ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಧವಾರ, 16–11–1994

Last Updated 15 ನವೆಂಬರ್ 2019, 20:12 IST
ಅಕ್ಷರ ಗಾತ್ರ

ದಿನೇಶ್‌ ನೇಮಕ ರದ್ದು
ಬೆಂಗಳೂರು, ನ. 15– ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳ ಪ್ರತಿಭಟನೆಯ ಪರಿಣಾಮವಾಗಿ ದಿವಂಗತ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ ಪುತ್ರ ದಿನೇಶ್ ಅವರನ್ನು ಸಮಿತಿ ಕಾರ್ಯಾಧ್ಯಕ್ಷರನ್ನಾಗಿ ಮಾಡಿದ್ದ ನೇಮಕ ರದ್ದಾಗಿ, ಉಂಟಾಗಿದ್ದ ಬಿಕ್ಕಟ್ಟು ಬಗೆಹರಿದಿದೆ.

ಯುವ ಕಾಂಗೈ ಸಂವಿಧಾನದಲ್ಲಿ ಕಾರ್ಯಾಧ್ಯಕ್ಷರ ನೇಮಕ ಮಾಡುವಂತಿಲ್ಲ. ಈಗಿನ ಅಧ್ಯಕ್ಷರು ಚುನಾವಣೆಗೆ ನಿಂತಿರುವುದರಿಂದ ಈ ಹುದ್ದೆ ಸೃಷ್ಟಿಸುವ ಆಲೋಚನೆ ಇತ್ತು; ನೇಮಕ ಮಾಡಿರಲಿಲ್ಲ. ಸಮಿತಿಯ ಒಬ್ಬ ಪ್ರಧಾನ ಕಾರ್ಯದರ್ಶಿಯಾಗಿರುವ ದಿನೇಶ್ ಆ ಹುದ್ದೆಯಲ್ಲಿಯೇ ಮುಂದುವರಿಯುತ್ತಾರೆ ಎಂದು ಪ್ರದೇಶ ಕಾಂಗ್ರೆಸ್ ವಕ್ತಾರ ಎಂ.ವಿ. ರಾಜಶೇಖರನ್ ತಿಳಿಸಿದರು.

ಭಾರತದೊಡನೆ ಸ್ನೇಹ: ಪಾಕ್‌ ಮೇಲೆ ಒತ್ತಡಕ್ಕೆ ರಾವ್ ಕರೆ
ನವದೆಹಲಿ, ನ. 15 (ಯುಎನ್‌ಐ)–
ಭಾರತದ ಜತೆಗೆ ಪಾಕಿಸ್ತಾನವು ಉತ್ತಮ ಸಂಬಂಧವನ್ನು ಕಾಯ್ದುಕೊಳ್ಳುವಂತೆ ಪ್ರಭಾವ ಬೀರಲು ಅಂತರ್‌ರಾಷ್ಟ್ರೀಯ ಸಮುದಾಯವನ್ನು ಪ್ರಧಾನಿ ಪಿ.ವಿ. ನರಸಿಂಹ ರಾವ್ ಅವರು ಇಂದು ಆಗ್ರಹಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT