ನವದೆಹಲಿ, ಜ. 27 (ಯುಎನ್ಐ)– ಕೇಂದ್ರದ ಕಾನೂನು ಖಾತೆ ರಾಜ್ಯ ಸಚಿವ ಹನ್ಸರಾಜ್ ಭಾರದ್ವಾಜ್, ಕಾಂಗೈ ಪ್ರಧಾನ ಕಾರ್ಯದರ್ಶಿ ವಿ.ಎನ್. ಗಾಡ್ಗೀಳ್, ಪ್ರಧಾನಿಯವರ ರಾಜಕೀಯ ಸಲಹೆಗಾರ ಜಿತೇಂದ್ರ ಪ್ರಸಾದ್ ಮತ್ತು ಪ್ರಧಾನ ಮಂತ್ರಿಯವರ ಕಚೇರಿಯಲ್ಲಿನ ರಾಜ್ಯ ಸಚಿವ ಭುವನೇಶ್ ಚತುರ್ವೇದಿ ಕ್ರಮವಾಗಿ ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ರಾಜಸ್ಥಾನಗಳಿಂದ ರಾಜ್ಯಸಭೆಗೆ ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.