಲದ ಬಿಳಿಯರ ಆಧಿಪತ್ಯ ಇದರೊಂದಿಗೆ ಕೊನೆಗೊಂಡಿತು.</p>.<p>ಮಾಜಿ ಅಧ್ಯಕ್ಷ ಎಫ್.ಡಬ್ಲ್ಯೂ.ಡಿ. ಕ್ಲರ್ಕ್ ಅವರ ಸ್ಥಾನವನ್ನು ತುಂಬಲು ಮಂಡೇಲಾ ಅವರೊಬ್ಬರೇ ಅಭ್ಯರ್ಥಿಯಾಗಿದ್ದರು. ಆದ್ದರಿಂದ ಮಂಡೇಲಾ ಅವರ ಆಯ್ಕೆಯನ್ನು ಮುಖ್ಯ ನ್ಯಾಯಮೂರ್ತಿ ಮೈಕೆಲ್ ಕಾರ್ಬೆಟ್ ಅವರು ಪ್ರಕಟಿಸುತ್ತಲೇ 400 ಸದಸ್ಯ ಬಲದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಕರತಾಡನ ಮುಗಿಲು ಮುಟ್ಟಿತು.</p>.<p>ಮಂಡೇಲಾ ಹಾಗೂ ಇತರ 399 ಮಂದಿ ಅಸೆಂಬ್ಲಿಯ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.</p>.<p><strong>ದೇವನಹಳ್ಳಿಯಲ್ಲಿ ವಿಮಾನ ನಿಲ್ದಾಣ: ಕೇಂದ್ರ ನಿರ್ಧಾರ<br />ನವದೆಹಲಿ, ಮೇ 9– </strong>ಅಂತರ ರಾಷ್ಟ್ರೀಯ ಮಟ್ಟದ ಆದರೆ ದೇಶೀಯ ವಿಮಾನ ಸೌಲಭ್ಯಕ್ಕಾಗಿ ಬೆಂಗಳೂರಿನ ದೇವನಹಳ್ಳಿ ಸಮೀಪ ಸುಮಾರು 2,500 ಎಕರೆ ಪ್ರದೇಶದಲ್ಲಿ ಆಧುನಿಕ ವಿಮಾನ ನಿಲ್ದಾಣವೊಂದನ್ನು ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿರುವುದಾಗಿ ನಾಗರಿಕ ವಿಮಾನಯಾನ ಖಾತೆ ಸಚಿವ ಗುಲಾಂ ನಬಿ ಆಜಾದ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಕ್ಷಿಣ ಆಫ್ರಿಕ ಅಧ್ಯಕ್ಷರಾಗಿ ಮಂಡೇಲಾ ಆಯ್ಕೆ<br />ಕೇಪ್ಟೌನ್, ಮೇ 9 (ಎಪಿ, ಪಿಟಿಐ)– ಆ</strong>ಫ್ರಿಕನ್ ನ್ಯಾಷನಲ್ ಕಾಂಗ್ರೆಸ್ನ ನಾಯಕ ಡಾ. ನೆಲ್ಸನ್ ಮಂಡೇಲಾ ಅವರು ದಕ್ಷಿಣ ಆಫ್ರಿಕದ ಮೊದಲ ಕಪ್ಪು ವರ್ಣೀಯ ಅಧ್ಯಕ್ಷರಾಗಿ ಇಂದು ಆಯ್ಕೆಯಾದರು. ದಕ್ಷಿಣ ಆಫ್ರಿಕದ ಇತಿಹಾಸದಲ್ಲಿ ಮೂರು ಶತಮಾನಗಳಿಗಿಂತಲೂ ಹೆಚ್ಚು ಕಾಲದ ಬಿಳಿಯರ ಆಧಿಪತ್ಯ ಇದರೊಂದಿಗೆ ಕೊನೆಗೊಂಡಿತು.</p>.<p>ಮಾಜಿ ಅಧ್ಯಕ್ಷ ಎಫ್.ಡಬ್ಲ್ಯೂ.ಡಿ. ಕ್ಲರ್ಕ್ ಅವರ ಸ್ಥಾನವನ್ನು ತುಂಬಲು ಮಂಡೇಲಾ ಅವರೊಬ್ಬರೇ ಅಭ್ಯರ್ಥಿಯಾಗಿದ್ದರು. ಆದ್ದರಿಂದ ಮಂಡೇಲಾ ಅವರ ಆಯ್ಕೆಯನ್ನು ಮುಖ್ಯ ನ್ಯಾಯಮೂರ್ತಿ ಮೈಕೆಲ್ ಕಾರ್ಬೆಟ್ ಅವರು ಪ್ರಕಟಿಸುತ್ತಲೇ 400 ಸದಸ್ಯ ಬಲದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಕರತಾಡನ ಮುಗಿಲು ಮುಟ್ಟಿತು.</p>.<p>ಮಂಡೇಲಾ ಹಾಗೂ ಇತರ 399 ಮಂದಿ ಅಸೆಂಬ್ಲಿಯ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.</p>.<p><strong>ದೇವನಹಳ್ಳಿಯಲ್ಲಿ ವಿಮಾನ ನಿಲ್ದಾಣ: ಕೇಂದ್ರ ನಿರ್ಧಾರ<br />ನವದೆಹಲಿ, ಮೇ 9– </strong>ಅಂತರ ರಾಷ್ಟ್ರೀಯ ಮಟ್ಟದ ಆದರೆ ದೇಶೀಯ ವಿಮಾನ ಸೌಲಭ್ಯಕ್ಕಾಗಿ ಬೆಂಗಳೂರಿನ ದೇವನಹಳ್ಳಿ ಸಮೀಪ ಸುಮಾರು 2,500 ಎಕರೆ ಪ್ರದೇಶದಲ್ಲಿ ಆಧುನಿಕ ವಿಮಾನ ನಿಲ್ದಾಣವೊಂದನ್ನು ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿರುವುದಾಗಿ ನಾಗರಿಕ ವಿಮಾನಯಾನ ಖಾತೆ ಸಚಿವ ಗುಲಾಂ ನಬಿ ಆಜಾದ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>