ದೇವನಹಳ್ಳಿಯಲ್ಲಿ ವಿಮಾನ ನಿಲ್ದಾಣ: ಕೇಂದ್ರ ನಿರ್ಧಾರ
ನವದೆಹಲಿ, ಮೇ 9– ಅಂತರ ರಾಷ್ಟ್ರೀಯ ಮಟ್ಟದ ಆದರೆ ದೇಶೀಯ ವಿಮಾನ ಸೌಲಭ್ಯಕ್ಕಾಗಿ ಬೆಂಗಳೂರಿನ ದೇವನಹಳ್ಳಿ ಸಮೀಪ ಸುಮಾರು 2,500 ಎಕರೆ ಪ್ರದೇಶದಲ್ಲಿ ಆಧುನಿಕ ವಿಮಾನ ನಿಲ್ದಾಣವೊಂದನ್ನು ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿರುವುದಾಗಿ ನಾಗರಿಕ ವಿಮಾನಯಾನ ಖಾತೆ ಸಚಿವ ಗುಲಾಂ ನಬಿ ಆಜಾದ್ ತಿಳಿಸಿದ್ದಾರೆ.