ಬೆಂಗಳೂರು, ಡಿ.18– ‘ಗ್ಯಾಟ್’ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಕೇಂದ್ರ ಸರ್ಕಾರ ರಾಷ್ಟ್ರದ ಸಂವಿಧಾನಕ್ಕೆ ಅಪಚಾರ ಎಸಗಿದೆ. ಈ ವಿಷಯವನ್ನು ಸುಪ್ರೀಂ ಕೋರ್ಟ್ ಮುಂದಿಡುವಂತೆ ರಾಷ್ಟ್ರಪತಿ ಅವರಿಗೆ ಸಲಹೆ ಮಾಡಬೇಕೆಂದು ಕೋರಿ ರಾಜ್ಯ ರೈತ ಸಂಘವು ಸೋಮವಾರ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಲಿದೆ ಎಂದು ಅದರ ಅಧ್ಯಕ್ಷ ಪ್ರೊ. ಎಂ.ಡಿ. ನಂಜುಂಡಸ್ವಾಮಿ ತಿಳಿಸಿದರು.