ಕೇಂದ್ರ ನಾಯಕತ್ವ ಬದಲಾವಣೆಗೆ ಆಗ್ರಹ
ನವದೆಹಲಿ, ಮಾರ್ಚಿ 12 (ಪಿಟಿಐ)– ಮಹಾರಾಷ್ಟ್ರ ಹಾಗೂ ಗುಜರಾತಿನಲ್ಲಿ ಕಾಂಗ್ರೆಸ್ಗಾದ ಬಲವಾದ ಆಘಾತದಿಂದ ಪಕ್ಷದಲ್ಲಿ ಅಸಮಾಧಾನ ತೀವ್ರವಾಗಿದ್ದು, ಪಕ್ಷದ ಸಂಸತ್ ಸದಸ್ಯರ ಸಭೆಯಲ್ಲಿ ನಾಯಕತ್ವ ಬದಲಾವಣೆ ವಿಷಯವನ್ನು ಎತ್ತಲಾಗುವುದು ಎಂದು ಕೇಂದ್ರದ ಮಾಜಿ ಸಚಿವರೊಬ್ಬರು ತಿಳಿಸಿದ್ದಾರೆ.